Homeಚಳವಳಿಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

- Advertisement -
- Advertisement -

ದಲಿತರು ಒಗ್ಗಟ್ಟಾದರೆ ಒಂದು ಕೋಟಿ, ಛಿದ್ರಗೊಂಡರೆ ಕಾಯುತ್ತಿದೆ ಚಾಟಿ.. ಹೋಗೋಣ ಬೆಂಗಳೂರಿಗೆ, ಅಂಬೇಡ್ಕರ್ ದಾರಿಗೆ, ಹೋರಾಟದ ತೇರಿಗೆ, ಸಮಾನತೆಯ ಬೆಳಕಿಗೆ… ಕೋಮುವಾದಿ ಕೂಟದಿಂದ ಸಂವಿಧಾನಕ್ಕೆ ಆಪತ್ತು, ದಮನಿತರ ಒಗ್ಗಟ್ಟಿನಿಂದ ಭಾರತಕ್ಕೆ ತಾಕತ್ತು.. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ, ನೊಂದವರ ಐಕ್ಯ ಹೋರಾಟ, ಇಂದಲ್ಲ ನಾಳೆ ಫಲ ಕೊಡುತ್ತದೆ.. ಸಂಬಂಜ ಅನ್ನೋದು ದೊಡ್ಡದು ಕನಾ.. ಈ ರೀತಿಯ ವೈವಿಧ್ಯಮಯ, ವಿಚಾರಪೂರ್ಣ ಮಾಹಿತಿಗಳುಳ್ಳ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕದ ಎಲ್ಲಾ ದಲಿತ ಸಂಘಟನೆಗಳೂ ಒಗ್ಗೂಡಿ ಹೋರಾಡುವ ಐತಿಹಾಸಿಕ ಸಂದರ್ಭ ಸನ್ನಿಹಿತವಾಗಿದೆ.  ಹಲವು ಹಂತದ ಮಾತುಕತೆ, ಚರ್ಚೆ ಮೂಲಕ 12 ಪ್ರಮುಖ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪ್ರಯತ್ನದ ಭಾಗವಾಗಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರೂಪುಗೊಂಡಿದೆ ಎಂದು ಹಿರಿಯ ಚಿಂತಕರಾದ ಇಂದೂಧರ ಹೊನ್ನಾಪುರರವರು ಘೋಷಿಸಿದ್ದರು. ಸಮಿತಿಯ ಮೊದಲ ಐಕ್ಯ ಕಾರ್ಯಕ್ರಮ ಡಿಸೆಂಬರ್ 6 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣದ ದಿನದಂದು ನಡೆಯಲಿದೆ.

ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್‌-ಬಿಜೆಪಿ ದುರಾಡಳಿತದ ವಿರುದ್ಧ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ – ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜರುಗಲಿದೆ.

ದಲಿತ ಮುಖಂಡರಾದ ಎನ್, ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಾ.ಡಿ.ಜಿ ಸಾಗರ್, ಲಕ್ಷ್ಮೀನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್ ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್ ಮತ್ತು ಎಸ್.ಆರ್ ಕೊಲ್ಲೂರುರವರು ಸಮಾವೇಶದ ಮುಂದಾಳತ್ವ ವಹಿಸಿದ್ದಾರೆ.

ಅಲ್ಲದೆ ದೇವನೂರ ಮಹಾದೇವ, ಎಸ್.ಮರಿಸ್ವಾಮಿ, ಇಂದೂಧರ ಹೊನ್ನಾಪುರ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್, ಹೆಚ್.ಎಂ ರುದ್ರಸ್ವಾಮಿ, ಲಕ್ಷ್ಮೀಪತಿ ಕೋಲಾರ, ಮಂಗ್ಳೂರ ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್, ಕೆ.ದೊರೈರಾಜ್, ಸಿ.ಬಸವಲಿಂಗಯ್ಯ, ಹೆಚ್, ಜನಾರ್ಧನ್ ಜನ್ನಿ, ಕುಪ್ಪೆ ನಾಗರಾಜ್, ಗಂಗಮ್ಮ ತುಮಕೂರು, ಭಾರತಿ ರಾಜಣ್ಣ, ಪುರುಷೋತ್ತಮ್ ದಾಸ್, ಸಿ.ಜಿ ಶ್ರೀನಿವಾಸ್, ಪಿಚ್ಚಳ್ಳಿ ಶ್ರೀನಿವಾಸ್ ಮತ್ತು ಗೊಲ್ಲಹಳ್ಳಿ ಶಿವಪ್ರಸಾದ್‌ರವರು ಸಮಿತಿಯ ಜೊತೆಗಿದ್ದಾರೆ.

ಖಾಸಗೀಕರಣ, ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮೀಸಲಾತಿಯ ಅಸ್ತಿತ್ವ ನಾಶವಾಗುತ್ತಿದ್ದರೆ, ಮತ್ತೊಂದೆಡೆ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಕಡಿತ, ಪಠ್ಯಗಳ ಕೇಸರಿಕರಣ ನಡೆಯುತ್ತಿದೆ. ಅದೇ ಸಮಯದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟಿ ಬೆಳೆಸಿದ ತಳ ಸಮುದಾಯಗಳ ವೈವಿಧ್ಯಮತ ಸಂಸ್ಕೃತಿ, ಆಚರಣೆಗಳನ್ನು ಬಲಿಕೊಟ್ಟು ಬ್ರಾಹ್ಮಣ್ಯ ತಾರತಮ್ಯ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಬ್ರಾಹ್ಮಣ್ಯವಾದ ಮತ್ತು ಬಂಡವಾಳವಾದವನ್ನು ಧಿಕ್ಕರಿಸುವುದಕ್ಕಾಗಿ, ಅಂಬೇಡ್ಕರ್‌ರವರ ಹೋರಾಟದ ಫಲವಾಗಿ ದಕ್ಕಿದ ಹಕ್ಕುಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಡಿ.6 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯುತ್ತಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...