Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...