Homeಪುಸ್ತಕ ವಿಮರ್ಶೆಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ.

- Advertisement -
- Advertisement -

ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣಗಳು ಆರಂಭವಾದ ತೊಂಭತ್ತರ ದಶಕ ಬೌದ್ಧಿಕ ಚಿಂತನೆಯ ದೃಷ್ಟಿಯಿಂದಲೂ ಮಹತ್ವದ ಕಾಲಘಟ್ಟ. ಹಾಗೆಯೇ ಎಂಭತ್ತರ ದಶಕದ ನಂತರ ಕನ್ನಡದಂತಹ ಪ್ರಾದೇಶಿಕ ಭಾಷೆಗಳಲ್ಲಿ ವಸಾಹತೋತ್ತರ ಚಿಂತನೆಗಳು ಡಾಳಾಗಿ ಕಾಣಿಸಿಕೊಳ್ಳತೊಡಗಿದವು. ಸಾಹಿತ್ಯಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಬೌದ್ಧಿಕ ನಿರ್ವಸಹತೀಕರಣದ ಪರಿಕಲ್ಪನೆ ಕಾಣಿಸಿಕೊಂಡದ್ದು ಈ ಹಂತದಲ್ಲಿಯೇ. ಹಾಗೆ ನೋಡಿದರೆ ಆಫ್ರಿಕಾದ ಚಿಂತಕ ಥಿಯಾಂಗೊ ಗೂಗಿಯ ನಿರ್ವಸಹತೀಕರಣ ಚಿಂತನೆಯನ್ನು ರಹಮತ್ ತರೀಕರೆಯವರು ಸಂಗ್ರಹರೂಪದಲ್ಲಿ ತಂದದ್ದು ಬಹುಶಃ ಮೊದಲ ಪ್ರಯತ್ನಗಳಲ್ಲೊಂದು.

ಇಂಥ ಬೌದ್ಧಿಕ ನಿರ್ವಸಹತೀಕರಣದ ಯತ್ನ ಭಾರತೀಯ ಭಾಷೆಗಳಲ್ಲಿ ಎರಡು ನೆಲೆಯಲ್ಲಿ ಆಗಬೇಕಿತ್ತು. ಭಾಷಿಕವಾಗಿ ಪ್ರಾದೇಶಿಕ ಭಾಷೆಗಳು ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳ ಚಿಂತನೆಯಿಂದ ಮುಕ್ತವಾಗಿ ತನ್ನದೆ ಆದ ಚಿಂತನಾ ಪರಂಪರೆಯನ್ನು ಕಂಡುಕೊಳ್ಳಬೇಕಾಗಿತ್ತು. ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸಿಕೊಳ್ಳಬೇಕೆಂಬ ಚಿಂತನೆ ನಮ್ಮಲ್ಲಿ ಕಾಣಿಸಿಕೊಂಡದ್ದು ಈ ಹಿನ್ನೆಲೆಯಲ್ಲಿ. ಹಾಗೆಯೇ ಡಿ ಎನ್ ಶಂಕರಭಟ್ಟರು ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಕೃತಿ ಕೂಡ ಈ ಚಿಂತನೆಯ ಆದ್ಯ ಕೃತಿಗಳಲ್ಲೊಂದು ಎಂಬುದನ್ನು ಮರೆಯುವಂತಿಲ್ಲ.

ಕನ್ನಡದ ಸಾಹಿತ್ಯ ಮೀಮಾಂಸೆಯೆಂದರೆ ಅದೊಂದು ಅಸ್ಮಿತೆಯ ಹುಡುಕಾಟದ ಮಹಾಯಾನ. ಅಥವಾ ಬೇರೊಂದು ಮಾತಿನಲ್ಲಿ ಅದನ್ನು ಬಿಡುಗಡೆಯ ಕಥನವೆಂದು ಕರೆಯಬಹುದು. ರಹಮತ್ ತರೀಕೆರೆಯವರು ಕನ್ನಡ ಸಾಹಿತ್ಯ ಮೀಮಾಂಸೆಯನ್ನು ವ್ಯಾಖ್ಯಾನಿಸುವುದು ಗಮನಾರ್ಹವಾದದ್ದು. ಅವರ ದೃಷ್ಟಿಯಲ್ಲಿ ಸಾಹಿತ್ಯದ ಹುಟ್ಟಿನ ಪ್ರೇರಣೆಗಳು, ಅದು ಸೃಷ್ಟಿಯಾಗುವ ಕ್ರಮಗಳು, ಅಭಿವ್ಯಕ್ತಿಯಾಗುವ ಪ್ರಕಾರಗಳು, ಅದು ಭಾಷೆಯನ್ನು ಬಳಸುವ ವಿಧಾನ, ಅನುಸರಿಸುವ ಶೈಲಿ, ಅದನ್ನು ಅನುಸಂದಾನ ಮಾಡುವ ಜನ ಮತ್ತು ಸಂಸ್ಥೆಗಳು, ಸಮಾಜದ ಮೇಲಾಗುವ ಪರಿಣಾಮ ಇವೆಲ್ಲವನ್ನು ಕುರಿತ ತಾತ್ವಿಕ ಚಿಂತನೆಯ ಸಾಹಿತ್ಯ ಮೀಮಾಂಸೆಯಾಗಿದೆ. ಅದು ಒಂದು ಭಾಷಿಕ ಸಮುದಾಯವು ಕಾಲಕಾಲಕ್ಕೆ ಪಟ್ಟ ಪಾಡುಗಳ ಮೂಲಕ ಹಾದು ಬಂದ ಕಥನವಾಗಿದೆ.

ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸುವ ಪ್ರಯತ್ನಗಳು ಹಲವು ರೀತಿಯಲ್ಲಿ ಆಗಿವೆ. ಬೇಂದ್ರೇ ಕುರ್ತಕೋಟಿಯವರಲ್ಲಿ ಪಾಶ್ಚಾತ್ಯ ಸಾಹಿತ್ಯ ಚಿಂತನೆಯ ಕುರಿತು ಸಮರ್ಥನೀಯ ನಿರಾಕರಣೆಯಿದೆ. ಆದರೆ ಭಾರತೀಯ ಕಾವ್ಯ ಮೀಮಾಂಸೆಯ ಕುರಿತು ಇಂಥ ನಿರಾಕರಣೆ ಕಾಣುವುದಿಲ್ಲ. ಆದರೆ ಎಂಭತ್ತರ ದಶಕದ ನಂತರದ ಕನ್ನಡ ಸಾಹಿತ್ಯ ಚಿಂತನೆಯಲ್ಲಿ ಕೆ.ವಿ.ನಾರಾಯಣ, ಡಿ.ಆರ್. ನಾಗರಾಜ್, ನಟರಾಜ್ ಬೂದಾಳ್, ರಹಮತ್ ತರೀಕೆರೆಯವರು ಸಂಸ್ಕೃತ ಮತ್ತು ಪಾಶ್ಚಾತ್ಯ ಮೀಮಾಂಸೆಗಳೆರಡು ನಮ್ಮ ಚಿಂತನೆಗಳನ್ನು ಹೇಳಲಾರವು ಎಂಬ ನಿಲುವಿಗೆ ಬರುತ್ತಾರೆ. ಭಾರತೀಯ ಕಾವ್ಯ ಮೀಮಾಂಸೆಯ ಯಜಮಾನಿಕೆಯ ರಸದ ಪರಿಕಲ್ಪನೆಯನ್ನು ತಿರಸ್ಕರಿಸುತ್ತಾರೆ. ಆನಂದದ ಅನುಸಂಧಾನದ ವೈದಿಕ ಪರಿಕಲ್ಪನೆಯಾದ ರಸಕ್ಕೆ ವಿರುದ್ಧವಾಗಿ ದುಃಖಾನುಸಂಧಾನವನ್ನು ಹೇಳಿಕೊಟ್ಟ ಬೌದ್ಧ ಮೀಮಾಂಸೆಯನ್ನು ಮಂಡಿಸುತ್ತಾರೆ. ಹಾಗೆಯೇ ಏಕರಸದ ಸರಳ ಸ್ಥಿತಿಯ ಚಿಂತನೆಗೆ ರ‍್ಯಾಯವಾಗಿ ಜೈನ ಚಿಂತನೆಯಾದ ಅನೇಕಾಂತವಾದವನ್ನು ಹಾಗೂ ಅರಿವಿನ ಅನುಸಂಧಾನದ ವಚನ ಚಿಂತನೆಯನ್ನು ಮುನ್ನೆಲೆಗೆ ತರುತ್ತಾರೆ.

ಹೀಗೆ ಕನ್ನಡ ಸಾಹಿತ್ಯ ಮೀಮಾಂಸೆಯೆಂಬುದು ಬಹುಮುಖಿ ನೆಲೆಗಳಲ್ಲಿ ಕಟ್ಟಲ್ಪಡುತ್ತಿರುವ ಸಂದರ್ಭದಲ್ಲಿ ಡಾ.ರವಿಕುಮಾರ್ ನೀಹ ಅವರ ‘ದಲಿತ ಸಾಹಿತ್ಯ ಮೀಮಾಂಸೆ’ ಕೃತಿ ಪ್ರಕಟವಾಗಿದೆ. ಈ ಕೃತಿ ಕೆಲವು ಮುಖ್ಯ ಕಾರಣಗಳಿಂದ ಮುಖ್ಯವಾಗಿ ಕಾಣುತ್ತದೆ. ಈ ಕೃತಿಯಲ್ಲಿ ಇರುವ ಸೈದ್ಧಾಂತಿಕ ಸ್ಪಷ್ಟತೆಗಾಗಿ ಮಹತ್ವದ್ದಾಗಿ ಪರಿಗಣಿಸಬೇಕಾಗಿದೆ. ಕನ್ನಡ ಸಾಹಿತ್ಯ ಮೀಮಾಂಸೆಗೆ ಪರ್ಯಾಯವಾಗಿ ದಲಿತ ಸಾಹಿತ್ಯ ಮೀಮಾಂಸೆ ಹುಟ್ಟಿಕೊಂಡಿದೆ ಎಂಬ ನಿಲುವು ಈ ಅಧ್ಯಯನದಲ್ಲಿ ಇಲ್ಲ. ದಲಿತ ಸಾಹಿತ್ಯ ಮೀಮಾಂಸೆಯು ಕನ್ನಡ ಸಾಹಿತ್ಯ ಮೀಮಾಂಸೆಯ ಒಂದು ಭಾಗವೇ ಆಗಿದ್ದೂ, ಅದರ ಒಂದು ವಿಶಿಷ್ಟ ಭಾಗವಾಗಿ ರೂಪುಗೊಂಡಿದೆ ಎಂಬ ನಿಲುವು ಅವರಲ್ಲಿದೆ. ಹಾಗೆಯೆ ದಲಿತರ ಸಾಮಾಜಿಕ ಬದುಕು, ಸೌಲಭ್ಯ, ಕಸುಬು, ಅಭಿವ್ಯಕ್ತಿ, ಆಲೋಚನೆ, ಅನುಭವ, ಬಹುಮುಖತೆ, ಮೂಲಕವೇ ಮೀಮಾಂಸೆಯನ್ನು ಕಟ್ಟಿಕೊಳ್ಳಬೇಕೆನ್ನುವ ಹಂಬಲ ಅವರದು. ಜೊತೆಗೆ ದಲಿತ ಮೀಮಾಂಸೆಯೆನ್ನುವುದು ಒಂದು ಲೋಕದೃಷ್ಟಿಯಾದ್ದರಿಂದ ಬದುಕಿನ ವಿನ್ಯಾಸಗಳು ಬದಲಾದ ಹಾಗೆ ಲೋಕವನ್ನು ನೋಡುವ ನೋಟಕ್ರಮವು ಬದಲಾಗಬೇಕಾದದ್ದು ಸಹಜ ಹಾಗೂ ಅನಿವಾರ್ಯ ನಂಬಿಕೆ ಇಲ್ಲಿಯದು. ತಳವೂರಿದ ಕುರುಬ ಕಟುಕನಾದ ಎನ್ನುವ ನಿಸಾರರ ಕವನದ ಸಾಲು ಹೇಳುವುದು ಇದನ್ನೇ. ಯಾವುದೇ ಚಿಂತನೆ ಎಲ್ಲ ಕಾಲಕ್ಕೂ ಶಾಶ್ವತ ಮತ್ತು ಸಾರ್ವತ್ರಿಕ ಮತ್ತು ತ್ರಿಕಾಲಾ ಭಾದಿತ ಚಿಂತನೆಗಳನ್ನು ಮಾನ್ಯ ಮಾಡುವುದಿಲ್ಲ ಎಂಬ ಕಾರಣಕ್ಕೆ ಮಹತ್ವದ್ದಾಗಿದೆ.

ಡಾ.ರವಿಕುಮಾರ್ ನೀಹ

ದಲಿತ ಸಾಹಿತ್ಯ ಮೀಮಾಂಸೆಯನ್ನು ನಿರೂಪಿಸುವ ಸಂದರ್ಭದಲ್ಲಿ ‘ದಲಿತ’ ಪದ ಪಡೆದ ಹಲವು ಅರ್ಥ ಸ್ವರೂಪವನ್ನು ಗುರುತಿಸುವ ಕೆಲಸವನ್ನು ಕೃತಿ ಮಾಡಿದೆ. ಆರಂಭದಲ್ಲಿದ್ದ ಹಸಿವಿನ ಪ್ರಶ್ನೆ, ಅವಮಾನದ ಪ್ರಶ್ನೆಯನ್ನು ಹಾದು ಈಗ ಅಸ್ಮಿತೆಯ ಸ್ವರೂಪವನ್ನು ಪಡೆದುಕೊಂಡ ಬಗೆಯನ್ನು ವಿಶ್ಲೇಷಿಸಿದೆ. ಹಾಗೆಯೆ ದಲಿತ ಸಾಹಿತ್ಯ ಮೀಮಾಂಸೆಯ ಪರಂಪರೆಯನ್ನು ಕಟ್ಟುವ ಸಂದರ್ಭದಲ್ಲಿ ಅದರ ಆರಂಭವನ್ನು ಡಿ ಆರ್ ನಾಗರಾಜ್ ಅವರ ಪ್ಲೇಮಿಂಗ್ ಪೀಟ್ ಕೃತಿಯ ಮೂಲಕ ಗುರುತಿಸುತ್ತದೆ. ನಂತರದ ಕಾಲಘಟ್ಟದಲ್ಲಿ ದೇವಯ್ಯ ಹರವೆ, ಪ್ರೊ.ಅರವಿಂದ ಮಾಲಗತ್ತಿ, ಮೊಗಳ್ಳಿ ಗಣೇಶ್, ಬಿ.ಎಂ. ಪುಟ್ಟಯ್ಯನವರು ವಿಸ್ತರಿಸಿದ ಪರಂಪರೆಯನ್ನು ವಿಸ್ತರಿಸಿದೆ. ಆದರೆ ಇಲ್ಲಿ ವಿಶ್ಲೇಷಿಸುವ ಕ್ರಮ ಎಂಭತ್ತರ ದಶಕದ ದಲಿತ ಸಾಹಿತ್ಯಕ್ಕೆ ಸೀಮಿತಗೊಂಡಿರುವುದು ಗಂಭೀರವಾದ ಮಿತಿಯೆನಿಸುತ್ತದೆ. ದಲಿತ ಸಾಹಿತ್ಯ ಆರಂಭವಾಗುವ ಮೊದಲಿನ ಲಿಖಿತ ಮತ್ತು ಮೌಖಿಕ ಪರಂಪರೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದರೆ ಕೃತಿಯ ವ್ಯಾಪ್ತಿ ಹೆಚ್ಚುತ್ತಿತ್ತು. ಇಂದಿನ ದಲಿತ ಸಾಹಿತ್ಯ ಸಾಮಾಜಿಕ ಕ್ರೋಧದ ಮಾದರಿಯ ಜೊತೆಗೆ ಆಧ್ಯಾತ್ಮಿಕ ಹುಡುಕಾಟದ ಮಾದರಿಯನ್ನು ಸಹ ತೀವ್ರವಾಗಿ ಅಭಿವ್ಯಕ್ತಿಸುವುದರಿಂದ ಆಧ್ಯಾತ್ಮಿಕ ದಂಗೆಯ ನಾಯಕರಾದ ಮಂಟೇಸ್ವಾಮಿ, ಮಾದಪ್ಪನವರೆಗೆ ಈ ಪರಂಪರೆಯನ್ನು ವಿಸ್ತರಿಸುವ ಸಾಧ್ಯತೆಯಿತ್ತು.

ದಲಿತ ಸಾಹಿತ್ಯ ಮೀಮಾಂಸೆ ಇನ್ನೊಂದು ನೆಲೆಯಲ್ಲಿ ನನಗೆ ಮುಖ್ಯವೆನಿಸುತ್ತದೆ. ಈ ಮೀಮಾಂಸೆ ತನ್ನ ಸ್ವರೂಪದಲ್ಲಿಯೇ ಒಳಗೊಳ್ಳುವಿಕೆಯ ನೆಲೆಯನ್ನು(inclusive) ಒಳಗೊಂಡಿದೆ. ಹಾಗೆಯೇ ಪ್ರಖರ ರಾಜಕೀಯ ಚಿಂತನೆಯನ್ನು ತನ್ನ ಭಿತ್ತಿಯಾಗಿಸಿಕೊಂಡಿದೆ. ವೈಯಕ್ತಿಕವು ರಾಜಕೀಯವೇ ಆಗಿರುವ ಇಂದಿನ ಕಾಲಘಟ್ಟದಲ್ಲಿ ಸ್ಪಷ್ಟ ರಾಜಕೀಯ ಚಿಂತನೆಯನ್ನು ಹೊಂದಿರುವುದು ಅಗತ್ಯವಾಗಿದೆ. ಹಾಗೆಯೆ ದಲಿತ ಚಿಂತನೆಯೊಂದಿಗೆ ಬೆಸೆದುಕೊಂಡಿರುವ ಬೌದ್ಧದರ್ಶನವನ್ನು ಚರ್ಚಿಸುವುದರ ಮೂಲಕ, ಜೊತೆಗೆ ಅಲೆಮಾರಿಗಳು ಲೈಂಗಿಕ ಅಲ್ಪಸಂಖ್ಯಾತರು, ಬಿಕ್ಷುಕರ ಜಗತ್ತುಗಳ ಮೂಲಕ ಅನಾವರಣಗೊಳ್ಳುತ್ತಿರುವ ಕಲಾಲೋಕವನ್ನು ತನ್ನ ವ್ಯಾಪ್ತಿಗೆ ತಂದುಕೊಂಡಿದೆ.

ಡಾ.ಪ್ರಕಾಶ್ ಬಡವನಹಳ್ಳಿ

ಈ ಕೃತಿಯ ಕುಲಕಥನ ಮೀಮಾಂಸೆ ನವೀನ ರೀತಿಯದ್ದಾಗಿದೆ. ಈಗಾಗಲೇ ಸಾಹಿತ್ಯ ಲೋಕದಲ್ಲಿ ಪ್ರಚಲಿತವಾಗಿರುವ ಖಂಡಕಾವ್ಯಗಳಿಗಿಂತ ಭಿನ್ನವಾಗಿ ಕುಲಕಥನಗಳನ್ನು ನೋಡಬೇಕೆಂದು ಗಟ್ಟಿಯಾಗಿ ವಾದಿಸುತ್ತದೆ. ಈ ಕಾವ್ಯಗಳು ಸಾಮಾಜಿಕ ಆಕ್ರೋಶದ ಮಾದರಿಗಿಂತ ಭಿನ್ನವಾಗಿ ಸ್ವಾಭಿಮಾನ ಸಮಾನತೆಗಳನ್ನು ತಮ್ಮ ಕುಲಪುರಾಣಗಳಲ್ಲಿ ಹೆಕ್ಕಿ ತೆಗೆಯುವ ಮಾದರಿಯನ್ನು ಪಠ್ಯಗಳ ಮೂಲಕವೇ ವಿಶ್ಲೇಷಿಸುವ ಕ್ರಮ ಮಹತ್ವದ್ದಾಗಿದೆ. ಇಷ್ಟಾಗಿ ನಮ್ಮ ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ ಎಂಬ ಸೂಕ್ಷ್ಮತೆ ಇರುವ ದಲಿತ ಸಾಹಿತ್ಯ ಮೀಮಾಂಸೆ ಮಹತ್ವದ ಕೃತಿಯಾಗಿದೆ.

  • ಡಾ.ಪ್ರಕಾಶ್ ಬಡವನಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...