Homeಕರ್ನಾಟಕಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

- Advertisement -
- Advertisement -

ದಲಿತರಿಗೆ ಮಾತ್ರ ಮೀಸಲಾತಿಯಿದೆ ಎಂಬಂತೆ ಬಿಂಬಿಸಿ ಅವರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾವಳ್ಳಿ ಶಂಕರ್ ಹೇಳಿದರು. ಬುಧವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಷಯದಲ್ಲಿ ‘ದಲಿತ ಸಮುದಾಯದ ಆಗ್ರಹಗಳು’ ಎಂಬ ವಿಚಾರದ ಬಗ್ಗೆ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

ಭಾರತದಲ್ಲಿ ಅಕ್ಷರಸ್ಥರಲ್ಲೂ ಜಾತಿ ಇನ್ನೂ ಬಿಗಿಯಾಗುತ್ತಿವೆ. ಮರ್ಯಾದ ಹತ್ಯೆ, ಅಶ್ಪ್ರಶ್ಯತೆ ಇನ್ನೂ ಜಾಸ್ತಿಯಾಗುತ್ತಿವೆ. ಇದನ್ನು ಉದ್ದೇಶಿಸಿ ಮಾತನಾಡದೆ ಕೇವಲ ಕಾರ್ಪೊರೇಟ್, ಶ್ರಿಮಂತರು, ಸರ್ಕಾರ ಎಂದು ಮಾತನಾಡಿದರೆ ದಲಿತರು ಹತ್ತಿರ ಬರುವುದಿಲ್ಲ. ಕಂಬಾಲಪಳ್ಳಿ ದುರ್ಘಟನೆಗೆ 25 ವರ್ಷಗಳಾಯಿತು. ಅಲ್ಲಿನ ದಲಿತರ ಸುಟ್ಟ ವಾಸನೆ ಇನ್ನೂ ಕಾಡುತ್ತಿದೆ. ದಲಿತರನ್ನು ಇನ್ನೂ ಕೊಲ್ಲುತ್ತಲೆ ಇದ್ದಾರೆ ಎಂದು ಮಾವಳ್ಳಿ ಶಂಕರ್ ಅವರು ಹೇಳಿದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

“ದಲಿತರ ವಿರುದ್ಧ ನಡೆದ ಎಲ್ಲಾ ಘಟನೆಗಳಲ್ಲಿ ದಲಿತರು ಕೂಲಿ ಜಾಸ್ತಿ ಕೇಳಿದ್ದಕ್ಕೆ ಮಾಡಲಾಗಿದೆ. ಎಲ್ಲಾ ಅಂಕಿ ಅಂಶಗಳು, ಅಧ್ಯಯನಗಳು ಮತ್ತು ವರದಿಗಳು ದಲಿತರ ಸಮಸ್ಯೆ ಇವತ್ತಿಗೂ ಹಾಗೆ ಇದೆ ಎಂದು ಹೇಳುತ್ತಿವೆ. ಎಷ್ಟೆ ಸಮಾಜ ಸುಧಾರಕರು, ಹೋರಾಟಗಾರರು ಬಂದರೂ ಸಮಸ್ಯೆ ಈಡೇರಿಲ್ಲ. ಮೀಸಲಾತಿಯನ್ನು ದಲಿತರಿಗೆ ಮಾತ್ರ ಕೊಡಲಾಗುತ್ತಿದೆ ಎಂಬ ಭಾವನೆಯಿದೆ. ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ” ಎಂದು ಅವರು ಹೇಳಿದರು.

“ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವ ಕಾನೂನು ತಂದರು. ಆದರೆ ಕೊಟ್ಟಂತಹ ಹಣ ಏನಾಗಿದೆ ಎಂದು ತಿಳಿಯುತ್ತಿಲ್ಲ. 1 ಕೋಟಿಗೂ ಹೆಚ್ಚು ಇರುವ ದಲಿತರಿಗಾಗಿ ಈ ಹಣವನ್ನು ಬಳಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ಈ ದುಡ್ಡು ಎಲ್ಲಿ ಹೋಯಿತು. ದಲಿತರು ಈಗಲೂ ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಕನಿಷ್ಠ ಈ ಹಣವನ್ನು ದಲಿತರ ಮನೆ ಮನೆಗೆ ಕೊಟ್ಟರೆ ಸಾಲುತ್ತಿತ್ತು” ಎಂದು ಅವರು ತಿಳಿಸಿದರು.

“ಗ್ಯಾರೆಂಟಿ ಯೋಜನೆಗಾಗಿ ಈ ಹಣವನ್ನು ಬಳಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಈ ಹಣವನ್ನು ದಲಿತರು ಬಳಸಿ ಸಬಲೀಕರಣ ಆಗಿದ್ದಾರೆ ಎಂದು ಯಾವ ಅಂಕಿ ಅಂಶಗಳನ್ನು ಇಟ್ಟು ಹೇಳುತ್ತಿದ್ದಾರೆ. ಸರ್ಕಾರದಿಂದ ದಲಿತರಿಗೆ ಏನೂ ಸಿಗದಿದ್ದರೂ, ದಲಿತರಿಗೆ ಮಾತ್ರ ಸರ್ಕಾರ ಕೊಡುತ್ತಿದೆ ಎಂಬಂತೆ ಸಮಾಜದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹತ್ತಾರು ಎಕರೆ ಭೂಮಿಯಿರುವ ಭೂಮಾಲಿಕ ರೈತರೆ ಕಷ್ಟದಲ್ಲಿ ಇದಬೇಕಾದರೆ, ಭೂ ಹೀನ ದಲಿತರು, ಕೃಷಿ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಪರಿಸ್ಥಿತಿ ಹೇಗಿರಬಹುದು” ಎಂದು ಅವರು ಕೇಳಿದರು.

“ದಲಿತ ಸಮುದಾಯದ ವಿದ್ಯಾರ್ಥಿಗಳು ದನಗಳ ಕೊಟ್ಟಿಗೆಯಲ್ಲಿ ಇರುವ ಹಾಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿವೆ. ಸಂವೇದನ ಇರುವ ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಕ್ಕಳಿಗೂ ಕರಾಟೆಗಳನ್ನು ಕಲಿಸುವಂತೆ ವ್ಯವಸ್ಥೆ ಮಾಡಬೇಕಿತ್ತು. ಕೇಂದ್ರ ಸರ್ಕಾರವು ಮಾರವಾಡಿ ಬಡ್ಡಿ ವಸೂಲಿ ಮಾಡುವ ರೀತಿ 60%-40% ಎಂದು ಆಟವಾಡುತ್ತಿದೆ. ಎರಡೂ ಸರ್ಕಾರಗಳು ದಲಿತರ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...