Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...