Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...