Homeಚಳವಳಿಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

- Advertisement -
- Advertisement -

ದಲಿತರು ಒಗ್ಗಟ್ಟಾದರೆ ಒಂದು ಕೋಟಿ, ಛಿದ್ರಗೊಂಡರೆ ಕಾಯುತ್ತಿದೆ ಚಾಟಿ.. ಹೋಗೋಣ ಬೆಂಗಳೂರಿಗೆ, ಅಂಬೇಡ್ಕರ್ ದಾರಿಗೆ, ಹೋರಾಟದ ತೇರಿಗೆ, ಸಮಾನತೆಯ ಬೆಳಕಿಗೆ… ಕೋಮುವಾದಿ ಕೂಟದಿಂದ ಸಂವಿಧಾನಕ್ಕೆ ಆಪತ್ತು, ದಮನಿತರ ಒಗ್ಗಟ್ಟಿನಿಂದ ಭಾರತಕ್ಕೆ ತಾಕತ್ತು.. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ, ನೊಂದವರ ಐಕ್ಯ ಹೋರಾಟ, ಇಂದಲ್ಲ ನಾಳೆ ಫಲ ಕೊಡುತ್ತದೆ.. ಸಂಬಂಜ ಅನ್ನೋದು ದೊಡ್ಡದು ಕನಾ.. ಈ ರೀತಿಯ ವೈವಿಧ್ಯಮಯ, ವಿಚಾರಪೂರ್ಣ ಮಾಹಿತಿಗಳುಳ್ಳ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕದ ಎಲ್ಲಾ ದಲಿತ ಸಂಘಟನೆಗಳೂ ಒಗ್ಗೂಡಿ ಹೋರಾಡುವ ಐತಿಹಾಸಿಕ ಸಂದರ್ಭ ಸನ್ನಿಹಿತವಾಗಿದೆ.  ಹಲವು ಹಂತದ ಮಾತುಕತೆ, ಚರ್ಚೆ ಮೂಲಕ 12 ಪ್ರಮುಖ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪ್ರಯತ್ನದ ಭಾಗವಾಗಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರೂಪುಗೊಂಡಿದೆ ಎಂದು ಹಿರಿಯ ಚಿಂತಕರಾದ ಇಂದೂಧರ ಹೊನ್ನಾಪುರರವರು ಘೋಷಿಸಿದ್ದರು. ಸಮಿತಿಯ ಮೊದಲ ಐಕ್ಯ ಕಾರ್ಯಕ್ರಮ ಡಿಸೆಂಬರ್ 6 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣದ ದಿನದಂದು ನಡೆಯಲಿದೆ.

ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್‌-ಬಿಜೆಪಿ ದುರಾಡಳಿತದ ವಿರುದ್ಧ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ – ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜರುಗಲಿದೆ.

ದಲಿತ ಮುಖಂಡರಾದ ಎನ್, ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಾ.ಡಿ.ಜಿ ಸಾಗರ್, ಲಕ್ಷ್ಮೀನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್ ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್ ಮತ್ತು ಎಸ್.ಆರ್ ಕೊಲ್ಲೂರುರವರು ಸಮಾವೇಶದ ಮುಂದಾಳತ್ವ ವಹಿಸಿದ್ದಾರೆ.

ಅಲ್ಲದೆ ದೇವನೂರ ಮಹಾದೇವ, ಎಸ್.ಮರಿಸ್ವಾಮಿ, ಇಂದೂಧರ ಹೊನ್ನಾಪುರ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್, ಹೆಚ್.ಎಂ ರುದ್ರಸ್ವಾಮಿ, ಲಕ್ಷ್ಮೀಪತಿ ಕೋಲಾರ, ಮಂಗ್ಳೂರ ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್, ಕೆ.ದೊರೈರಾಜ್, ಸಿ.ಬಸವಲಿಂಗಯ್ಯ, ಹೆಚ್, ಜನಾರ್ಧನ್ ಜನ್ನಿ, ಕುಪ್ಪೆ ನಾಗರಾಜ್, ಗಂಗಮ್ಮ ತುಮಕೂರು, ಭಾರತಿ ರಾಜಣ್ಣ, ಪುರುಷೋತ್ತಮ್ ದಾಸ್, ಸಿ.ಜಿ ಶ್ರೀನಿವಾಸ್, ಪಿಚ್ಚಳ್ಳಿ ಶ್ರೀನಿವಾಸ್ ಮತ್ತು ಗೊಲ್ಲಹಳ್ಳಿ ಶಿವಪ್ರಸಾದ್‌ರವರು ಸಮಿತಿಯ ಜೊತೆಗಿದ್ದಾರೆ.

ಖಾಸಗೀಕರಣ, ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮೀಸಲಾತಿಯ ಅಸ್ತಿತ್ವ ನಾಶವಾಗುತ್ತಿದ್ದರೆ, ಮತ್ತೊಂದೆಡೆ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಕಡಿತ, ಪಠ್ಯಗಳ ಕೇಸರಿಕರಣ ನಡೆಯುತ್ತಿದೆ. ಅದೇ ಸಮಯದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟಿ ಬೆಳೆಸಿದ ತಳ ಸಮುದಾಯಗಳ ವೈವಿಧ್ಯಮತ ಸಂಸ್ಕೃತಿ, ಆಚರಣೆಗಳನ್ನು ಬಲಿಕೊಟ್ಟು ಬ್ರಾಹ್ಮಣ್ಯ ತಾರತಮ್ಯ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಬ್ರಾಹ್ಮಣ್ಯವಾದ ಮತ್ತು ಬಂಡವಾಳವಾದವನ್ನು ಧಿಕ್ಕರಿಸುವುದಕ್ಕಾಗಿ, ಅಂಬೇಡ್ಕರ್‌ರವರ ಹೋರಾಟದ ಫಲವಾಗಿ ದಕ್ಕಿದ ಹಕ್ಕುಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಡಿ.6 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯುತ್ತಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...