Homeಪುಸ್ತಕ ವಿಮರ್ಶೆಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ.

- Advertisement -
- Advertisement -

ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣಗಳು ಆರಂಭವಾದ ತೊಂಭತ್ತರ ದಶಕ ಬೌದ್ಧಿಕ ಚಿಂತನೆಯ ದೃಷ್ಟಿಯಿಂದಲೂ ಮಹತ್ವದ ಕಾಲಘಟ್ಟ. ಹಾಗೆಯೇ ಎಂಭತ್ತರ ದಶಕದ ನಂತರ ಕನ್ನಡದಂತಹ ಪ್ರಾದೇಶಿಕ ಭಾಷೆಗಳಲ್ಲಿ ವಸಾಹತೋತ್ತರ ಚಿಂತನೆಗಳು ಡಾಳಾಗಿ ಕಾಣಿಸಿಕೊಳ್ಳತೊಡಗಿದವು. ಸಾಹಿತ್ಯಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಬೌದ್ಧಿಕ ನಿರ್ವಸಹತೀಕರಣದ ಪರಿಕಲ್ಪನೆ ಕಾಣಿಸಿಕೊಂಡದ್ದು ಈ ಹಂತದಲ್ಲಿಯೇ. ಹಾಗೆ ನೋಡಿದರೆ ಆಫ್ರಿಕಾದ ಚಿಂತಕ ಥಿಯಾಂಗೊ ಗೂಗಿಯ ನಿರ್ವಸಹತೀಕರಣ ಚಿಂತನೆಯನ್ನು ರಹಮತ್ ತರೀಕರೆಯವರು ಸಂಗ್ರಹರೂಪದಲ್ಲಿ ತಂದದ್ದು ಬಹುಶಃ ಮೊದಲ ಪ್ರಯತ್ನಗಳಲ್ಲೊಂದು.

ಇಂಥ ಬೌದ್ಧಿಕ ನಿರ್ವಸಹತೀಕರಣದ ಯತ್ನ ಭಾರತೀಯ ಭಾಷೆಗಳಲ್ಲಿ ಎರಡು ನೆಲೆಯಲ್ಲಿ ಆಗಬೇಕಿತ್ತು. ಭಾಷಿಕವಾಗಿ ಪ್ರಾದೇಶಿಕ ಭಾಷೆಗಳು ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳ ಚಿಂತನೆಯಿಂದ ಮುಕ್ತವಾಗಿ ತನ್ನದೆ ಆದ ಚಿಂತನಾ ಪರಂಪರೆಯನ್ನು ಕಂಡುಕೊಳ್ಳಬೇಕಾಗಿತ್ತು. ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸಿಕೊಳ್ಳಬೇಕೆಂಬ ಚಿಂತನೆ ನಮ್ಮಲ್ಲಿ ಕಾಣಿಸಿಕೊಂಡದ್ದು ಈ ಹಿನ್ನೆಲೆಯಲ್ಲಿ. ಹಾಗೆಯೇ ಡಿ ಎನ್ ಶಂಕರಭಟ್ಟರು ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಕೃತಿ ಕೂಡ ಈ ಚಿಂತನೆಯ ಆದ್ಯ ಕೃತಿಗಳಲ್ಲೊಂದು ಎಂಬುದನ್ನು ಮರೆಯುವಂತಿಲ್ಲ.

ಕನ್ನಡದ ಸಾಹಿತ್ಯ ಮೀಮಾಂಸೆಯೆಂದರೆ ಅದೊಂದು ಅಸ್ಮಿತೆಯ ಹುಡುಕಾಟದ ಮಹಾಯಾನ. ಅಥವಾ ಬೇರೊಂದು ಮಾತಿನಲ್ಲಿ ಅದನ್ನು ಬಿಡುಗಡೆಯ ಕಥನವೆಂದು ಕರೆಯಬಹುದು. ರಹಮತ್ ತರೀಕೆರೆಯವರು ಕನ್ನಡ ಸಾಹಿತ್ಯ ಮೀಮಾಂಸೆಯನ್ನು ವ್ಯಾಖ್ಯಾನಿಸುವುದು ಗಮನಾರ್ಹವಾದದ್ದು. ಅವರ ದೃಷ್ಟಿಯಲ್ಲಿ ಸಾಹಿತ್ಯದ ಹುಟ್ಟಿನ ಪ್ರೇರಣೆಗಳು, ಅದು ಸೃಷ್ಟಿಯಾಗುವ ಕ್ರಮಗಳು, ಅಭಿವ್ಯಕ್ತಿಯಾಗುವ ಪ್ರಕಾರಗಳು, ಅದು ಭಾಷೆಯನ್ನು ಬಳಸುವ ವಿಧಾನ, ಅನುಸರಿಸುವ ಶೈಲಿ, ಅದನ್ನು ಅನುಸಂದಾನ ಮಾಡುವ ಜನ ಮತ್ತು ಸಂಸ್ಥೆಗಳು, ಸಮಾಜದ ಮೇಲಾಗುವ ಪರಿಣಾಮ ಇವೆಲ್ಲವನ್ನು ಕುರಿತ ತಾತ್ವಿಕ ಚಿಂತನೆಯ ಸಾಹಿತ್ಯ ಮೀಮಾಂಸೆಯಾಗಿದೆ. ಅದು ಒಂದು ಭಾಷಿಕ ಸಮುದಾಯವು ಕಾಲಕಾಲಕ್ಕೆ ಪಟ್ಟ ಪಾಡುಗಳ ಮೂಲಕ ಹಾದು ಬಂದ ಕಥನವಾಗಿದೆ.

ಕನ್ನಡ ಸಾಹಿತ್ಯ ಮೀಮಾಂಸೆಯನ್ನು ರೂಪಿಸುವ ಪ್ರಯತ್ನಗಳು ಹಲವು ರೀತಿಯಲ್ಲಿ ಆಗಿವೆ. ಬೇಂದ್ರೇ ಕುರ್ತಕೋಟಿಯವರಲ್ಲಿ ಪಾಶ್ಚಾತ್ಯ ಸಾಹಿತ್ಯ ಚಿಂತನೆಯ ಕುರಿತು ಸಮರ್ಥನೀಯ ನಿರಾಕರಣೆಯಿದೆ. ಆದರೆ ಭಾರತೀಯ ಕಾವ್ಯ ಮೀಮಾಂಸೆಯ ಕುರಿತು ಇಂಥ ನಿರಾಕರಣೆ ಕಾಣುವುದಿಲ್ಲ. ಆದರೆ ಎಂಭತ್ತರ ದಶಕದ ನಂತರದ ಕನ್ನಡ ಸಾಹಿತ್ಯ ಚಿಂತನೆಯಲ್ಲಿ ಕೆ.ವಿ.ನಾರಾಯಣ, ಡಿ.ಆರ್. ನಾಗರಾಜ್, ನಟರಾಜ್ ಬೂದಾಳ್, ರಹಮತ್ ತರೀಕೆರೆಯವರು ಸಂಸ್ಕೃತ ಮತ್ತು ಪಾಶ್ಚಾತ್ಯ ಮೀಮಾಂಸೆಗಳೆರಡು ನಮ್ಮ ಚಿಂತನೆಗಳನ್ನು ಹೇಳಲಾರವು ಎಂಬ ನಿಲುವಿಗೆ ಬರುತ್ತಾರೆ. ಭಾರತೀಯ ಕಾವ್ಯ ಮೀಮಾಂಸೆಯ ಯಜಮಾನಿಕೆಯ ರಸದ ಪರಿಕಲ್ಪನೆಯನ್ನು ತಿರಸ್ಕರಿಸುತ್ತಾರೆ. ಆನಂದದ ಅನುಸಂಧಾನದ ವೈದಿಕ ಪರಿಕಲ್ಪನೆಯಾದ ರಸಕ್ಕೆ ವಿರುದ್ಧವಾಗಿ ದುಃಖಾನುಸಂಧಾನವನ್ನು ಹೇಳಿಕೊಟ್ಟ ಬೌದ್ಧ ಮೀಮಾಂಸೆಯನ್ನು ಮಂಡಿಸುತ್ತಾರೆ. ಹಾಗೆಯೇ ಏಕರಸದ ಸರಳ ಸ್ಥಿತಿಯ ಚಿಂತನೆಗೆ ರ‍್ಯಾಯವಾಗಿ ಜೈನ ಚಿಂತನೆಯಾದ ಅನೇಕಾಂತವಾದವನ್ನು ಹಾಗೂ ಅರಿವಿನ ಅನುಸಂಧಾನದ ವಚನ ಚಿಂತನೆಯನ್ನು ಮುನ್ನೆಲೆಗೆ ತರುತ್ತಾರೆ.

ಹೀಗೆ ಕನ್ನಡ ಸಾಹಿತ್ಯ ಮೀಮಾಂಸೆಯೆಂಬುದು ಬಹುಮುಖಿ ನೆಲೆಗಳಲ್ಲಿ ಕಟ್ಟಲ್ಪಡುತ್ತಿರುವ ಸಂದರ್ಭದಲ್ಲಿ ಡಾ.ರವಿಕುಮಾರ್ ನೀಹ ಅವರ ‘ದಲಿತ ಸಾಹಿತ್ಯ ಮೀಮಾಂಸೆ’ ಕೃತಿ ಪ್ರಕಟವಾಗಿದೆ. ಈ ಕೃತಿ ಕೆಲವು ಮುಖ್ಯ ಕಾರಣಗಳಿಂದ ಮುಖ್ಯವಾಗಿ ಕಾಣುತ್ತದೆ. ಈ ಕೃತಿಯಲ್ಲಿ ಇರುವ ಸೈದ್ಧಾಂತಿಕ ಸ್ಪಷ್ಟತೆಗಾಗಿ ಮಹತ್ವದ್ದಾಗಿ ಪರಿಗಣಿಸಬೇಕಾಗಿದೆ. ಕನ್ನಡ ಸಾಹಿತ್ಯ ಮೀಮಾಂಸೆಗೆ ಪರ್ಯಾಯವಾಗಿ ದಲಿತ ಸಾಹಿತ್ಯ ಮೀಮಾಂಸೆ ಹುಟ್ಟಿಕೊಂಡಿದೆ ಎಂಬ ನಿಲುವು ಈ ಅಧ್ಯಯನದಲ್ಲಿ ಇಲ್ಲ. ದಲಿತ ಸಾಹಿತ್ಯ ಮೀಮಾಂಸೆಯು ಕನ್ನಡ ಸಾಹಿತ್ಯ ಮೀಮಾಂಸೆಯ ಒಂದು ಭಾಗವೇ ಆಗಿದ್ದೂ, ಅದರ ಒಂದು ವಿಶಿಷ್ಟ ಭಾಗವಾಗಿ ರೂಪುಗೊಂಡಿದೆ ಎಂಬ ನಿಲುವು ಅವರಲ್ಲಿದೆ. ಹಾಗೆಯೆ ದಲಿತರ ಸಾಮಾಜಿಕ ಬದುಕು, ಸೌಲಭ್ಯ, ಕಸುಬು, ಅಭಿವ್ಯಕ್ತಿ, ಆಲೋಚನೆ, ಅನುಭವ, ಬಹುಮುಖತೆ, ಮೂಲಕವೇ ಮೀಮಾಂಸೆಯನ್ನು ಕಟ್ಟಿಕೊಳ್ಳಬೇಕೆನ್ನುವ ಹಂಬಲ ಅವರದು. ಜೊತೆಗೆ ದಲಿತ ಮೀಮಾಂಸೆಯೆನ್ನುವುದು ಒಂದು ಲೋಕದೃಷ್ಟಿಯಾದ್ದರಿಂದ ಬದುಕಿನ ವಿನ್ಯಾಸಗಳು ಬದಲಾದ ಹಾಗೆ ಲೋಕವನ್ನು ನೋಡುವ ನೋಟಕ್ರಮವು ಬದಲಾಗಬೇಕಾದದ್ದು ಸಹಜ ಹಾಗೂ ಅನಿವಾರ್ಯ ನಂಬಿಕೆ ಇಲ್ಲಿಯದು. ತಳವೂರಿದ ಕುರುಬ ಕಟುಕನಾದ ಎನ್ನುವ ನಿಸಾರರ ಕವನದ ಸಾಲು ಹೇಳುವುದು ಇದನ್ನೇ. ಯಾವುದೇ ಚಿಂತನೆ ಎಲ್ಲ ಕಾಲಕ್ಕೂ ಶಾಶ್ವತ ಮತ್ತು ಸಾರ್ವತ್ರಿಕ ಮತ್ತು ತ್ರಿಕಾಲಾ ಭಾದಿತ ಚಿಂತನೆಗಳನ್ನು ಮಾನ್ಯ ಮಾಡುವುದಿಲ್ಲ ಎಂಬ ಕಾರಣಕ್ಕೆ ಮಹತ್ವದ್ದಾಗಿದೆ.

ಡಾ.ರವಿಕುಮಾರ್ ನೀಹ

ದಲಿತ ಸಾಹಿತ್ಯ ಮೀಮಾಂಸೆಯನ್ನು ನಿರೂಪಿಸುವ ಸಂದರ್ಭದಲ್ಲಿ ‘ದಲಿತ’ ಪದ ಪಡೆದ ಹಲವು ಅರ್ಥ ಸ್ವರೂಪವನ್ನು ಗುರುತಿಸುವ ಕೆಲಸವನ್ನು ಕೃತಿ ಮಾಡಿದೆ. ಆರಂಭದಲ್ಲಿದ್ದ ಹಸಿವಿನ ಪ್ರಶ್ನೆ, ಅವಮಾನದ ಪ್ರಶ್ನೆಯನ್ನು ಹಾದು ಈಗ ಅಸ್ಮಿತೆಯ ಸ್ವರೂಪವನ್ನು ಪಡೆದುಕೊಂಡ ಬಗೆಯನ್ನು ವಿಶ್ಲೇಷಿಸಿದೆ. ಹಾಗೆಯೆ ದಲಿತ ಸಾಹಿತ್ಯ ಮೀಮಾಂಸೆಯ ಪರಂಪರೆಯನ್ನು ಕಟ್ಟುವ ಸಂದರ್ಭದಲ್ಲಿ ಅದರ ಆರಂಭವನ್ನು ಡಿ ಆರ್ ನಾಗರಾಜ್ ಅವರ ಪ್ಲೇಮಿಂಗ್ ಪೀಟ್ ಕೃತಿಯ ಮೂಲಕ ಗುರುತಿಸುತ್ತದೆ. ನಂತರದ ಕಾಲಘಟ್ಟದಲ್ಲಿ ದೇವಯ್ಯ ಹರವೆ, ಪ್ರೊ.ಅರವಿಂದ ಮಾಲಗತ್ತಿ, ಮೊಗಳ್ಳಿ ಗಣೇಶ್, ಬಿ.ಎಂ. ಪುಟ್ಟಯ್ಯನವರು ವಿಸ್ತರಿಸಿದ ಪರಂಪರೆಯನ್ನು ವಿಸ್ತರಿಸಿದೆ. ಆದರೆ ಇಲ್ಲಿ ವಿಶ್ಲೇಷಿಸುವ ಕ್ರಮ ಎಂಭತ್ತರ ದಶಕದ ದಲಿತ ಸಾಹಿತ್ಯಕ್ಕೆ ಸೀಮಿತಗೊಂಡಿರುವುದು ಗಂಭೀರವಾದ ಮಿತಿಯೆನಿಸುತ್ತದೆ. ದಲಿತ ಸಾಹಿತ್ಯ ಆರಂಭವಾಗುವ ಮೊದಲಿನ ಲಿಖಿತ ಮತ್ತು ಮೌಖಿಕ ಪರಂಪರೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದರೆ ಕೃತಿಯ ವ್ಯಾಪ್ತಿ ಹೆಚ್ಚುತ್ತಿತ್ತು. ಇಂದಿನ ದಲಿತ ಸಾಹಿತ್ಯ ಸಾಮಾಜಿಕ ಕ್ರೋಧದ ಮಾದರಿಯ ಜೊತೆಗೆ ಆಧ್ಯಾತ್ಮಿಕ ಹುಡುಕಾಟದ ಮಾದರಿಯನ್ನು ಸಹ ತೀವ್ರವಾಗಿ ಅಭಿವ್ಯಕ್ತಿಸುವುದರಿಂದ ಆಧ್ಯಾತ್ಮಿಕ ದಂಗೆಯ ನಾಯಕರಾದ ಮಂಟೇಸ್ವಾಮಿ, ಮಾದಪ್ಪನವರೆಗೆ ಈ ಪರಂಪರೆಯನ್ನು ವಿಸ್ತರಿಸುವ ಸಾಧ್ಯತೆಯಿತ್ತು.

ದಲಿತ ಸಾಹಿತ್ಯ ಮೀಮಾಂಸೆ ಇನ್ನೊಂದು ನೆಲೆಯಲ್ಲಿ ನನಗೆ ಮುಖ್ಯವೆನಿಸುತ್ತದೆ. ಈ ಮೀಮಾಂಸೆ ತನ್ನ ಸ್ವರೂಪದಲ್ಲಿಯೇ ಒಳಗೊಳ್ಳುವಿಕೆಯ ನೆಲೆಯನ್ನು(inclusive) ಒಳಗೊಂಡಿದೆ. ಹಾಗೆಯೇ ಪ್ರಖರ ರಾಜಕೀಯ ಚಿಂತನೆಯನ್ನು ತನ್ನ ಭಿತ್ತಿಯಾಗಿಸಿಕೊಂಡಿದೆ. ವೈಯಕ್ತಿಕವು ರಾಜಕೀಯವೇ ಆಗಿರುವ ಇಂದಿನ ಕಾಲಘಟ್ಟದಲ್ಲಿ ಸ್ಪಷ್ಟ ರಾಜಕೀಯ ಚಿಂತನೆಯನ್ನು ಹೊಂದಿರುವುದು ಅಗತ್ಯವಾಗಿದೆ. ಹಾಗೆಯೆ ದಲಿತ ಚಿಂತನೆಯೊಂದಿಗೆ ಬೆಸೆದುಕೊಂಡಿರುವ ಬೌದ್ಧದರ್ಶನವನ್ನು ಚರ್ಚಿಸುವುದರ ಮೂಲಕ, ಜೊತೆಗೆ ಅಲೆಮಾರಿಗಳು ಲೈಂಗಿಕ ಅಲ್ಪಸಂಖ್ಯಾತರು, ಬಿಕ್ಷುಕರ ಜಗತ್ತುಗಳ ಮೂಲಕ ಅನಾವರಣಗೊಳ್ಳುತ್ತಿರುವ ಕಲಾಲೋಕವನ್ನು ತನ್ನ ವ್ಯಾಪ್ತಿಗೆ ತಂದುಕೊಂಡಿದೆ.

ಡಾ.ಪ್ರಕಾಶ್ ಬಡವನಹಳ್ಳಿ

ಈ ಕೃತಿಯ ಕುಲಕಥನ ಮೀಮಾಂಸೆ ನವೀನ ರೀತಿಯದ್ದಾಗಿದೆ. ಈಗಾಗಲೇ ಸಾಹಿತ್ಯ ಲೋಕದಲ್ಲಿ ಪ್ರಚಲಿತವಾಗಿರುವ ಖಂಡಕಾವ್ಯಗಳಿಗಿಂತ ಭಿನ್ನವಾಗಿ ಕುಲಕಥನಗಳನ್ನು ನೋಡಬೇಕೆಂದು ಗಟ್ಟಿಯಾಗಿ ವಾದಿಸುತ್ತದೆ. ಈ ಕಾವ್ಯಗಳು ಸಾಮಾಜಿಕ ಆಕ್ರೋಶದ ಮಾದರಿಗಿಂತ ಭಿನ್ನವಾಗಿ ಸ್ವಾಭಿಮಾನ ಸಮಾನತೆಗಳನ್ನು ತಮ್ಮ ಕುಲಪುರಾಣಗಳಲ್ಲಿ ಹೆಕ್ಕಿ ತೆಗೆಯುವ ಮಾದರಿಯನ್ನು ಪಠ್ಯಗಳ ಮೂಲಕವೇ ವಿಶ್ಲೇಷಿಸುವ ಕ್ರಮ ಮಹತ್ವದ್ದಾಗಿದೆ. ಇಷ್ಟಾಗಿ ನಮ್ಮ ಈ ದುರಿತ ಕಾಲದಲ್ಲಿ ಬಹುತ್ವವನ್ನು ಏಕತ್ವಕ್ಕೆ ಬಡಿವ ಹಠಗಾರಿಕೆಯ ರಾಜಕೀಯದ ಕ್ಲುಪ್ತ ಸಮಯದಲ್ಲಿ ದಲಿತ ದಾರೆ ಬಹುತ್ವದ್ದು, ವೈವಿಧ್ಯತೆ ಅದರ ಜೀವಾಳ. ನಿರಂತರತೆ ಅದನ್ನು ಕಟ್ಟುವ ಬಹು ಮುಖ್ಯ ದಾರಿ ಎಂಬ ಸೂಕ್ಷ್ಮತೆ ಇರುವ ದಲಿತ ಸಾಹಿತ್ಯ ಮೀಮಾಂಸೆ ಮಹತ್ವದ ಕೃತಿಯಾಗಿದೆ.

  • ಡಾ.ಪ್ರಕಾಶ್ ಬಡವನಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...