Homeಪುಸ್ತಕ ವಿಮರ್ಶೆಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ.

- Advertisement -
- Advertisement -

ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣಗಳು ಆರಂಭವಾದ ತೊಂಭತ್ತರ ದಶಕ ಬೌದ್ಧಿಕ ಚಿಂತನೆಯ ದೃಷ್ಟಿಯಿಂದಲೂ ಮಹತ್ವದ ಕಾಲಘಟ್ಟ. ಹಾಗೆಯೇ ಎಂಭತ್ತರ ದಶಕದ ನಂತರ ಕನ್ನಡದಂತಹ ಪ್ರಾದೇಶಿಕ ಭಾಷೆಗಳಲ್ಲಿ ವಸಾಹತೋತ್ತರ ಚಿಂತನೆಗಳು ಡಾಳಾಗಿ ಕಾಣಿಸಿಕೊಳ್ಳತೊಡಗಿದವು. ಸಾಹಿತ್ಯಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಬೌದ್ಧಿಕ ನಿರ್ವಸಹತೀಕರಣದ ಪರಿಕಲ್ಪನೆ ಕಾಣಿಸಿಕೊಂಡದ್ದು ಈ ಹಂತದಲ್ಲಿಯೇ. ಹಾಗೆ ನೋಡಿದರೆ ಆಫ್ರಿಕಾದ ಚಿಂತಕ ಥಿಯಾಂಗೊ ಗೂಗಿಯ ನಿರ್ವಸಹತೀಕರಣ ಚಿಂತನೆಯನ್ನು ರಹಮತ್ ತರೀಕರೆಯವರು ಸಂಗ್ರಹರೂಪದಲ್ಲಿ ತಂದದ್ದು ಬಹುಶಃ ಮೊದಲ ಪ್ರಯತ್ನಗಳಲ್ಲೊಂದು.

ಇಂಥ ಬೌದ್ಧಿಕ ನಿರ್ವಸಹತೀಕರಣದ ಯತ್ನ ಭಾರತೀಯ ಭಾಷೆಗಳಲ್ಲಿ ಎರಡು ನೆಲೆಯಲ್ಲಿ ಆಗಬೇಕಿತ್ತು. ಭಾಷಿಕವಾಗಿ ಪ್ರಾದೇಶಿಕ ಭಾಷೆಗಳು ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳ ಚಿಂತನೆಯಿಂದ ಮುಕ್ತವಾಗಿ ತನ್ನದೆ ಆದ ಚಿಂತನಾ ಪರಂಪರೆಯನ್ನು ಕಂಡುಕೊಳ್ಳಬೇಕಾಗಿತ್ತು. ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸಿಕೊಳ್ಳಬೇಕೆಂಬ ಚಿಂತನೆ ನಮ್ಮಲ್ಲಿ ಕಾಣಿಸಿಕೊಂಡದ್ದು ಈ ಹಿನ್ನೆಲೆಯಲ್ಲಿ. ಹಾಗೆಯೇ ಡಿ ಎನ್ ಶಂಕರಭಟ್ಟರು ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಕೃತಿ ಕೂಡ ಈ ಚಿಂತನೆಯ ಆದ್ಯ ಕೃತಿಗಳಲ್ಲೊಂದು ಎಂಬುದನ್ನು ಮರೆಯುವಂತಿಲ್ಲ.

ಕನ್ನಡದ ಸಾಹಿತ್ಯ ಮೀಮಾಂಸೆಯೆಂದರೆ ಅದೊಂದು ಅಸ್ಮಿತೆಯ ಹುಡುಕಾಟದ ಮಹಾಯಾನ. ಅಥವಾ ಬೇರೊಂದು ಮಾತಿನಲ್ಲಿ ಅದನ್ನು ಬಿಡುಗಡೆಯ ಕಥನವೆಂದು ಕರೆಯಬಹುದು. ರಹಮತ್ ತರೀಕೆರೆಯವರು ಕನ್ನಡ ಸಾಹಿತ್ಯ ಮೀಮಾಂಸೆಯನ್ನು ವ್ಯಾಖ್ಯಾನಿಸುವುದು ಗಮನಾರ್ಹವಾದದ್ದು. ಅವರ ದೃಷ್ಟಿಯಲ್ಲಿ ಸಾಹಿತ್ಯದ ಹುಟ್ಟಿನ ಪ್ರೇರಣೆಗಳು, ಅದು ಸೃಷ್ಟಿಯಾಗುವ ಕ್ರಮಗಳು, ಅಭಿವ್ಯಕ್ತಿಯಾಗುವ ಪ್ರಕಾರಗಳು, ಅದು ಭಾಷೆಯನ್ನು ಬಳಸುವ ವಿಧಾನ, ಅನುಸರಿಸುವ ಶೈಲಿ, ಅದನ್ನು ಅನುಸಂದಾನ ಮಾಡುವ ಜನ ಮತ್ತು ಸಂಸ್ಥೆಗಳು, ಸಮಾಜದ ಮೇಲಾಗುವ ಪರಿಣಾಮ ಇವೆಲ್ಲವನ್ನು ಕುರಿತ ತಾತ್ವಿಕ ಚಿಂತನೆಯ ಸಾಹಿತ್ಯ ಮೀಮಾಂಸೆಯಾಗಿದೆ. ಅದು ಒಂದು ಭಾಷಿಕ ಸಮುದಾಯವು ಕಾಲಕಾಲಕ್ಕೆ ಪಟ್ಟ ಪಾಡುಗಳ ಮೂಲಕ ಹಾದು ಬಂದ ಕಥನವಾಗಿದೆ.

ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸುವ ಪ್ರಯತ್ನಗಳು ಹಲವು ರೀತಿಯಲ್ಲಿ ಆಗಿವೆ. ಬೇಂದ್ರೇ ಕುರ್ತಕೋಟಿಯವರಲ್ಲಿ ಪಾಶ್ಚಾತ್ಯ ಸಾಹಿತ್ಯ ಚಿಂತನೆಯ ಕುರಿತು ಸಮರ್ಥನೀಯ ನಿರಾಕರಣೆಯಿದೆ. ಆದರೆ ಭಾರತೀಯ ಕಾವ್ಯ ಮೀಮಾಂಸೆಯ ಕುರಿತು ಇಂಥ ನಿರಾಕರಣೆ ಕಾಣುವುದಿಲ್ಲ. ಆದರೆ ಎಂಭತ್ತರ ದಶಕದ ನಂತರದ ಕನ್ನಡ ಸಾಹಿತ್ಯ ಚಿಂತನೆಯಲ್ಲಿ ಕೆ.ವಿ.ನಾರಾಯಣ, ಡಿ.ಆರ್. ನಾಗರಾಜ್, ನಟರಾಜ್ ಬೂದಾಳ್, ರಹಮತ್ ತರೀಕೆರೆಯವರು ಸಂಸ್ಕೃತ ಮತ್ತು ಪಾಶ್ಚಾತ್ಯ ಮೀಮಾಂಸೆಗಳೆರಡು ನಮ್ಮ ಚಿಂತನೆಗಳನ್ನು ಹೇಳಲಾರವು ಎಂಬ ನಿಲುವಿಗೆ ಬರುತ್ತಾರೆ. ಭಾರತೀಯ ಕಾವ್ಯ ಮೀಮಾಂಸೆಯ ಯಜಮಾನಿಕೆಯ ರಸದ ಪರಿಕಲ್ಪನೆಯನ್ನು ತಿರಸ್ಕರಿಸುತ್ತಾರೆ. ಆನಂದದ ಅನುಸಂಧಾನದ ವೈದಿಕ ಪರಿಕಲ್ಪನೆಯಾದ ರಸಕ್ಕೆ ವಿರುದ್ಧವಾಗಿ ದುಃಖಾನುಸಂಧಾನವನ್ನು ಹೇಳಿಕೊಟ್ಟ ಬೌದ್ಧ ಮೀಮಾಂಸೆಯನ್ನು ಮಂಡಿಸುತ್ತಾರೆ. ಹಾಗೆಯೇ ಏಕರಸದ ಸರಳ ಸ್ಥಿತಿಯ ಚಿಂತನೆಗೆ ರ‍್ಯಾಯವಾಗಿ ಜೈನ ಚಿಂತನೆಯಾದ ಅನೇಕಾಂತವಾದವನ್ನು ಹಾಗೂ ಅರಿವಿನ ಅನುಸಂಧಾನದ ವಚನ ಚಿಂತನೆಯನ್ನು ಮುನ್ನೆಲೆಗೆ ತರುತ್ತಾರೆ.

ಹೀಗೆ ಕನ್ನಡ ಸಾಹಿತ್ಯ ಮೀಮಾಂಸೆಯೆಂಬುದು ಬಹುಮುಖಿ ನೆಲೆಗಳಲ್ಲಿ ಕಟ್ಟಲ್ಪಡುತ್ತಿರುವ ಸಂದರ್ಭದಲ್ಲಿ ಡಾ.ರವಿಕುಮಾರ್ ನೀಹ ಅವರ ‘ದಲಿತ ಸಾಹಿತ್ಯ ಮೀಮಾಂಸೆ’ ಕೃತಿ ಪ್ರಕಟವಾಗಿದೆ. ಈ ಕೃತಿ ಕೆಲವು ಮುಖ್ಯ ಕಾರಣಗಳಿಂದ ಮುಖ್ಯವಾಗಿ ಕಾಣುತ್ತದೆ. ಈ ಕೃತಿಯಲ್ಲಿ ಇರುವ ಸೈದ್ಧಾಂತಿಕ ಸ್ಪಷ್ಟತೆಗಾಗಿ ಮಹತ್ವದ್ದಾಗಿ ಪರಿಗಣಿಸಬೇಕಾಗಿದೆ. ಕನ್ನಡ ಸಾಹಿತ್ಯ ಮೀಮಾಂಸೆಗೆ ಪರ್ಯಾಯವಾಗಿ ದಲಿತ ಸಾಹಿತ್ಯ ಮೀಮಾಂಸೆ ಹುಟ್ಟಿಕೊಂಡಿದೆ ಎಂಬ ನಿಲುವು ಈ ಅಧ್ಯಯನದಲ್ಲಿ ಇಲ್ಲ. ದಲಿತ ಸಾಹಿತ್ಯ ಮೀಮಾಂಸೆಯು ಕನ್ನಡ ಸಾಹಿತ್ಯ ಮೀಮಾಂಸೆಯ ಒಂದು ಭಾಗವೇ ಆಗಿದ್ದೂ, ಅದರ ಒಂದು ವಿಶಿಷ್ಟ ಭಾಗವಾಗಿ ರೂಪುಗೊಂಡಿದೆ ಎಂಬ ನಿಲುವು ಅವರಲ್ಲಿದೆ. ಹಾಗೆಯೆ ದಲಿತರ ಸಾಮಾಜಿಕ ಬದುಕು, ಸೌಲಭ್ಯ, ಕಸುಬು, ಅಭಿವ್ಯಕ್ತಿ, ಆಲೋಚನೆ, ಅನುಭವ, ಬಹುಮುಖತೆ, ಮೂಲಕವೇ ಮೀಮಾಂಸೆಯನ್ನು ಕಟ್ಟಿಕೊಳ್ಳಬೇಕೆನ್ನುವ ಹಂಬಲ ಅವರದು. ಜೊತೆಗೆ ದಲಿತ ಮೀಮಾಂಸೆಯೆನ್ನುವುದು ಒಂದು ಲೋಕದೃಷ್ಟಿಯಾದ್ದರಿಂದ ಬದುಕಿನ ವಿನ್ಯಾಸಗಳು ಬದಲಾದ ಹಾಗೆ ಲೋಕವನ್ನು ನೋಡುವ ನೋಟಕ್ರಮವು ಬದಲಾಗಬೇಕಾದದ್ದು ಸಹಜ ಹಾಗೂ ಅನಿವಾರ್ಯ ನಂಬಿಕೆ ಇಲ್ಲಿಯದು. ತಳವೂರಿದ ಕುರುಬ ಕಟುಕನಾದ ಎನ್ನುವ ನಿಸಾರರ ಕವನದ ಸಾಲು ಹೇಳುವುದು ಇದನ್ನೇ. ಯಾವುದೇ ಚಿಂತನೆ ಎಲ್ಲ ಕಾಲಕ್ಕೂ ಶಾಶ್ವತ ಮತ್ತು ಸಾರ್ವತ್ರಿಕ ಮತ್ತು ತ್ರಿಕಾಲಾ ಭಾದಿತ ಚಿಂತನೆಗಳನ್ನು ಮಾನ್ಯ ಮಾಡುವುದಿಲ್ಲ ಎಂಬ ಕಾರಣಕ್ಕೆ ಮಹತ್ವದ್ದಾಗಿದೆ.

ಡಾ.ರವಿಕುಮಾರ್ ನೀಹ

ದಲಿತ ಸಾಹಿತ್ಯ ಮೀಮಾಂಸೆಯನ್ನು ನಿರೂಪಿಸುವ ಸಂದರ್ಭದಲ್ಲಿ ‘ದಲಿತ’ ಪದ ಪಡೆದ ಹಲವು ಅರ್ಥ ಸ್ವರೂಪವನ್ನು ಗುರುತಿಸುವ ಕೆಲಸವನ್ನು ಕೃತಿ ಮಾಡಿದೆ. ಆರಂಭದಲ್ಲಿದ್ದ ಹಸಿವಿನ ಪ್ರಶ್ನೆ, ಅವಮಾನದ ಪ್ರಶ್ನೆಯನ್ನು ಹಾದು ಈಗ ಅಸ್ಮಿತೆಯ ಸ್ವರೂಪವನ್ನು ಪಡೆದುಕೊಂಡ ಬಗೆಯನ್ನು ವಿಶ್ಲೇಷಿಸಿದೆ. ಹಾಗೆಯೆ ದಲಿತ ಸಾಹಿತ್ಯ ಮೀಮಾಂಸೆಯ ಪರಂಪರೆಯನ್ನು ಕಟ್ಟುವ ಸಂದರ್ಭದಲ್ಲಿ ಅದರ ಆರಂಭವನ್ನು ಡಿ ಆರ್ ನಾಗರಾಜ್ ಅವರ ಪ್ಲೇಮಿಂಗ್ ಪೀಟ್ ಕೃತಿಯ ಮೂಲಕ ಗುರುತಿಸುತ್ತದೆ. ನಂತರದ ಕಾಲಘಟ್ಟದಲ್ಲಿ ದೇವಯ್ಯ ಹರವೆ, ಪ್ರೊ.ಅರವಿಂದ ಮಾಲಗತ್ತಿ, ಮೊಗಳ್ಳಿ ಗಣೇಶ್, ಬಿ.ಎಂ. ಪುಟ್ಟಯ್ಯನವರು ವಿಸ್ತರಿಸಿದ ಪರಂಪರೆಯನ್ನು ವಿಸ್ತರಿಸಿದೆ. ಆದರೆ ಇಲ್ಲಿ ವಿಶ್ಲೇಷಿಸುವ ಕ್ರಮ ಎಂಭತ್ತರ ದಶಕದ ದಲಿತ ಸಾಹಿತ್ಯಕ್ಕೆ ಸೀಮಿತಗೊಂಡಿರುವುದು ಗಂಭೀರವಾದ ಮಿತಿಯೆನಿಸುತ್ತದೆ. ದಲಿತ ಸಾಹಿತ್ಯ ಆರಂಭವಾಗುವ ಮೊದಲಿನ ಲಿಖಿತ ಮತ್ತು ಮೌಖಿಕ ಪರಂಪರೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದರೆ ಕೃತಿಯ ವ್ಯಾಪ್ತಿ ಹೆಚ್ಚುತ್ತಿತ್ತು. ಇಂದಿನ ದಲಿತ ಸಾಹಿತ್ಯ ಸಾಮಾಜಿಕ ಕ್ರೋಧದ ಮಾದರಿಯ ಜೊತೆಗೆ ಆಧ್ಯಾತ್ಮಿಕ ಹುಡುಕಾಟದ ಮಾದರಿಯನ್ನು ಸಹ ತೀವ್ರವಾಗಿ ಅಭಿವ್ಯಕ್ತಿಸುವುದರಿಂದ ಆಧ್ಯಾತ್ಮಿಕ ದಂಗೆಯ ನಾಯಕರಾದ ಮಂಟೇಸ್ವಾಮಿ, ಮಾದಪ್ಪನವರೆಗೆ ಈ ಪರಂಪರೆಯನ್ನು ವಿಸ್ತರಿಸುವ ಸಾಧ್ಯತೆಯಿತ್ತು.

ದಲಿತ ಸಾಹಿತ್ಯ ಮೀಮಾಂಸೆ ಇನ್ನೊಂದು ನೆಲೆಯಲ್ಲಿ ನನಗೆ ಮುಖ್ಯವೆನಿಸುತ್ತದೆ. ಈ ಮೀಮಾಂಸೆ ತನ್ನ ಸ್ವರೂಪದಲ್ಲಿಯೇ ಒಳಗೊಳ್ಳುವಿಕೆಯ ನೆಲೆಯನ್ನು(inclusive) ಒಳಗೊಂಡಿದೆ. ಹಾಗೆಯೇ ಪ್ರಖರ ರಾಜಕೀಯ ಚಿಂತನೆಯನ್ನು ತನ್ನ ಭಿತ್ತಿಯಾಗಿಸಿಕೊಂಡಿದೆ. ವೈಯಕ್ತಿಕವು ರಾಜಕೀಯವೇ ಆಗಿರುವ ಇಂದಿನ ಕಾಲಘಟ್ಟದಲ್ಲಿ ಸ್ಪಷ್ಟ ರಾಜಕೀಯ ಚಿಂತನೆಯನ್ನು ಹೊಂದಿರುವುದು ಅಗತ್ಯವಾಗಿದೆ. ಹಾಗೆಯೆ ದಲಿತ ಚಿಂತನೆಯೊಂದಿಗೆ ಬೆಸೆದುಕೊಂಡಿರುವ ಬೌದ್ಧದರ್ಶನವನ್ನು ಚರ್ಚಿಸುವುದರ ಮೂಲಕ, ಜೊತೆಗೆ ಅಲೆಮಾರಿಗಳು ಲೈಂಗಿಕ ಅಲ್ಪಸಂಖ್ಯಾತರು, ಬಿಕ್ಷುಕರ ಜಗತ್ತುಗಳ ಮೂಲಕ ಅನಾವರಣಗೊಳ್ಳುತ್ತಿರುವ ಕಲಾಲೋಕವನ್ನು ತನ್ನ ವ್ಯಾಪ್ತಿಗೆ ತಂದುಕೊಂಡಿದೆ.

ಡಾ.ಪ್ರಕಾಶ್ ಬಡವನಹಳ್ಳಿ

ಈ ಕೃತಿಯ ಕುಲಕಥನ ಮೀಮಾಂಸೆ ನವೀನ ರೀತಿಯದ್ದಾಗಿದೆ. ಈಗಾಗಲೇ ಸಾಹಿತ್ಯ ಲೋಕದಲ್ಲಿ ಪ್ರಚಲಿತವಾಗಿರುವ ಖಂಡಕಾವ್ಯಗಳಿಗಿಂತ ಭಿನ್ನವಾಗಿ ಕುಲಕಥನಗಳನ್ನು ನೋಡಬೇಕೆಂದು ಗಟ್ಟಿಯಾಗಿ ವಾದಿಸುತ್ತದೆ. ಈ ಕಾವ್ಯಗಳು ಸಾಮಾಜಿಕ ಆಕ್ರೋಶದ ಮಾದರಿಗಿಂತ ಭಿನ್ನವಾಗಿ ಸ್ವಾಭಿಮಾನ ಸಮಾನತೆಗಳನ್ನು ತಮ್ಮ ಕುಲಪುರಾಣಗಳಲ್ಲಿ ಹೆಕ್ಕಿ ತೆಗೆಯುವ ಮಾದರಿಯನ್ನು ಪಠ್ಯಗಳ ಮೂಲಕವೇ ವಿಶ್ಲೇಷಿಸುವ ಕ್ರಮ ಮಹತ್ವದ್ದಾಗಿದೆ. ಇಷ್ಟಾಗಿ ನಮ್ಮ ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ ಎಂಬ ಸೂಕ್ಷ್ಮತೆ ಇರುವ ದಲಿತ ಸಾಹಿತ್ಯ ಮೀಮಾಂಸೆ ಮಹತ್ವದ ಕೃತಿಯಾಗಿದೆ.

  • ಡಾ.ಪ್ರಕಾಶ್ ಬಡವನಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...