Homeದಲಿತ್ ಫೈಲ್ಸ್ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

- Advertisement -
- Advertisement -

ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ನಿರ್ವಹಿಸುತ್ತಿರುವ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನನ್ನು ಡಿಎಂಕೆ ಒಕ್ಕೂಟದ ಕಾರ್ಯದರ್ಶಿಯೊಬ್ಬರು ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಪೊಲೀಸರ ಪ್ರಕಾರ, ತಮಿಳುನಾಡಿನ ತಿರುಮಲೈಗಿರಿ (ಸೇಲಂ ಜಿಲ್ಲೆ)ಯಲ್ಲಿರುವ ಅರುಲ್ಮಿಗು ಪೆರಿಯ ಮಾರಿಯಮ್ಮನ್ ದೇವಸ್ಥಾನದಲ್ಲಿ ಗುರುವಾರ ಈ ಘಟನೆ ನಡೆದಿದೆ.

ಯುವಕರನ್ನು ನಿಂದಿಸುತ್ತಾ ವಿಡಿಯೊದಲ್ಲಿ ಸೆರೆಯಾಗಿರುವ ವ್ಯಕ್ತಿಯನ್ನು ಡಿಎಂಕೆ ಸೇಲಂ ಸೌತ್ ಯೂನಿಯನ್‌ನ ಕಾರ್ಯದರ್ಶಿ ಡಿ.ಮಾಣಿಕಂ ಎಂದು ಗುರುತಿಸಲಾಗಿದೆ.

ಯುವಕ ದೇವಸ್ಥಾನ ಪ್ರವೇಶಿಸಿದ ಬಳಿಕ ಆಯೋಜಿಸಲಾಗಿದ್ದ ಪಂಚಾಯತ್ ಸಭೆಯಲ್ಲಿ ಯುವಕ ಹಾಗೂ ಆತನ ತಂದೆಯ ವಿರುದ್ಧ ಮಾಣಿಕಂ ಅತ್ಯಂತ ನಿಂದನೀಯ ಮತ್ತು ಅವಹೇಳನಕಾರಿ ಪದಗಳನ್ನು ಬಳಸಿರುವುದು ಕಂಡುಬಂದಿದೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಯುವಕನ ಕುಟುಂಬದ ಯಾವುದೇ ಸದಸ್ಯರು ಗ್ರಾಮದಲ್ಲಿ ಉಳಿಯದಂತೆ ನೋಡಿಕೊಳ್ಳುವುದಾಗಿ ಡಿಎಂಕೆ ಪದಾಧಿಕಾರಿ ಬೆದರಿಕೆ ಹಾಕುತ್ತಿರುವುದು ಕಂಡುಬಂದಿದೆ.

ದೇವಾಲಯದಲ್ಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ಯುವಕನು ದೇವಾಲಯಕ್ಕೆ ಪ್ರವೇಶಿಸಿ ಗುರುವಾರ ದೇವರ ಆಶೀರ್ವಾದ ಪಡೆಯಲು ಗರ್ಭಗುಡಿಯ ಬಳಿ ತಲುಪಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ದೇವಾಲಯಕ್ಕೆ ಪ್ರವೇಶಿಸಿದ ಕೂಡಲೇ, ಹಿಂದೂಗಳ ಒಂದು ವಿಭಾಗವು ಜಗಳಕ್ಕೆ ಇಳಿಯಿತು. ನಂತರ ಘಟನೆಯ ಬಗ್ಗೆ ಸ್ಥಳೀಯ ಪಂಚಾಯತ್ ನಾಯಕನಾದ ಮಾಣಿಕ್ಕಮ್ ಅವರಿಗೆ ಈ ಗುಂಪು ತಿಳಿಸಿತು.

ದಲಿತರು ಆವರಣಕ್ಕೆ ಕಾಲಿಟ್ಟಿದ್ದರಿಂದ ಗ್ರಾಮದ ಹಲವಾರು ಜನರು ದೇವಸ್ಥಾನಕ್ಕೆ ಪ್ರವೇಶಿಸಲು ಇಷ್ಟಪಡುವುದಿಲ್ಲ ಎಂದು ಮಾಣಿಕ್ಕಂ ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಡಿಎಂಕೆ ಪಕ್ಷದ ಶಿಸ್ತು ಉಲ್ಲಂಘಿಸಿ ಪಕ್ಷಕ್ಕೆ ಅಪಖ್ಯಾತಿ ತಂದಿದ್ದಕ್ಕಾಗಿ ಮಾಣಿಕ್ಕಂ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈ ಮುರುಗನ್ ತಿಳಿಸಿದ್ದಾರೆ.

ಸೋಮವಾರ ಸೇಲಂನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಕಾರ್ಯಕಾರಿ ಇಮಾಯವರಂಬನ್, ಈ ಘಟನೆಯು ದಲಿತ ಸಮುದಾಯಕ್ಕೆ ತುಂಬಾ ನೋವನ್ನುಂಟು ಮಾಡಿದೆ ಎಂದಿದ್ದಾರೆ.

ಇದೀಗ ಅಮಾನತುಗೊಂಡಿರುವ ಡಿಎಂಕೆ ಕಾರ್ಯಕರ್ತನ ವಿರುದ್ಧ ಪೊಲೀಸರು ಮತ್ತು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಘಟನೆಯ ಬಗ್ಗೆ ಸಂತ್ರಸ್ತರಿಂದ ದೂರು ಸ್ವೀಕರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....