Homeಚಳವಳಿಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

- Advertisement -
- Advertisement -

ದಲಿತರು ಒಗ್ಗಟ್ಟಾದರೆ ಒಂದು ಕೋಟಿ, ಛಿದ್ರಗೊಂಡರೆ ಕಾಯುತ್ತಿದೆ ಚಾಟಿ.. ಹೋಗೋಣ ಬೆಂಗಳೂರಿಗೆ, ಅಂಬೇಡ್ಕರ್ ದಾರಿಗೆ, ಹೋರಾಟದ ತೇರಿಗೆ, ಸಮಾನತೆಯ ಬೆಳಕಿಗೆ… ಕೋಮುವಾದಿ ಕೂಟದಿಂದ ಸಂವಿಧಾನಕ್ಕೆ ಆಪತ್ತು, ದಮನಿತರ ಒಗ್ಗಟ್ಟಿನಿಂದ ಭಾರತಕ್ಕೆ ತಾಕತ್ತು.. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ, ನೊಂದವರ ಐಕ್ಯ ಹೋರಾಟ, ಇಂದಲ್ಲ ನಾಳೆ ಫಲ ಕೊಡುತ್ತದೆ.. ಸಂಬಂಜ ಅನ್ನೋದು ದೊಡ್ಡದು ಕನಾ.. ಈ ರೀತಿಯ ವೈವಿಧ್ಯಮಯ, ವಿಚಾರಪೂರ್ಣ ಮಾಹಿತಿಗಳುಳ್ಳ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕದ ಎಲ್ಲಾ ದಲಿತ ಸಂಘಟನೆಗಳೂ ಒಗ್ಗೂಡಿ ಹೋರಾಡುವ ಐತಿಹಾಸಿಕ ಸಂದರ್ಭ ಸನ್ನಿಹಿತವಾಗಿದೆ.  ಹಲವು ಹಂತದ ಮಾತುಕತೆ, ಚರ್ಚೆ ಮೂಲಕ 12 ಪ್ರಮುಖ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪ್ರಯತ್ನದ ಭಾಗವಾಗಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರೂಪುಗೊಂಡಿದೆ ಎಂದು ಹಿರಿಯ ಚಿಂತಕರಾದ ಇಂದೂಧರ ಹೊನ್ನಾಪುರರವರು ಘೋಷಿಸಿದ್ದರು. ಸಮಿತಿಯ ಮೊದಲ ಐಕ್ಯ ಕಾರ್ಯಕ್ರಮ ಡಿಸೆಂಬರ್ 6 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣದ ದಿನದಂದು ನಡೆಯಲಿದೆ.

ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್‌-ಬಿಜೆಪಿ ದುರಾಡಳಿತದ ವಿರುದ್ಧ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ – ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜರುಗಲಿದೆ.

ದಲಿತ ಮುಖಂಡರಾದ ಎನ್, ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಾ.ಡಿ.ಜಿ ಸಾಗರ್, ಲಕ್ಷ್ಮೀನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್ ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್ ಮತ್ತು ಎಸ್.ಆರ್ ಕೊಲ್ಲೂರುರವರು ಸಮಾವೇಶದ ಮುಂದಾಳತ್ವ ವಹಿಸಿದ್ದಾರೆ.

ಅಲ್ಲದೆ ದೇವನೂರ ಮಹಾದೇವ, ಎಸ್.ಮರಿಸ್ವಾಮಿ, ಇಂದೂಧರ ಹೊನ್ನಾಪುರ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್, ಹೆಚ್.ಎಂ ರುದ್ರಸ್ವಾಮಿ, ಲಕ್ಷ್ಮೀಪತಿ ಕೋಲಾರ, ಮಂಗ್ಳೂರ ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್, ಕೆ.ದೊರೈರಾಜ್, ಸಿ.ಬಸವಲಿಂಗಯ್ಯ, ಹೆಚ್, ಜನಾರ್ಧನ್ ಜನ್ನಿ, ಕುಪ್ಪೆ ನಾಗರಾಜ್, ಗಂಗಮ್ಮ ತುಮಕೂರು, ಭಾರತಿ ರಾಜಣ್ಣ, ಪುರುಷೋತ್ತಮ್ ದಾಸ್, ಸಿ.ಜಿ ಶ್ರೀನಿವಾಸ್, ಪಿಚ್ಚಳ್ಳಿ ಶ್ರೀನಿವಾಸ್ ಮತ್ತು ಗೊಲ್ಲಹಳ್ಳಿ ಶಿವಪ್ರಸಾದ್‌ರವರು ಸಮಿತಿಯ ಜೊತೆಗಿದ್ದಾರೆ.

ಖಾಸಗೀಕರಣ, ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮೀಸಲಾತಿಯ ಅಸ್ತಿತ್ವ ನಾಶವಾಗುತ್ತಿದ್ದರೆ, ಮತ್ತೊಂದೆಡೆ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಕಡಿತ, ಪಠ್ಯಗಳ ಕೇಸರಿಕರಣ ನಡೆಯುತ್ತಿದೆ. ಅದೇ ಸಮಯದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟಿ ಬೆಳೆಸಿದ ತಳ ಸಮುದಾಯಗಳ ವೈವಿಧ್ಯಮತ ಸಂಸ್ಕೃತಿ, ಆಚರಣೆಗಳನ್ನು ಬಲಿಕೊಟ್ಟು ಬ್ರಾಹ್ಮಣ್ಯ ತಾರತಮ್ಯ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಬ್ರಾಹ್ಮಣ್ಯವಾದ ಮತ್ತು ಬಂಡವಾಳವಾದವನ್ನು ಧಿಕ್ಕರಿಸುವುದಕ್ಕಾಗಿ, ಅಂಬೇಡ್ಕರ್‌ರವರ ಹೋರಾಟದ ಫಲವಾಗಿ ದಕ್ಕಿದ ಹಕ್ಕುಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಡಿ.6 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯುತ್ತಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...