Homeಕರ್ನಾಟಕಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

- Advertisement -
- Advertisement -

ದಲಿತರಿಗೆ ಮಾತ್ರ ಮೀಸಲಾತಿಯಿದೆ ಎಂಬಂತೆ ಬಿಂಬಿಸಿ ಅವರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾವಳ್ಳಿ ಶಂಕರ್ ಹೇಳಿದರು. ಬುಧವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಷಯದಲ್ಲಿ ‘ದಲಿತ ಸಮುದಾಯದ ಆಗ್ರಹಗಳು’ ಎಂಬ ವಿಚಾರದ ಬಗ್ಗೆ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

ಭಾರತದಲ್ಲಿ ಅಕ್ಷರಸ್ಥರಲ್ಲೂ ಜಾತಿ ಇನ್ನೂ ಬಿಗಿಯಾಗುತ್ತಿವೆ. ಮರ್ಯಾದ ಹತ್ಯೆ, ಅಶ್ಪ್ರಶ್ಯತೆ ಇನ್ನೂ ಜಾಸ್ತಿಯಾಗುತ್ತಿವೆ. ಇದನ್ನು ಉದ್ದೇಶಿಸಿ ಮಾತನಾಡದೆ ಕೇವಲ ಕಾರ್ಪೊರೇಟ್, ಶ್ರಿಮಂತರು, ಸರ್ಕಾರ ಎಂದು ಮಾತನಾಡಿದರೆ ದಲಿತರು ಹತ್ತಿರ ಬರುವುದಿಲ್ಲ. ಕಂಬಾಲಪಳ್ಳಿ ದುರ್ಘಟನೆಗೆ 25 ವರ್ಷಗಳಾಯಿತು. ಅಲ್ಲಿನ ದಲಿತರ ಸುಟ್ಟ ವಾಸನೆ ಇನ್ನೂ ಕಾಡುತ್ತಿದೆ. ದಲಿತರನ್ನು ಇನ್ನೂ ಕೊಲ್ಲುತ್ತಲೆ ಇದ್ದಾರೆ ಎಂದು ಮಾವಳ್ಳಿ ಶಂಕರ್ ಅವರು ಹೇಳಿದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

“ದಲಿತರ ವಿರುದ್ಧ ನಡೆದ ಎಲ್ಲಾ ಘಟನೆಗಳಲ್ಲಿ ದಲಿತರು ಕೂಲಿ ಜಾಸ್ತಿ ಕೇಳಿದ್ದಕ್ಕೆ ಮಾಡಲಾಗಿದೆ. ಎಲ್ಲಾ ಅಂಕಿ ಅಂಶಗಳು, ಅಧ್ಯಯನಗಳು ಮತ್ತು ವರದಿಗಳು ದಲಿತರ ಸಮಸ್ಯೆ ಇವತ್ತಿಗೂ ಹಾಗೆ ಇದೆ ಎಂದು ಹೇಳುತ್ತಿವೆ. ಎಷ್ಟೆ ಸಮಾಜ ಸುಧಾರಕರು, ಹೋರಾಟಗಾರರು ಬಂದರೂ ಸಮಸ್ಯೆ ಈಡೇರಿಲ್ಲ. ಮೀಸಲಾತಿಯನ್ನು ದಲಿತರಿಗೆ ಮಾತ್ರ ಕೊಡಲಾಗುತ್ತಿದೆ ಎಂಬ ಭಾವನೆಯಿದೆ. ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ” ಎಂದು ಅವರು ಹೇಳಿದರು.

“ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವ ಕಾನೂನು ತಂದರು. ಆದರೆ ಕೊಟ್ಟಂತಹ ಹಣ ಏನಾಗಿದೆ ಎಂದು ತಿಳಿಯುತ್ತಿಲ್ಲ. 1 ಕೋಟಿಗೂ ಹೆಚ್ಚು ಇರುವ ದಲಿತರಿಗಾಗಿ ಈ ಹಣವನ್ನು ಬಳಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ಈ ದುಡ್ಡು ಎಲ್ಲಿ ಹೋಯಿತು. ದಲಿತರು ಈಗಲೂ ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಕನಿಷ್ಠ ಈ ಹಣವನ್ನು ದಲಿತರ ಮನೆ ಮನೆಗೆ ಕೊಟ್ಟರೆ ಸಾಲುತ್ತಿತ್ತು” ಎಂದು ಅವರು ತಿಳಿಸಿದರು.

“ಗ್ಯಾರೆಂಟಿ ಯೋಜನೆಗಾಗಿ ಈ ಹಣವನ್ನು ಬಳಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಈ ಹಣವನ್ನು ದಲಿತರು ಬಳಸಿ ಸಬಲೀಕರಣ ಆಗಿದ್ದಾರೆ ಎಂದು ಯಾವ ಅಂಕಿ ಅಂಶಗಳನ್ನು ಇಟ್ಟು ಹೇಳುತ್ತಿದ್ದಾರೆ. ಸರ್ಕಾರದಿಂದ ದಲಿತರಿಗೆ ಏನೂ ಸಿಗದಿದ್ದರೂ, ದಲಿತರಿಗೆ ಮಾತ್ರ ಸರ್ಕಾರ ಕೊಡುತ್ತಿದೆ ಎಂಬಂತೆ ಸಮಾಜದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹತ್ತಾರು ಎಕರೆ ಭೂಮಿಯಿರುವ ಭೂಮಾಲಿಕ ರೈತರೆ ಕಷ್ಟದಲ್ಲಿ ಇದಬೇಕಾದರೆ, ಭೂ ಹೀನ ದಲಿತರು, ಕೃಷಿ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಪರಿಸ್ಥಿತಿ ಹೇಗಿರಬಹುದು” ಎಂದು ಅವರು ಕೇಳಿದರು.

“ದಲಿತ ಸಮುದಾಯದ ವಿದ್ಯಾರ್ಥಿಗಳು ದನಗಳ ಕೊಟ್ಟಿಗೆಯಲ್ಲಿ ಇರುವ ಹಾಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿವೆ. ಸಂವೇದನ ಇರುವ ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಕ್ಕಳಿಗೂ ಕರಾಟೆಗಳನ್ನು ಕಲಿಸುವಂತೆ ವ್ಯವಸ್ಥೆ ಮಾಡಬೇಕಿತ್ತು. ಕೇಂದ್ರ ಸರ್ಕಾರವು ಮಾರವಾಡಿ ಬಡ್ಡಿ ವಸೂಲಿ ಮಾಡುವ ರೀತಿ 60%-40% ಎಂದು ಆಟವಾಡುತ್ತಿದೆ. ಎರಡೂ ಸರ್ಕಾರಗಳು ದಲಿತರ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...