Homeಪುಸ್ತಕ ವಿಮರ್ಶೆಗುರುಪ್ರಸಾದ್ ಕಂಟಲಗೆರೆಯವರ ‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಕೃತಿ ವಿಮರ್ಶೆ..

ಗುರುಪ್ರಸಾದ್ ಕಂಟಲಗೆರೆಯವರ ‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಕೃತಿ ವಿಮರ್ಶೆ..

- Advertisement -
- Advertisement -

ಗುರುಪ್ರಸಾದ್ ಕಂಟಲಗೆರೆಯವರು ಮೂಲತಃ ಕವಿ-ಕತೆಗಾರ. ಸದ್ಯ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಕಟಣೆಯಾದ ‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಕೃತಿ ಪ್ರಕಟವಾಗುವುದರ ಮೂಲಕ ಒಬ್ಬ ಸಂಶೋಧಕ, ವಿಮರ್ಶಕನಾಗಿ ಈ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದಂತಾಗಿದೆ. ಗುರುಪ್ರಸಾದ್ ದಲಿತ ಸಾಹಿತ್ಯವನ್ನು ಮರುವ್ಯಾಖ್ಯಾನ ಮಾಡುವುದನ್ನು ಗೌಣಗೊಳಿಸಿ, ನೆಲಮೂಲದವರಾದ ಮಾದಿಗ ಸಮುದಾಯವನ್ನು ಹೇಗೆ ಗ್ರಹಿಸಬಹುದೆಂಬುದನ್ನು ಮೌಖಿಕವಾಗಿ ದೊರೆಯುವ ಸಂಕಥನಗಳನ್ನು ಸಂಗ್ರಹಿಸಿ, ಅವನ್ನು ಸಮಕಾಲೀನ ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಹೇಗೆ ಮುಖಾಮುಖಿಯಾಗಬಲ್ಲವು ಎಂಬುದನ್ನು ಇಲ್ಲಿ ಸೂಕ್ಷ್ಮವಾಗಿ ಚರ್ಚಿಸಿದ್ದಾರೆ.

ದಲಿತರ ಸಾಂಸ್ಕೃತಿಕ ಲೋಕದ ಕಥನಗಳನ್ನು ಜನಪದ ವಾಙ್ಮಯದಲ್ಲಿರುವ, ಅದರಲ್ಲೂ ಮಾದಾರ ಸಮುದಾಯದಲ್ಲಿರುವ ಮತ್ತು ಜನಪದ ಹಾಗೂ ಸಾಂಸ್ಕೃತಿಕ ಆಚರಣೆಗಳ ಒಳಗಿರುವ ದಲಿತರ ಅಸ್ಮಿತೆಗಳನ್ನು ಇತ್ತೀಚಿನ ದಿನಗಳಲ್ಲಿ ತೀವ್ರತರವಾಗಿ ಶೋಧಿಸುವ ಕೆಲಸ ಈಗಿನ ಯುವ ಸಂಶೋಧಕರಿAದ ಬಹಳ ಅರ್ಥಪೂರ್ಣವಾಗಿ ಜರುಗಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ರೂಪುಗೊಂಡ ಕೃತಿಯೇ ಕಂಟಲಗೆರೆ ಗುರುಪ್ರಸಾದ್ ಅವರ ‘ದಲಿತರ ಸಾಂಸ್ಕೃತಿಕ ಕಥನಗಳ ಅಧ್ಯಯನ’. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿಯ ದಲಿತ ಅಧ್ಯಯನಗಳ ಅಡಿಯಲ್ಲಿ ಇದು ಪ್ರಕಟವಾಗಿದೆ. ತುಮಕೂರು ಜಿಲ್ಲೆಯ ದಲಿತರ ಬದುಕಿನ ಪರಂಪರೆಯ ಎಲ್ಲಾ ಮಗ್ಗುಲುಗಳನ್ನು ತಳಸ್ಪರ್ಶಿಯವಾಗಿ ಶೋಧಿಸಿ ಕಟ್ಟಿರುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ ಆಕರ ಕೃತಿಯಾಗಿ ನಿಲ್ಲಬಲ್ಲದು.

‘ದಲಿತ’ ಪದ, ದಲಿತರ ಉಗಮ ವಿಕಾಸ, ಬದುಕಿನ ವಿನ್ಯಾಸ, ದಲಿತ ಚಳವಳಿಯಲ್ಲಿ ಕಂಡುಂಡ ವೈಫಲ್ಯಗಳು-ಸಾಫಲ್ಯಗಳು, ‘ದಲಿತ’ ಪದ ಇಂದು ವಿಸ್ತೃತಗೊಳ್ಳುತ್ತಿರುವ ಆರ್ದ್ರತೆ, ಅವುಗಳಲ್ಲೇ ಮುಂದುವರೆದಿರುವ- ಹಿಂದುಳಿದಿರುವ(ಸ್ಪೃಶ್ಯ-ಅಸ್ಪೃಶ್ಯ) ಜಾತಿಗಳಲ್ಲಿ ತಮ್ಮ ತಮ್ಮ ಐಡೆಂಟಿಗಳ ಹುಡುಕಾಟ, ಅಸ್ತಿತ್ವದ ಪ್ರಶ್ನೆ ಎದುರಾದಾಗ ರಾಜಕೀಯಾತ್ಮಕ ಮೇಲಾಟಗಳು ಜರುಗಿ, ಮತ್ತೊಂದು ಜಾತಿಯ ಮೇಲೆ ಸಣ್ಣದಾದ ಅಸೂಯೆ- ಸಂಘ಼ರ್ಷದಿಂದಾಗಿ ಆಗುತ್ತಿರುವ ಮೂಲದ ಆಶಯ-ಧ್ಯೇಯೋದ್ದೇಶಗಳಿಗೆ ಬಹು ದೊಡ್ಡ ಪೆಟ್ಟಾಗಿರುವುದನ್ನು ಅದರಲ್ಲೇ ಇಂದಿನವರೆಗೆ ಹೋರಾಟ ಮಾಡಿಕೊಂಡು ಬಂದಿರುವ ಚಿಂತಕರು ವಿಷಾದವನ್ನು ತಳೆಯುತ್ತಿರುವುದನ್ನು ಒಂದೆಡೆ ಕಂಡುಬಂದರೆ, ಮತ್ತೊಂದೆಡೆ ಹೋರಾಟದ ಸಾಂಘಿಕ ಫಲದಲ್ಲಿ ಒಂದೆರಡು ಜಾತಿಗಳು ಮಾತ್ರ ಲಾಭ ಹೊಂದಿವೆ ಎಂಬುದನ್ನು ಮನಗಂಡ ಯುವಪೀಳಿಗೆ ಒಳಮೀಸಲಾತಿ ಮತ್ತು ಈಗಾಗಲೇ ಅದರ ನಷ್ಟದಿಂದ ಅರಿವಿರುವ ಕಾರಣದಿಂದ ಸರ್ಕಾರಕ್ಕೆ ಮನವರಿಕೆ ಮಾಡಿ ಸದಾಶಿವ ಆಯೋಗ ವರದಿಯನ್ನು ತಯಾರಿಸಿ, ಸರ್ಕಾರದ ಮಡಿಲಲ್ಲಿದ್ದರೂ ಅದು ಜೀವಪಡೆಯದೇ ಅನಾಥವಾಗುವುದರ ಜೊತೆಗೆ ದೀರ್ಘದಿಂದ ಶೋಷಿತ ಜನಾಂಗ ಮತ್ತೆ ನೋವಿಗೆ ತಳ್ಳಿರುವುದು ಆಘಾತ ತರಿಸಿದೆ. ಇದರ ಹೋರಾಟಗಳು ನಡೆಯುತ್ತಿದ್ದರೂ ಇದೊಂದು ರಾಜಕೀಯದ ದಾಳವಾಗಿರುವುದಂತೂ ಸತ್ಯವೆಂಬುದನ್ನು ಗುರುಪ್ರಸಾದ್ ಚರ್ಚಿಸಿದ್ದಾರೆ.

ಗುರುಪ್ರಸಾದ್ ಅವರು ಸಮುದಾಯದಲ್ಲಿ ಮೌಖಿಕವಾಗಿರುವ ದಲಿತರ ಸಾಂಸ್ಕೃತಿಕ ಸಂಕಥನಗಳನ್ನು ಕ್ಷೇತ್ರಕಾರ್ಯದ ಮೂಲಕ ಪ್ರಶ್ನಾವಳಿ ರೂಪಿಸಿಕೊಂಡು ವಕ್ತೃ-ಹಾಡುಗಾರರೊಟ್ಟಿಗೆ ಸಂವಾದಿಸಿ, ತಮಗೆ ಬೇಕಾದುದನ್ನು ಪಡೆದು, ಕಳೆದುಹೋಗುವುದನ್ನು ಅಕ್ಷರರೂಪಕ್ಕೆ ತಂದಿರುವುದು ಮೆಚ್ಚತಕ್ಕದ್ದು. ಮಾದಿಗರ ಸೃಷ್ಟಿಮೂಲದ ಸಂಕಥನಗಳನ್ನು ಭಿನ್ನ ಪ್ರದೇಶಗಳಲ್ಲಿ ದೊರೆತಿರುವ ಭಿನ್ನಪಠ್ಯಗಳನ್ನು ಶೋಧಿಸಿರುವ ಗುರುಪ್ರಸಾದ್ ಚೌಡಿಕೆಯಲ್ಲಯ್ಯ ಹೇಳಿದ ಸಂಕಥನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ದಕ್ಕಲಿಗರು ಕರ್ತೃ ಜಾನಕಲ್ ರಾಜಣ್ಣನವರು ಹೇಳಿದ ಸೃಷ್ಟಿಮೂಲದ ಬಗೆಗೆ ಇರುವ ವ್ಯತ್ಯಾಸವನ್ನು ಗುರುತಿಸುವುದನ್ನು ಕೃತಿಯಲ್ಲಿ ಕಾಣಬಹುದು.

‘ದಲಿತ’ ಪದದ ಒಳಗಿರುವ ಸಿಕ್ಕು, ಅದರೊಳಗೆ ಪಡೆಯುತ್ತಿರುವ ಸೌಲಭ್ಯಗಳು, ನಿಜವಾದ ದಲಿತರು ಯಾರು? ದಲಿತತ್ವ ಎಂದರೆ ಏನು? ಎಂಬುದನ್ನು ತಮ್ಮ ಅಭಿಪ್ರಾಯದೊಂದಿಗೆ ಅಂಬೇಡ್ಕರ್, ಕೆ.ಬಿ. ಸಿದ್ದಯ್ಯ ಅವರ ಆಲೋಚನೆಗಳನ್ನು ಇಲ್ಲಿ ಚರ್ಚಿಸಿದ್ದಾರೆ. ದಲಿತ ಅಂದರೆ ಡಿಪ್ರೆಸ್ಡ್ ಅನ್ನುವ ಇಂಗ್ಲಿಷ್ ಪದವಿದ್ದು, ಅದನ್ನೆ ತುಳಿತಕ್ಕೆ ಒಳಗಾದವರೆಲ್ಲರೂ ಸಮಾನ ದುಃಖಿಗಳೆಂಬುದನ್ನು ಚರ್ಚಿಸಿದ್ದಾರೆ. ದಲಿತರಲ್ಲಿ ಸ್ಪೃಶ್ಯ ಅಸ್ಪೃಶ್ಯರು ನಿರ್ಮಾಣಗೊಂಡು ಅದರ ಲಾಭವನ್ನು ಅಧಿಕವಾಗಿ ಸ್ಪೃಶ್ಯರೇ ಪಡೆಯುವ ಆತಂಕಕಾರಿ ಚಿತ್ರಣವನ್ನು ವಿಶ್ಲೇಶಿಸುವುದಾಗಿದೆ. ಆದರೆ ಇಂದು 101 ಜಾತಿಗಳ ಸಾಂಘಿಕ ಸಂಘಟನೆಯ ನೆಲೆಯೊಳಗೆ ಒಡಕು ಬಂದು ತಮ್ಮ ಅಸ್ಮಿತೆಗಳ ಹುಡುಕಾಟ ಶುರುವಾಗಿದೆ.

ಮೂಲದ ಪುರಾಣ ಸಂಕಥನಗಳು ತಿರುಚುವ ಪ್ರಯತ್ನ ನಿರಂತರವಾಗಿ ನಡೆದಿದೆ. ಸಂಕಥನಗಳಲ್ಲಿ ಭಿನ್ನ ಪಠ್ಯಗಳು ಹೇಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ವಿರುದ್ಧ ನಿಂತು ಮಾತಾಡುತ್ತವೆಂಬುದನ್ನು ಗುರುಪ್ರಸಾದ್ ಗುರುತಿಸಿದ್ದಾರೆ. ನೆಲಮೂಲದವರು ಯರ‍್ಯಾರೆಂಬುದು ಜಿಜ್ಞಾಸೆ ವ್ಯಕ್ತವಾಗುತ್ತಿರುವ ಇದೇ ಸಂದರ್ಭದಲ್ಲಿ ಆದಿಜಾಂಬವರು, ಯಾದವರು ನೆಲ ಸಂಸ್ಕೃತಿಯನ್ನು ಸಾರುವ ವಕ್ತಾರರೆನಿಸಿದ್ದಾರೆಂಬುದನ್ನು ಸಾಬೀತು ಪಡಿಸಿದ್ದಾರೆ. ಜೊತೆಗೆ ಕುರುಬರು, ಕುಂಚಿಟಿಗರು, ಮ್ಯಾಸಬೇಡರು ಕುಲ(ಪಂಗಡ)ಗಳಲ್ಲಿ ಹಲವು ಸಾಮ್ಯತೆಗಳಿವೆಯೆಂದರೆ ಈ ಸಮುದಾಯಗಳೆಲ್ಲವೂ ಈ ನೆಲಮೂಲದವರು, ಒಂದೇ ಸಂಸ್ಕೃತಿಯ ವಕ್ತಾರರೆಂಬುದನ್ನು ಅರಿಯಬಹುದು.

ಕೃತಿಯ ಎರಡನೆಯ ಹಂತದಲ್ಲಿ ಸಂಶೋಧಕರು ಆರು ದಲಿತರೊಟ್ಟಿಗೆ ಸಂವಾದಿಸುತ್ತಾರೆ. ಇವರೆಲ್ಲರೂ ಭಿನ್ನ ನೆಲೆಯಲ್ಲಿ ಬದುಕುತ್ತಿರುವವರು, ಆಲೋಚಿಸುತ್ತಿರುವವರು. ಲೇಖಕರ ಮೂಲ ಆಶಯವಿರುವುದು ಗ್ರಾಮ್ಯದ ಸ್ಥಳೀಯ ಹಂತದಿಂದ ರಾಜ್ಯಮಟ್ಟದ ಹೋರಾಟಗಾರರಲ್ಲಿ, ಚಿಂತಕರಲ್ಲಿ ದಲಿತತ್ವದ ನಿಲುವು ಹೇಗಿದೆ, ಅದರಲ್ಲೂ ಮಾದಿಗರ ಬದುಕಿಗೆ ಹೊಸ ಆಯಾಮವನ್ನು ಕೊಡುವ ದಾರಿ ಯಾವುದೆಂಬುದನ್ನು ಚರ್ಚಿಸುವುದು ಇಲ್ಲಿ ಮುಖ್ಯವಾಗಿದೆ. ಅವರ ಎಲ್ಲಾ ನಿಲುವುಗಳನ್ನು ಒಂದೆಡೆ ಸಂಗ್ರಹಿಸುವುದು ಅಷ್ಟೇ ಮುಖ್ಯವಾಗಿದೆ.

‘ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ’ ಕೃತಿಯು ಮೇಲ್ನೋಟದಲ್ಲಿ ಹಲವು ಹಂತಗಳಲ್ಲಿ ರೂಪುಗೊಂಡಿದೆ. ಅವಗಳನ್ನು ಹೀಗೆ ಪಟ್ಟಿ ಮಾಡಬಹುದು.

1. ಪುರಾಣದ ಕಥನಗಳಲ್ಲಿ ಮಾದಿಗರ ಪ್ರಾಮುಖ್ಯತೆ ಹಾಗೂ ಪರಂಪರೆ ಹೇಗೆ ನಯವಾಗಿ ಅದನ್ನು ವಂಚಿಸಿದೆಂಬುದನ್ನು ಗ್ರಹಿಸುವುದು.

2. ಕಂಚಿ ಫರ್ಮಾನ್‌ನಲ್ಲಿರುವ ಎಡಗೈ ಜನಾಂಗಕ್ಕಿರುವ ಸಾಂಸ್ಕೃತಿಕ ಬಿರುದಾವಳಿಗಳು, ಅಲ್ಲಿಯೂ

ಬಲಗೈಯೊಂದಿಗೆ ಸಂಘರ್ಷವಾದರೂ ಪೂರ್ವದ ಶ್ರೇಷ್ಠತೆಯಿಂದ ಮತ್ತೆ ಪಾರಮ್ಯ ಮೆರೆಯುವಿಕೆ.

3. ದಲಿತರ ಪ್ರಸ್ತ್ತುತ ಬದುಕಿನ ಆಯಾಮಗಳು, ‘ದಲಿತ’ ಪದದ ಮರುಚಿಂತನೆಯಲ್ಲಿ ಒಳಮೀಸಲಾತಿ

ಕೂಗು ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯ.

4. ಸಾಹಿತ್ಯದ ಚರಿತ್ರೆಯಲ್ಲಿ ಮಾದಿಗರನ್ನು ಗೌಣಗೊಳಿಸಿ ಮಾಡಿದ ಅನ್ಯಾಯದ ವಿರುದ್ಧ ದನಿಯೆತ್ತುವಿಕೆ.

5. ದಲಿತರ ಭವಿಷ್ಯ ಹೇಗಿರಬೇಕು ಎಂಬ ಪರ್ಯಾಯ ದಲಿತ ಚಿಂತನೆಯಿದೆ.

6. ದಲಿತತನದ ಒಳಗಿರುವ ಭಿನ್ನ ಆಯಾಮಗಳು, ಜಾತಿಯೆಂಬ ಪದದ ಐಡೆಂಟಿಟಿಯ ಒತ್ತಾಸೆಗಳು,

ಅಸ್ಮಿತೆಯ ಹುಡುಕಾಟಗಳು.

ಗುರುಪ್ರಸಾದ್ ಅವರು ದಲಿತರ ಬದುಕಿನ ಸಮಗ್ರ ಚಿತ್ರಣದ ಬಗೆಗೆ ಆಲೋಚಿಸುತ್ತಲೇ, ಸಮಕಾಲೀನ ಬಿಕ್ಕಟ್ಟುಗಳ ಕಡೆಗೂ ಹೊರಳಿಕೊಳ್ಳುವುದರಿಂದ ಈ ಕೃತಿಯು ಎಲ್ಲಾ ಕಾಲಕ್ಕೂ ಮುಖಾಮುಖಿಯಾಗುವ ಸಾಮರ್ಥ್ಯವೊಂದಿದೆ. ಕೃತಿಯ ಸತ್ವ ಇರುವುದು ಪರಂಪರೆಯಲ್ಲಿ ಜೋಪಾನವಾಗಿ ಕಾಪಾಡಿಕೊಂಡು ಬಂದಿರುವ ಮೌಖಿಕ ಕಥನಗಳ ಸಂಗ್ರಹ ಇದೆಯಲ್ಲ ಅದು ಇದುವರೆವಿಗೂ ಯಾರಿಂದಲೂ ಆಗದ್ದನ್ನು ಸಾಧಿಸಿದಂತಿದೆ. ಸಮುದಾಯದಲ್ಲಿ ಸಮೃದ್ಧವಾಗಿರುವ ಮೌಖಿಕ ಕಥನಗಳನ್ನು ಈಗ ಹೇಳುವ ಕೊಂಡಿಗಳು ಇಲ್ಲವಾಗುತ್ತಿರುವ ಈ ಸಂದರ್ಭದಲ್ಲಿ ದಲಿತರಿಗೆ, ಅದರಲ್ಲೂ ‘ಮಾದಿಗ’ ಜನಾಂಗಕ್ಕೆ ಕೃತಿ ಬೈಬಲ್ ಎಂದೇ ಹೇಳಬಹುದು.

-ಡಾ.ಕೆ.ವಿ.ಮುದ್ದವೀರಪ್ಪ, ತುಮಕೂರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...