Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...