Homeಕರ್ನಾಟಕದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

ದೇವರ ಪಲ್ಲಕ್ಕಿ ಹೊತ್ತ ಶಾಸಕ ಹರೀಶ್‌ ಪೂಂಜಾ: ತಮಗೂ ಅವಕಾಶ ನೀಡುವಂತೆ ದಲಿತರ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ)’ ಸಮುದಾಯದ ‘ಲಾಯಿಲ ವೆಂಕಟರಮಣ ದೇವಸ್ಥಾನ’ದ ದೇವರ ಪಲ್ಲಕ್ಕಿಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗೆ ಹೊತ್ತಿದ್ದರು. ಈ ವಿಡಿಯೊ ಇದೀಗ ವೈರಲ್ ಆಗಿದ್ದು, ದೇವಸ್ಥಾನದ ಈ ಕ್ರಮದ ವಿರುದ್ದ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ‘ಆಲ್‌ ಟೆಂಪರ್‌ ಅಸೋಸಿಯೇಷನ್‌’ ತಕರಾರು ಎತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಅಸೋಷಿಯೇಷನ್‌ ದೇವಸ್ಥಾನ ಸಮಿತಿ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಜೊತಗೆ ಬಂಟ ಸಮುದಾಯದ ಶಾಸಕರಾದ ಹರೀಶ್‌ ಪೂಂಜಾ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಿದ ‘ ಜಿಎಸ್‌ಬಿ’ ಯುವಕರಿಬ್ಬರ ವಿರುದ್ದ ಕೂಡಾ ಕ್ರಮಕೈಗೊಳ್ಳಲು ಇದೀಗ ತಯಾರಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಈ ನಡುವೆ, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಕಾಶಿ ಮಠದ ಸ್ವಾಮಿಗೂ ದೂರು ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಆಡಳಿತಕ್ಕೆ ಒಳಪಟ್ಟ ಲಾಯಿಲ ವೆಂಕಟರಮಣ ದೇವಾಲಯದಲ್ಲಿ ಪ್ರತಿ ವರ್ಷ ಕಾರ್ತಿಕ ಹುಣ್ಣಿಮೆಯಂದು ದೀಪೋತ್ಸವ ನಡೆಯುತ್ತದೆ. ಈ ಸಂಧರ್ಭದಲ್ಲಿ ದೇವರ ಪೇಟೆ ಸವಾರಿ ಉತ್ಸವವಿರುತ್ತದೆ. ಈ ಉತ್ಸವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಯುವಕರು ಮಾತ್ರ ದೇವರ ಪಲ್ಲಕ್ಕಿ ಹೊರುತ್ತಿದ್ದರು. ಆದರೆ ಈ ಬಾರಿ, ಶೂದ್ರ ಸಮುದಾಯದ ಬಂಟ ಜಾತಿಯ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರಿಂದ ದೇವರ ಪಲ್ಲಕ್ಕಿಯನ್ನು ಹೊರಿಸಲಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ಆದರೆ, ಸಂಪ್ರದಾಯ ಮುರಿದು ಹಿಂದುಳಿದ ಸಮಾಜದ ವ್ಯಕ್ತಿಯೊಬ್ಬ ಪಲ್ಲಕ್ಕಿಯನ್ನು ಹೊರುವಂತೆ ಮಾಡಿರುವುದು ಸಮುದಾಯದ ಒಳಗೆ ತಕರಾರು ಎದ್ದಿದೆ ಎನ್ನಲಾಗಿದೆ. ಈ ಬಗ್ಗೆ ಸಮುದಾಯದ ದೇವಾಲಯಗಳ ಒಕ್ಕೂಟವಾದ ‘ಆಲ್‌ ಟೆಂಪಲ್‌ ಅಸೋಷಿಯೇಷನ್‌’ ತಕರಾರು ಎತ್ತಿದೆ ಎನ್ನಲಾಗಿದ್ದು, ವಿವಾದದ ಬಗ್ಗೆ ವಿವರ ಕೇಳಿದೆ ಎನ್ನಲಾಗಿದೆ. ಜೊತಗೆ ಸಮುದಾಯದ ಕಾಶಿ ಮಠದ ಸ್ವಾಮಿಗಳ ಬಳಿಯು ದೂರು ನೀಡಲಾಗಿದೆ ಎಂದು ಸಂದೇಶ ಹರಿದಾಡುತ್ತಿದೆ. ಶಾಸಕರಿಗೆ ಪಲ್ಲಕ್ಕಿ ಹೊರುವಂತೆ ಮಾಡಿದ್ದ ಸಮುದಾಯದ ಇಬ್ಬರು ಯುವಕರ ವಿರುದ್ದವು ಕ್ರಮಕೈಗೊಳ್ಳಲು ಮತ್ತು ಪಲ್ಲಕ್ಕಿ ಶುದ್ದೀಕರಣಕ್ಕೆ ತಯಾರಿ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ ದೇವಸ್ಥಾನದ ಈ ಕ್ರಮವನ್ನು, ದಲಿತ ಹಕ್ಕುಗಳ ಹೋರಾಟದ ರಾಜ್ಯ ಸಮಿತಿ ಸದಸ್ಯರಾಗಿರುವ ಶೇಖರ್ ಲಾಯಿಲ ಅವರು ಸ್ವಾಗತಿಸಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಶಾಸಕರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ಕೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಕ್ರಮವನ್ನು ದಲಿತ ಸಮುದಾಯಕ್ಕೂ ವಿಸ್ತರಿಸಬೇಕು. ಮುಂದಿನ 24 ರ ಬುಧವಾರದಂದು ‘ಪಂಚಮಿ ಉತ್ಸವ’ ನಡೆಯಲಿದ್ದು, ಅಂದು ದಲಿತರಿಗೆ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ಈ ಬಗ್ಗೆ ದೇವಾಲಯದ ಆಡಳಿತ ಮೋಕ್ತೇಸರರಾಗಿರುವ ಸುಧೀರ್ ಪ್ರಭು ನಾನುಗೌರಿ.ಕಾಂ ಜೊತೆ ಮಾತನಾಡಿ, “ದೇವಾಲಯದ ಆಡಳಿತ ಸಮಿತಿಯ ಗಮನಕ್ಕೆ ತರದೆ ಶಾಸಕ ಹರೀಶ್‌ ಪೂಂಜಾ ಅವರ ಕೈಯ್ಯಲ್ಲಿ ಪಲ್ಲಕ್ಕಿ ಹೊರಿಸಲಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವಂತೆ, ಆಲ್‌‌ ಟೆಂಪಲ್‌ ಅಸೋಷಿಯೇಷನ್‌ ಕಡೆಯಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಹೀಗೊಂದು ಘಟನೆ ನಡೆದಿದೆ ಎಂದಷ್ಟೇ ಈಗ ತಿಳಿದುಬಂದಿದೆ. ಜೊತೆಗೆ ಉತ್ಸವ ಇನ್ನೂ ಮುಗಿದಿಲ್ಲ, ಎಲ್ಲವೂ ಮುಗಿದ ನಂತರ ನಡೆಯುವ ಸಭೆಯಲ್ಲಿ ಪಲ್ಲಕ್ಕಿ ಹೊರಿಸಿದ ವಿಷಯವೂ ಚರ್ಚೆಗೆ ಬರಬಹುದು. ಆದ್ದರಿಂದ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ದಲಿತರಿಗೂ ದೇವರ ಪಲ್ಲಕ್ಕಿ ಹೊರಲು ಅವಕಾಶ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶಾಸಕರಿಗೆ ಪಲ್ಲಕ್ಕಿ ಹೊರಲು ಅವಕಾಶವನ್ನು ಆಡಳಿತ ಮಂಡಳಿ ನೀಡಿಲ್ಲ. ಆ ಸಂದರ್ಭದಲ್ಲಿ ಶಾಸಕರು ಇದ್ದರು, ಆಗ ಅವರಿಗೆ ಪಲ್ಲಕ್ಕಿ ಹೊರಲು ಅವಕಾಶ ನೀಡಲಾಗಿದೆ. ನಮ್ಮ ಜಿಎಸ್‌ಬಿ ಸಮುದಾಯದ ಕೆಲವು ಸಂಪ್ರದಾಯವಿದೆ. ದಲಿತರಿಗೆ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದು ಅವರ ಸಂಪರ್ಕ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...