Homeಕರ್ನಾಟಕಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

- Advertisement -
- Advertisement -

ದಲಿತರಿಗೆ ಮಾತ್ರ ಮೀಸಲಾತಿಯಿದೆ ಎಂಬಂತೆ ಬಿಂಬಿಸಿ ಅವರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾವಳ್ಳಿ ಶಂಕರ್ ಹೇಳಿದರು. ಬುಧವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಷಯದಲ್ಲಿ ‘ದಲಿತ ಸಮುದಾಯದ ಆಗ್ರಹಗಳು’ ಎಂಬ ವಿಚಾರದ ಬಗ್ಗೆ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

ಭಾರತದಲ್ಲಿ ಅಕ್ಷರಸ್ಥರಲ್ಲೂ ಜಾತಿ ಇನ್ನೂ ಬಿಗಿಯಾಗುತ್ತಿವೆ. ಮರ್ಯಾದ ಹತ್ಯೆ, ಅಶ್ಪ್ರಶ್ಯತೆ ಇನ್ನೂ ಜಾಸ್ತಿಯಾಗುತ್ತಿವೆ. ಇದನ್ನು ಉದ್ದೇಶಿಸಿ ಮಾತನಾಡದೆ ಕೇವಲ ಕಾರ್ಪೊರೇಟ್, ಶ್ರಿಮಂತರು, ಸರ್ಕಾರ ಎಂದು ಮಾತನಾಡಿದರೆ ದಲಿತರು ಹತ್ತಿರ ಬರುವುದಿಲ್ಲ. ಕಂಬಾಲಪಳ್ಳಿ ದುರ್ಘಟನೆಗೆ 25 ವರ್ಷಗಳಾಯಿತು. ಅಲ್ಲಿನ ದಲಿತರ ಸುಟ್ಟ ವಾಸನೆ ಇನ್ನೂ ಕಾಡುತ್ತಿದೆ. ದಲಿತರನ್ನು ಇನ್ನೂ ಕೊಲ್ಲುತ್ತಲೆ ಇದ್ದಾರೆ ಎಂದು ಮಾವಳ್ಳಿ ಶಂಕರ್ ಅವರು ಹೇಳಿದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

“ದಲಿತರ ವಿರುದ್ಧ ನಡೆದ ಎಲ್ಲಾ ಘಟನೆಗಳಲ್ಲಿ ದಲಿತರು ಕೂಲಿ ಜಾಸ್ತಿ ಕೇಳಿದ್ದಕ್ಕೆ ಮಾಡಲಾಗಿದೆ. ಎಲ್ಲಾ ಅಂಕಿ ಅಂಶಗಳು, ಅಧ್ಯಯನಗಳು ಮತ್ತು ವರದಿಗಳು ದಲಿತರ ಸಮಸ್ಯೆ ಇವತ್ತಿಗೂ ಹಾಗೆ ಇದೆ ಎಂದು ಹೇಳುತ್ತಿವೆ. ಎಷ್ಟೆ ಸಮಾಜ ಸುಧಾರಕರು, ಹೋರಾಟಗಾರರು ಬಂದರೂ ಸಮಸ್ಯೆ ಈಡೇರಿಲ್ಲ. ಮೀಸಲಾತಿಯನ್ನು ದಲಿತರಿಗೆ ಮಾತ್ರ ಕೊಡಲಾಗುತ್ತಿದೆ ಎಂಬ ಭಾವನೆಯಿದೆ. ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ” ಎಂದು ಅವರು ಹೇಳಿದರು.

“ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವ ಕಾನೂನು ತಂದರು. ಆದರೆ ಕೊಟ್ಟಂತಹ ಹಣ ಏನಾಗಿದೆ ಎಂದು ತಿಳಿಯುತ್ತಿಲ್ಲ. 1 ಕೋಟಿಗೂ ಹೆಚ್ಚು ಇರುವ ದಲಿತರಿಗಾಗಿ ಈ ಹಣವನ್ನು ಬಳಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ಈ ದುಡ್ಡು ಎಲ್ಲಿ ಹೋಯಿತು. ದಲಿತರು ಈಗಲೂ ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಕನಿಷ್ಠ ಈ ಹಣವನ್ನು ದಲಿತರ ಮನೆ ಮನೆಗೆ ಕೊಟ್ಟರೆ ಸಾಲುತ್ತಿತ್ತು” ಎಂದು ಅವರು ತಿಳಿಸಿದರು.

“ಗ್ಯಾರೆಂಟಿ ಯೋಜನೆಗಾಗಿ ಈ ಹಣವನ್ನು ಬಳಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಈ ಹಣವನ್ನು ದಲಿತರು ಬಳಸಿ ಸಬಲೀಕರಣ ಆಗಿದ್ದಾರೆ ಎಂದು ಯಾವ ಅಂಕಿ ಅಂಶಗಳನ್ನು ಇಟ್ಟು ಹೇಳುತ್ತಿದ್ದಾರೆ. ಸರ್ಕಾರದಿಂದ ದಲಿತರಿಗೆ ಏನೂ ಸಿಗದಿದ್ದರೂ, ದಲಿತರಿಗೆ ಮಾತ್ರ ಸರ್ಕಾರ ಕೊಡುತ್ತಿದೆ ಎಂಬಂತೆ ಸಮಾಜದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹತ್ತಾರು ಎಕರೆ ಭೂಮಿಯಿರುವ ಭೂಮಾಲಿಕ ರೈತರೆ ಕಷ್ಟದಲ್ಲಿ ಇದಬೇಕಾದರೆ, ಭೂ ಹೀನ ದಲಿತರು, ಕೃಷಿ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಪರಿಸ್ಥಿತಿ ಹೇಗಿರಬಹುದು” ಎಂದು ಅವರು ಕೇಳಿದರು.

“ದಲಿತ ಸಮುದಾಯದ ವಿದ್ಯಾರ್ಥಿಗಳು ದನಗಳ ಕೊಟ್ಟಿಗೆಯಲ್ಲಿ ಇರುವ ಹಾಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿವೆ. ಸಂವೇದನ ಇರುವ ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಕ್ಕಳಿಗೂ ಕರಾಟೆಗಳನ್ನು ಕಲಿಸುವಂತೆ ವ್ಯವಸ್ಥೆ ಮಾಡಬೇಕಿತ್ತು. ಕೇಂದ್ರ ಸರ್ಕಾರವು ಮಾರವಾಡಿ ಬಡ್ಡಿ ವಸೂಲಿ ಮಾಡುವ ರೀತಿ 60%-40% ಎಂದು ಆಟವಾಡುತ್ತಿದೆ. ಎರಡೂ ಸರ್ಕಾರಗಳು ದಲಿತರ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...