Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...