Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....