Homeಕರ್ನಾಟಕಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ

- Advertisement -
- Advertisement -

‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ.

5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ 1ಬಿ ಜನಸಂಖ್ಯೆ 73,92,313 ಲಕ್ಷ ಹಾಗೂ ಪ್ರವರ್ಗ 2ಎ ಜನಸಂಖ್ಯೆ 77,78,209 ಲಕ್ಷ ಇದೆ.

ಪ್ರವರ್ಗ 2ಬಿ ಜನಸಂಖ್ಯೆ 75,25,880 ಲಕ್ಷ, ಪ್ರವರ್ಗ 3ಎ ಜನಸಂಖ್ಯೆ 72,99,577 ಲಕ್ಷ, ಪ್ರವರ್ಗ 3ಬಿ ಜನಸಂಖ್ಯೆ 81,37,536 ಲಕ್ಷ ಇದೆ.

ಪ್ರವರ್ಗ 1 ರಲ್ಲಿ 97 ಜಾತಿಗಳು, ಪ್ರವರ್ಗ  2ಎ ನಲ್ಲಿ 102 ಜಾತಿಗಳು, ಪ್ರವರ್ಗ 2ಬಿ ನಲ್ಲಿ ಮುಸ್ಲಿಂ, ಪ್ರವರ್ಗ 3ಎ ನಲ್ಲಿ ಒಕ್ಕಲಿಗ , ಬಲಿಜ, ಕೊಡವ ಸಮುದಾಯಗಳಿವೆ.

ಪ್ರವರ್ಗ 3ಬಿ ನಲ್ಲಿ ಲಿಂಗಾಯತ–ವೀರಶೈವ ಲಿಂಗಾಯತ, ಲಿಂಗಾಯತ ಉಪ ಪಂಗಡಗಳು, ಮರಾಠ, ಕೊಂಕಣ ಮರಾಠ, ಕ್ಷತ್ರಿಯ, ಕ್ರಿಶ್ಚಿಯನ್ ಸಮುದಾಯಗಳಿವೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942

ಎಸ್‌ಸಿ ಜನಸಂಖ್ಯೆ 1,09,29,347

ಎಸ್‌ಟಿ ಜನಸಂಖ್ಯೆ 42,81,289

ಪ್ರವರ್ಗ 1ಎ ಜನಸಂಖ್ಯೆ 34,96,638

ಪ್ರವರ್ಗ 1ಬಿ ಜನಸಂಖ್ಯೆ 73,92,313

ಪ್ರವರ್ಗ 2ಎ ಜನಸಂಖ್ಯೆ 77,78,209

ಪ್ರವರ್ಗ 2ಬಿ ಜನಸಂಖ್ಯೆ 75,25,880

ಪ್ರವರ್ಗ 3ಎ ಜನಸಂಖ್ಯೆ 72,99,577

ಪ್ರವರ್ಗ 3ಬಿ ಜನಸಂಖ್ಯೆ 81,37,536

ಪ್ರವರ್ಗ – 1 – 97 ಜಾತಿಗಳು

ಪ್ರವರ್ಗ – 2ಎ – 102 ಜಾತಿಗಳು

ಪ್ರವರ್ಗ – 2ಬಿ – ಮುಸ್ಲಿಂ

ಪ್ರವರ್ಗ – 3ಎ – ಒಕ್ಕಲಿಗ , ಬಲಿಜ, ಕೊಡವ

ಆಯೋಗ ಶಿಫಾರಸುಗಳೇನು?

ಒಬಿಸಿ ಸಮುದಾಯದ ಶೇ.32ರಷ್ಟು ಮೀಸಲಾತಿಯನ್ನು ಶೇ.51ಕ್ಕೆ ಹೆಚ್ಚಿಸಲು ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಮೀಸಲಾತಿ 5 ವಿಭಾಗಗಳಲ್ಲಿ ವರ್ಗೀಕರಣವಾಗಿದೆ. ಪ್ರವರ್ಗ 1 ಅನ್ನು ಎರಡು ವಿಭಾಗಗಳನ್ನಾಗಿ ಮಾಡಿ ವರ್ಗೀಕರಣ ಮಾಡಲಾಗಿದೆ. 1ಎ ಮತ್ತು 1ಬಿ ಎಂದು ವರ್ಗಿಕರಿಸುವಂತೆ ಶಿಫಾರಸು ಆಗಿದೆ. ಕಾಯಕ, ಕುಲಕಸುಬು ಆಧಾರಿತ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಈ ವರ್ಗೀಕರಣದಲ್ಲಿ ಮನ್ನಣೆ ನೀಡಲಾಗಿದೆ. ಹಾಲಿ ಇರುವ ಪ್ರವರ್ಗ 1ಕ್ಕೆ ಶೇ. 4ರಷ್ಟು ಮೀಸಲಾತಿ ಇದೆ . ಇದನ್ನು 2 ಭಾಗಗಳನ್ನಾಗಿ ಮಾಡಿ 1ಎಗೆ ಶೇ. 6ರಷ್ಟು, 1ಬಿಗೆ ಶೇ. 12ರಷ್ಟು ಮೀಸಲಾತಿಗೆ ಸಲಹೆ ನೀಡಲಾಗಿದೆ. ಹಾಗೇ, ಹಾಲಿ 2ಎಗೆ ಇರುವ ಶೇ.15ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಇಳಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಆದರೆ 2ಬಿ ಅಂದರೆ ಮುಸ್ಲಿಂ ಸಮುದಾಯಕ್ಕಿರುವ ಶೇ. 4ರಷ್ಟು ಮೀಸಲಾತಿಯನ್ನು ಡಬಲ್ ಅಂದರೆ, ಶೇ. 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಹಾಗೇ 3ಎಗಿರುವ ಶೇ. 4ರಷ್ಟು ಮೀಸಲಾತಿಯನ್ನು ಶೇ. 7ಕ್ಕೆ ಏರಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇನ್ನು. ಶೇ. 5ರಷ್ಟಿರುವ 3ಬಿ ಮೀಸಲಾತಿಯನ್ನು ಶೇ. 8ಕ್ಕೆ ಹೆಚ್ಚಿಸುವಂತೆ ಜಾತಿ ಗಣತಿ ವರದಿ ಹೇಳಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಅಂಗೀಕರಿಸಿದ ರಾಜ್ಯ ಸಚಿವ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...