Homeದಲಿತ್ ಫೈಲ್ಸ್ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!

ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!

- Advertisement -
- Advertisement -

ಬುಲೆಟ್ ಬೈಕ್ ಓಡಿಸಿದ್ದಕ್ಕೆ ಪ್ರಬಲ ಜಾತಿಯವರು ದಲಿತ ಯುವಕನ ಕೈ ಕಡಿದಿರುವ ಘಟನೆ ಬುಧವಾರ (ಫೆ.12) ಸಂಜೆ ತಮಿಳುನಾಡಿನ ಶಿವಗಂಗ ಜಿಲ್ಲೆಯ ಮೇಳಪಿದವೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ದಾಳಿಯಿಂದ ದಲಿತ ಯುವಕ ಆರ್. ಅಯ್ಯಸಾಮಿ ಅವರ ಎರಡೂ ಕೈಗಳಿಗೆ ಗಾಯಗಳಾಗಿವೆ. ಅವರು ಪ್ರಸ್ತುತ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಪೊಲೀಸರ ಪ್ರಕಾರ, ಬುಧವಾರ ಸಂಜೆ ಅಯ್ಯಸಾಮಿ ತನ್ನ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ, ಅದೇ ಗ್ರಾಮದ ಮೂವರು ಪ್ರಬಲ ಜಾತಿ ಹಿಂದೂಗಳಾದ ಆರ್. ವಿನೋದ್‌ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಅಡ್ಡಗಟ್ಟಿ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

“ಪ್ರಬಲ ಸಮುದಾಯದ ಯುವಕರು ಮಾತ್ರ ದುಬಾರಿ ಬೈಕ್‌ಗಳನ್ನು ಓಡಿಸಬಹುದು. ದಲಿತರು ಅಂತಹ ಬೈಕ್‌ಗಳನ್ನು ಓಡಿಸಬಾರದು” ಎಂದು ಹೇಳುತ್ತಾ ಆರೋಪಿಗಳು ಅಯ್ಯಸಾಮಿಯ ಕೈಗಳನ್ನು ಕಡಿದಿದ್ದಾರೆ” ಎಂದು ಸಂತ್ರಸ್ತ ಯುವಕನ ಸಂಬಂಧಿ ಮುನಿಯಸಾಮಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ದಾಳಿ ನಡೆದಾಗ ಅಯ್ಯಸಾಮಿ ತಪ್ಪಿಸಿಕೊಂಡು ಸ್ಥಳದಿಂದ ಓಡಿ ಹೋಗಿ ಮನೆ ತಲುಪಿದ್ದಾರೆ. ಇಲ್ಲದಿದ್ದರೆ ಆರೋಪಿಗಳು ಆತನನ್ನು ಕೊಲೆ ಮಾಡುತ್ತಿದ್ದರು ಎಂದು ಮುನಿಯಸಾಮಿ ತಿಳಿಸಿದ್ದಾರೆ.

ಕುಟುಂಬಸ್ಥರು ಅಯ್ಯಸಾಮಿಯನ್ನು ಆಸ್ಪತ್ರೆಗೆ ಕರೆದೊಯ್ದ ನಂತರ, ಪ್ರಬಲ ಜಾತಿಯವರು ದಲಿತ ಕುಟುಂಬದ ಮನೆಯನ್ನು ದೋಚಿದ್ದಾರೆ. ಗ್ರಾಮದಲ್ಲಿ ಜಾತಿ ತಾರತಮ್ಯ ಚಾಲ್ತಿಯಲ್ಲಿದೆ. ತಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡುವಂತೆ ಮುನಿಯಸಾಮಿ ಒತ್ತಾಯಿಸಿದ್ದಾರೆ.

“ಅಯ್ಯಸಾಮಿ ಬುಲೆಟ್ ಬೈಕ್ ಚಲಾಯಿಸುವುದು ಪ್ರಬಲ ಜಾತಿಯವರಿಗೆ ಇಷ್ಟವಿರಲಿಲ್ಲ. ಈ ಹಿಂದೆಯೂ ಅವರು ಬೈಕಿಗೆ ಹಾನಿ ಮಾಡಿದ್ದರು” ಎಂದು ಅವರ ತಂದೆ ಭೂಮಿನಾಥನ್ ಹೇಳಿದ್ದಾರೆ.

ಬುಲೆಟ್ ಓಡಿಸಿದ್ದಕ್ಕೆ ದಾಳಿ ಮಾಡಲಾಗಿದೆ ಎಂಬುವುದನ್ನು ಪೊಲೀಸ್ ಮೂಲಗಳು ನಿರಾಕರಿಸಿವೆ. ಅಯ್ಯಸಾಮಿ ಆರೋಪಿಗಳಲ್ಲಿ ಒಬ್ಬನಾದ ಅಥೀಶ್ವರನ್‌ಗೆ ಗೇಲಿ ಮಾಡಿದ್ದರು. ಈ ವಿಚಾರಕ್ಕೆ ಅವರ ನಡುವೆ ಮೊದಲೇ ಜಗಳವಿತ್ತು. ತನಿಖೆ ಇನ್ನೂ ಮುಂದುವರೆದಿದೆ ಎಂದಿವೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಘಟನೆ ಸಂಬಂಧ ಸಿಪ್ಕಾಟ್ ಪೊಲೀಸರು ವಿನೋದ್‌ಕುಮಾರ್, ಅಥೀಶ್ವರನ್ ಮತ್ತು ವಲ್ಲರಸು ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 296 (1), 126 (2), 118 (1), 351 (3) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(ಆರ್)(ಎಸ್‌) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಹಲ್ಲೆಗೊಳಗಾದ ಅಯ್ಯಸಾಮಿ ಶಿವಗಂಗೆಯ ಕಾಲೇಜಿನಲ್ಲಿ ಮೂರನೇ ವರ್ಷದ ಯುಜಿ ಗಣಿತ ವಿದ್ಯಾರ್ಥಿ ಎಂದು ವರದಿ ತಿಳಿಸಿದೆ.

ಮುಸ್ಲಿಮರಿಂದ ವಕ್ಫ್ ಆಸ್ತಿ ಕಸಿದುಕೊಂಡು ನಾಶಕ್ಕೆ ಯತ್ನ: ಅಸಾದುದ್ದೀನ್ ಓವೈಸಿ ಆರೋಪ

‘Bullet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...