Homeಚಳವಳಿಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ಡಿ.6 ರಂದು ದಲಿತರ ಸಾಂಸ್ಕೃತಿಕ ಪ್ರತಿರೋಧ: ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

- Advertisement -
- Advertisement -

ದಲಿತರು ಒಗ್ಗಟ್ಟಾದರೆ ಒಂದು ಕೋಟಿ, ಛಿದ್ರಗೊಂಡರೆ ಕಾಯುತ್ತಿದೆ ಚಾಟಿ.. ಹೋಗೋಣ ಬೆಂಗಳೂರಿಗೆ, ಅಂಬೇಡ್ಕರ್ ದಾರಿಗೆ, ಹೋರಾಟದ ತೇರಿಗೆ, ಸಮಾನತೆಯ ಬೆಳಕಿಗೆ… ಕೋಮುವಾದಿ ಕೂಟದಿಂದ ಸಂವಿಧಾನಕ್ಕೆ ಆಪತ್ತು, ದಮನಿತರ ಒಗ್ಗಟ್ಟಿನಿಂದ ಭಾರತಕ್ಕೆ ತಾಕತ್ತು.. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ, ನೊಂದವರ ಐಕ್ಯ ಹೋರಾಟ, ಇಂದಲ್ಲ ನಾಳೆ ಫಲ ಕೊಡುತ್ತದೆ.. ಸಂಬಂಜ ಅನ್ನೋದು ದೊಡ್ಡದು ಕನಾ.. ಈ ರೀತಿಯ ವೈವಿಧ್ಯಮಯ, ವಿಚಾರಪೂರ್ಣ ಮಾಹಿತಿಗಳುಳ್ಳ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕರ್ನಾಟಕದ ಎಲ್ಲಾ ದಲಿತ ಸಂಘಟನೆಗಳೂ ಒಗ್ಗೂಡಿ ಹೋರಾಡುವ ಐತಿಹಾಸಿಕ ಸಂದರ್ಭ ಸನ್ನಿಹಿತವಾಗಿದೆ.  ಹಲವು ಹಂತದ ಮಾತುಕತೆ, ಚರ್ಚೆ ಮೂಲಕ 12 ಪ್ರಮುಖ ದಲಿತ ಸಂಘಟನೆಗಳ ಮುಖಂಡರು ನಡೆಸಿದ ಪ್ರಯತ್ನದ ಭಾಗವಾಗಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರೂಪುಗೊಂಡಿದೆ ಎಂದು ಹಿರಿಯ ಚಿಂತಕರಾದ ಇಂದೂಧರ ಹೊನ್ನಾಪುರರವರು ಘೋಷಿಸಿದ್ದರು. ಸಮಿತಿಯ ಮೊದಲ ಐಕ್ಯ ಕಾರ್ಯಕ್ರಮ ಡಿಸೆಂಬರ್ 6 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರ 66ನೇ ಪರಿನಿಬ್ಬಾಣದ ದಿನದಂದು ನಡೆಯಲಿದೆ.

ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್‌-ಬಿಜೆಪಿ ದುರಾಡಳಿತದ ವಿರುದ್ಧ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ – ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ’ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜರುಗಲಿದೆ.

ದಲಿತ ಮುಖಂಡರಾದ ಎನ್, ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಾ.ಡಿ.ಜಿ ಸಾಗರ್, ಲಕ್ಷ್ಮೀನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್ ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್ ಮತ್ತು ಎಸ್.ಆರ್ ಕೊಲ್ಲೂರುರವರು ಸಮಾವೇಶದ ಮುಂದಾಳತ್ವ ವಹಿಸಿದ್ದಾರೆ.

ಅಲ್ಲದೆ ದೇವನೂರ ಮಹಾದೇವ, ಎಸ್.ಮರಿಸ್ವಾಮಿ, ಇಂದೂಧರ ಹೊನ್ನಾಪುರ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್, ಹೆಚ್.ಎಂ ರುದ್ರಸ್ವಾಮಿ, ಲಕ್ಷ್ಮೀಪತಿ ಕೋಲಾರ, ಮಂಗ್ಳೂರ ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್, ಕೆ.ದೊರೈರಾಜ್, ಸಿ.ಬಸವಲಿಂಗಯ್ಯ, ಹೆಚ್, ಜನಾರ್ಧನ್ ಜನ್ನಿ, ಕುಪ್ಪೆ ನಾಗರಾಜ್, ಗಂಗಮ್ಮ ತುಮಕೂರು, ಭಾರತಿ ರಾಜಣ್ಣ, ಪುರುಷೋತ್ತಮ್ ದಾಸ್, ಸಿ.ಜಿ ಶ್ರೀನಿವಾಸ್, ಪಿಚ್ಚಳ್ಳಿ ಶ್ರೀನಿವಾಸ್ ಮತ್ತು ಗೊಲ್ಲಹಳ್ಳಿ ಶಿವಪ್ರಸಾದ್‌ರವರು ಸಮಿತಿಯ ಜೊತೆಗಿದ್ದಾರೆ.

ಖಾಸಗೀಕರಣ, ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮೀಸಲಾತಿಯ ಅಸ್ತಿತ್ವ ನಾಶವಾಗುತ್ತಿದ್ದರೆ, ಮತ್ತೊಂದೆಡೆ ದಲಿತ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಕಡಿತ, ಪಠ್ಯಗಳ ಕೇಸರಿಕರಣ ನಡೆಯುತ್ತಿದೆ. ಅದೇ ಸಮಯದಲ್ಲಿ ಪ್ರಬುದ್ಧ ಭಾರತವನ್ನು ಕಟ್ಟಿ ಬೆಳೆಸಿದ ತಳ ಸಮುದಾಯಗಳ ವೈವಿಧ್ಯಮತ ಸಂಸ್ಕೃತಿ, ಆಚರಣೆಗಳನ್ನು ಬಲಿಕೊಟ್ಟು ಬ್ರಾಹ್ಮಣ್ಯ ತಾರತಮ್ಯ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಬ್ರಾಹ್ಮಣ್ಯವಾದ ಮತ್ತು ಬಂಡವಾಳವಾದವನ್ನು ಧಿಕ್ಕರಿಸುವುದಕ್ಕಾಗಿ, ಅಂಬೇಡ್ಕರ್‌ರವರ ಹೋರಾಟದ ಫಲವಾಗಿ ದಕ್ಕಿದ ಹಕ್ಕುಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಡಿ.6 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ನಡೆಯುತ್ತಿದೆ.

ಇದನ್ನೂ ಓದಿ: ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...