Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...