Homeಕರ್ನಾಟಕಅಂಬೇಡ್ಕರ್‌ ಹಾದಿಯಲ್ಲಿ ದಲಿತರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನುಸ್ಮೃತಿ ದಹನ

ಅಂಬೇಡ್ಕರ್‌ ಹಾದಿಯಲ್ಲಿ ದಲಿತರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನುಸ್ಮೃತಿ ದಹನ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನುಸ್ಮೃತಿಯನ್ನು ದಹಿಸಲಾಗಿದ್ದು, ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ

- Advertisement -
- Advertisement -

ಅಸಮಾನತೆಯನ್ನು ಬೋಧಿಸುವ ಮನುಸ್ಮೃತಿಯನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ನೇತೃತ್ವದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಹಿಸಲಾಗಿದೆ. ಜೊತೆಗೆ ಭಾರತ ಸಂವಿಧಾನದ ಆಶಯಗಳನ್ನು ಜನರಲ್ಲಿ ಬಿತ್ತುವ ಪ್ರಯತ್ನವನ್ನು ಮಾಡಲಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಮನುಸ್ಮೃತಿಯನ್ನು ಸುಟ್ಟ ದಿನದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಲಿತರು ಮನುಸ್ಮೃತಿಯನ್ನು ದಹಿಸಿ, ಸಂವಿಧಾನದ ಸಂದೇಶವನ್ನು ಪಸರಿಸಿದ್ದಾರೆ. ಜಾತಿ ವ್ಯವಸ್ಥೆ, ಲಿಂಗ ತಾರತಮ್ಯಯನ್ನು ಪ್ರತಿಪಾದಿಸುವ ಅನ್ಯಾಯಕರ ಮತ್ತು ಅಮಾನವೀಯವಾದ ದಂಡಸಂಹಿತೆಯಾದ ಮನುಸ್ಮೃತಿಯನ್ನು 25 ಡಿಸೆಂಬರ್ 1927ರಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಮಹದ್ ಸಮ್ಮೇಳನದಲ್ಲಿ ಬಹಿರಂಗವಾಗಿ ಸುಟ್ಟು ಹಾಕಿದ್ದರು.

“ನಮ್ಮಲ್ಲಿರುವ ಕೊರತೆಗಳನ್ನು ನಿವಾರಿಸಿಕೊಂಡು ಮನುಷ್ಯನು ನಿರ್ಮಿಸಿದ ಎಲ್ಲ ಬಗೆಯ ಅಡೆತಡೆಗಳನ್ನು ನಿವಾರಿಸಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸಿಕೊಟ್ಟು ಸಾಮಾಜಿಕ ಕ್ರಾಂತಿಯನ್ನುಂಟುಮಾಡುವುದೇ ನಮ್ಮ ಸತ್ಯಾಗ್ರಹದ ಉದ್ದೇಶ” ಎಂದು ಅವರು ಎಚ್ಚರಿಸಿದ್ದರು. ಹೀಗಾಗಿ ಡಿಸೆಂಬರ್‌ 25 ದಲಿತ, ದಮನಿತ, ಶೂದ್ರ ಸಮುದಾಯಗಳ ಪಾಲಿಗೆ ಮಹತ್ವದ್ದಾಗಿದೆ.

“ಆರ್‌ಎಸ್‌ಎಸ್‌- ಬಿಜೆಪಿಯು ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಸುತ್ತಿರುವ ಪ್ರತಿಯೊಂದು ಚಟುವಟಿಕೆಗಳ ಹಿಂದೆಯೂ ಸಂವಿಧಾನವನ್ನು ಬುಡಮೇಲು ಮಾಡಿ, ಆ ಸ್ಥಾನದಲ್ಲಿ ‘ಮನುಸ್ಮೃತಿ’ಯನ್ನು ಮರುಸ್ಥಾಪನೆ ಮಾಡುವ ಮಹಾನ್ ಸಂಚು, ಪಿತೂರಿ ಇದೆ. ಹಾಗಾಗಿಯೇ ಅಂದು ಅಂಬೇಡ್‌ರವರು ಈ ದಲಿತ- ಹಿಂದುಳಿದ ಜಾತಿಗಳ ವಿರೋಧಿ, ಮಹಿಳಾ ವಿರೋಧಿ ಹಾಗೂ ಜೀವ ವಿರೋಧಿ ಮನುಸ್ಮೃತಿಯನ್ನು ಸುಟ್ಟು ಹಾಕಿದ್ದರು. ಮತ್ತೆ ಸುಡಬೇಕಾದ ಪರಿಸ್ಥಿತಿಯನ್ನು ಈ ಆರ್‌ಎಸ್‌ಎಸ್ ಬಿಜೆಪಿಯು ನಮ್ಮ ಮುಂದೆ ತಂದೊಡ್ಡಿದೆ. ಹೀಗಾಗಿ ನಮ್ಮ ಸಂವಿಧಾನವನ್ನು ಎದೆಗಪ್ಪಿಕೊಂಡು ನಮ್ಮ ಸಂವಿಧಾನಕ್ಕೆ ಅಡ್ಡಗಾಲಾಗಿರುವ ಈ ಮನುಸ್ಮೃತಿಯನ್ನು ಸುಡಲಾಗುತ್ತಿದೆ” ಎಂದು ದಸಂಸ ಐಕ್ಯತಾ ಸಮಿತಿ ತಿಳಿಸಿದೆ.

ರಾಜಧಾನಿ ಬೆಂಗಳೂರು, ಬೀದರ್‌, ಯಾದಗಿರಿ, ಕೋಲಾರ, ಗುಲ್ಬರ್ಗ, ರಾಯಚೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮನುಸ್ಮೃತಿ ಸುಡಲಾಗಿದೆ.

ಹಿರಿಯ ಹೋರಾಟಗಾರರಾದ ಎನ್.ವೆಂಕಟೇಶ್, ವಿ.ನಾಗರಾಜ್‌, ಮಾವಳ್ಳಿ ಶಂಕರ್‌, ಕರಿಯಪ್ಪ ಗುಡಿಮನಿ, ದು.ಸರಸ್ವತಿ, ಶ್ರೀಪಾದ್ ಭಟ್ ಸೇರಿದಂತೆ ವಿವಿಧ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಪಾದ್ ಭಟ್‌ ಮಾತನಾಡಿ, “ಮನುಸ್ಮೃತಿ ಎಂಬುದು ನಮ್ಮ ವ್ಯವಸ್ಥೆಯೊಳಗೆ, ಜನರ ಮನಸ್ಸಿನೊಳಗೆ ಬೆರೆತಿದೆ. ಅದನ್ನು ಹೋಗಲಾಡಿಸುವ ಅಗತ್ಯವಿದೆ. ಮನುಸ್ಮೃತಿಯು ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದೊಳಗೆ ಹಬ್ಬುತ್ತಿದೆ. ನ್ಯಾಯಮೂರ್ತಿಯೊಬ್ಬರು ಮನುಸ್ಮೃತಿಯನ್ನು ಉದಾಹರಿಸಿ ಸಮರ್ಥಿಸುವುದು ವಿಷಾದನೀಯ. ಈ ಸಮಸ್ಯೆಗಳನ್ನು ಹೇಗೆ ಬಗೆಹರಿಸಿಕೊಳ್ಳುವುದು ಎಂಬುದು ನಮ್ಮ ಮುಂದಿರುವ ಸವಾಲು” ಎಂದು ಎಚ್ಚರಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮನುಸ್ಮೃತಿಯನ್ನು ದಹಿಸಲಾಯಿತು.

“ಆರ್‌ಎಸ್‌ಎಸ್‌ ಬಲವಾಗುತ್ತಿದೆ. ಅದರ ಸಿದ್ಧಾಂತವೇ ಮನುಸ್ಮೃತಿಯಾಗಿದೆ. ವಿ.ಡಿ.ಸಾವರ್ಕರ್‌ ಅದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆರ್‌ಎಸ್‌ಎಸ್‌ ಅನ್ನು ಸೋಲುವುದು ಮುಖ್ಯವಾಗಿದೆ. ಅಂಬೇಡ್ಕರ್‌ ಅವರ ವಿಚಾರಗಳನ್ನು ತಿರುಚಿ ಕೋಮು ರಾಜಕಾರಣ ಮಾಡಲು ಆರ್‌ಎಸ್‌ಎಸ್ ಯತ್ನಿಸುತ್ತದೆ. ಮನುಸ್ಮೃತಿಯನ್ನು ಅಂಬೇಡ್ಕರ್‌ ಸುಟ್ಟಿರುವ ಕುರಿತು ಆರ್‌ಎಸ್‌ಎಸ್‌ ನಿಲುವೇನು ಎಂದು ನಾವು ಪ್ರಶ್ನಿಸಬೇಕು” ಎಂದರು.

ತುಮಕೂರು: ಅಘೋಷಿತವಾಗಿ ಮನುವಾದ ಜಾರಿಯಲ್ಲಿದೆ- ದೊರೈರಾಜ್

ತುಮಕೂರಿನ ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಂಡ ದಲಿತ ಸಂಘಟನೆಗಳು ಮನುಸ್ಮೃತಿಯನ್ನು ಸುಟ್ಟು ದೇಶದ ಅಲಿಖಿತ ಸಂವಿಧಾನವನ್ನು ಬಹಿಷ್ಕರಿಸುವಂತೆ ಕರೆ ನೀಡಿದವು.

ಚಾಲನಾ ಸಮಿತಿಯ ಪರವಾಗಿ ಮಾತನಾಡಿದ ಕೆ.ದೊರೈರಾಜ್, “ಇಂದು ದೇಶದಲ್ಲಿ ಅಘೋಷಿತವಾಗಿ ಜಾರಿಯಲ್ಲಿರುವ ಮನು ಕಾನೂನು ಜಾತಿ ವ್ಯವಸ್ಥೆಯನ್ನು, ಮಹಿಳಾ ಶೋಷಣೆಯನ್ನು ಪ್ರತಿಪಾದಿಸುತ್ತಿದೆ. ಇದಕ್ಕೆ ವಿರುದ್ದವಾಗಿ ಭಾರತ ಸಂವಿಧಾನವು ಸಮಾನತೆ, ಭ್ರಾತೃತ್ವ ಪ್ರತಿಪಾದಿಸುತ್ತದೆ. ಆದರೆ ಇಂದು ಆಡಳಿತದಲ್ಲಿರುವ ಸರ್ಕಾರಗಳು ಅಂಬೇಡ್ಕರ್‌ರವರು ರಚಿಸಿರುವ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಮಾನವ ವಿರೋಧಿ ಮನುಸ್ಮೃತಿಯನ್ನು ಧಿಕ್ಕರಿಸಿ ಸಂವಿಧಾನವನ್ನು ಎದೆಗಪ್ಪಿಕೊಳ್ಳುವುದು ಇಂದು ಮುಖ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

ತುಮಕೂರಿನಲ್ಲಿ ಮನುಸ್ಮೃತಿಯನ್ನು ಸುಡಲಾಯಿತು.

ದಸಂಸದ ಹಿರಿಯ ಮುಖಂಡರಾದ ನರಸಿಂಹಯ್ಯ ಮಾತನಾಡಿ, “ದೇಶದಲ್ಲಿ 8 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ, ಮನುವಾದವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸುತ್ತಿದೆ. 1950ರಲ್ಲಿ ಜಾರಿಯಾದ ಸಂವಿಧಾನದ ಆಶಯವನ್ನು ಬುಡಮೇಲು ಮಾಡಲು ಮನುಸ್ಮೃತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಸಾಮಾಜಿಕ ಸಮಾನತೆಯ ಆಶಯಗಳನ್ನು ಅಂಬೇಡ್ಕರ್ ಪ್ರತಿಪಾದಿಸಿದರು. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಂಬೇಡ್ಕರರ ಆಶಯಗಳು ಜಾರಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ದಲಿತ ಸಂಘಟನೆಗಳ ಮುಖಂಡರಾದ ಸ್ಲಂ ಜನಾಂದೋಲನ ಕರ್ನಾಟಕದ ಎ.ನರಸಿಂಹಮೂರ್ತಿ, ದಸಂಸದ ಹಿರಿಯರಾದ ಜೈಮೂರ್ತಿ, ಚಂದ್ರಯ್ಯ, ರಾಜಣ್ಣ, ಪಿ.ಎನ್.ರಾಮಯ್ಯ, ದಸಂಸ ಜಿಲ್ಲಾ ಸಂಚಾಲಕರಾದ ಕೊರಟಗೆರೆ ರಾಮಾಂಜಿನಯ್ಯ, ತುರುವೇಕರೆ ಸಂಚಾಲಕರಾದ ಹೆಚ್ಕೆ ಜಗದೀಶ್, ಮಧುಗಿರಿ ಸಂಚಾಲಕರಾದ ರಂಗನಾಥ್, ಪೋಸ್ಟ್ ಮರಿಯಪ್ಪ, ತುಮಕೂರು ಗ್ರಾಮಾಂತರದ ಶಿವರಾಜು, ಅಂಜಿನ್ ಮೂರ್ತಿ, ಕೋರಾ ರಾಜಣ್ಣ, ಮದಕರಿ ಸಂಘದ ರಂಗನಾಥ್, ಟಿ.ಸಿ.ರಾಮಯ್ಯ, ತುಮಕೂರು ಕೊಳಗೇರಿ ಸಮಿತಿಯ ದೊಡ್ಡರಂಗಯ್ಯ, ಅರುಣ್, ತಿರುಮಲಯ್ಯ, ತೇಜಸ್ಕುಮಾರ್, ಪುಟ್ಟಾಂಜನೇಯ್ಯ, ಧನಂಜಯ್, ಮಾರುತಿ, ಅಮರ್ ಮೊದಲಾದವರು ಪಾಲ್ಗೊಂಡಿದ್ದರು.

ಮೈಸೂರು: ಜಾತಿಗಳನ್ನು ವಿಂಗಡಿಸಿ ಶೋಷಿಸಲಾಗುತ್ತಿದೆ- ದಸಂಸ

ಮೈಸೂರಿನ ಪುರಭವನದಲ್ಲಿರುವ ಅಂಬೇಡ್ಕರ್‌ ಪ್ರತಿಮೆ ಎದುರು ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ- ಮನುಸ್ಮೃತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮನುಸ್ಮೃತಿಯನ್ನು ಬಹಿರಂಗವಾಗಿ ಸುಟ್ಟು ಹಾಕಲಾಯಿತು.

“ಈ ದೇಶದ ಬಹುಸಂಖ್ಯಾತ ದುಡಿಯುವ ವರ್ಗಗಳನ್ನು ಶಿಕ್ಷಣ, ಸಮಾನತೆ, ಸ್ವಾತಂತ್ಯ್ರ, ಆರ್ಥಿಕ ಸಾವಲಂಬನೆಗಳಿಂದ ವಂಚಿಸಲಾಗುತ್ತಿದೆ. ಕಸುಬಿನ ಆಧಾರದಲ್ಲಿ ಜಾತಿಗಳನ್ನಾಗಿ ವಿಂಗಡಿಸಿ ಶೋಷಿಸುತ್ತಲೇ ಬರಲಾಗಿದೆ. ಇದಕ್ಕೆ ಪರೋಕ್ಷವಾಗಿ ಕಾರಣವಾಗಿರುವ ಮನಸ್ಮೃತಿಯನ್ನು ಸುಟ್ಟು ಭಸ್ಮ ಮಾಡಲಾಗಿದೆ” ಎಂದು ದಸಂಸ ಹೋರಾಟಗಾರರು ಹೇಳಿದರು.

ಮೈಸೂರಿನಲ್ಲಿ ಮನುಸ್ಮೃತಿಯನ್ನು ದಹಿಸಲಾಯಿತು.

“ಜಾತಿ ಮತ್ತು ಅಸ್ಪ್ರಶ್ಯತೆ ಅಸಮಾನತೆಗೆ ಮೂಲ ಕಾರಣ ಎಂಬುವುದನ್ನು ಆಳವಾಗಿ, ವೈಜ್ಞಾನಿಕವಾಗಿ ಅಧ್ಯಯನ ನಡೆಸಿದ ಅಂಬೇಡ್ಕರ್‌ ಅವರು, ಅಂದೇ ಮನುಸ್ಮೃತಿಗೆ ಬೆಂಕಿ ಇಟ್ಟಿದ್ದರು. ಈ ಚಳವಳಿಯನ್ನು ಮುಂದುವರಿಸುವ ಸಮಾಜದಲ್ಲಿ ಸಮಾನತೆಯ ಕಡೆ ಹೋಗುವುದಕ್ಕೆ ಹೆಜ್ಜೆ ಹಾಕಿದ್ದೇವೆ” ಎಂದರು.

ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಆಲಗೋಡು ಶಿವಕುಮಾರ್‌, ಚುಂಚನಳ್ಳಿ ಮಲ್ಲೇಶ್‌, ಶಂಭುಲಿಂಗಸ್ವಾಮಿ, ಮಲ್ಲಹಳ್ಳಿ ನಾರಾಯಣ್, ರತ್ನಪುರಿ ಪುಟ್ಟಸ್ವಾಮಿ, ಬಿಡಿ ಶಿವಬುದ್ದಿ, ಕಾರ್ಯ ಬಸವಣ್ಣ, ಆರ್.ಎಸ್ ದೊಡ್ಡಣ್ಣ, ಜನಮನ ಗೋಪಾಲ್, ರತಿ ರಾವ್, ಕಲ್ಲಳ್ಳಿ ಕುಮಾರ್, ರಾಜು ಚಿಕ್ಕ ಹುಣಸೂರು, ರಾಮಕೃಷ್ಣ ಅತ್ತಿಕುಪ್ಪೆ ಸೇರಿ ನೂರಾರು ದಲಿತ ಸಂಘಟನೆಯ ಪದಾಧಿಕಾರಿಗಳು ಭಾಗಿಯಾಗಿದ್ದರು.

ಉಡುಪಿ: ಶೇ. 50ರಷ್ಟು ಮನುಸ್ಮೃತಿ ಜಾರಿಗೊಂಡಿದೆ- ಸುಂದರ್‌ ಮಾಸ್ತರ್‌

ಕೋಮು ಕಲಹ ಹಾಗೂ ಕೋಮು ಸಾಮರಸ್ಯ ಎರಡಕ್ಕೂ ಸಾಕ್ಷಿಯಾಗಿರುವ ಉಡುಪಿಯಲ್ಲಿ ದಲಿತ ಮುಖಂಡರು ಮನುಸ್ಮೃತಿ ದಹಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ತರ್, ಕಳೆದ ಏಳೆಂಟು ವರ್ಷಗಳಲ್ಲಿ ಶೇ.50ರಷ್ಟು ಭಾಗ ಮನುಸ್ಮೃತಿ ಜಾರಿಗೊಂಡಿದೆ. ಇದು ಪೂರ್ತಿಯಾಗಿ ಜಾರಿಗೊಂಡರೆ, ನಮ್ಮ ಬದುಕನ್ನು ನಾವು ಕಳೆದುಕೊಳ್ಳುತ್ತೇವೆ. ಹಾಗಾಗಿ ಮುಂದಿನ ದಿನಗಳಲ್ಲಿ ದಲಿತರೆಲ್ಲ ಒಗ್ಗೂಡಿ ಇನ್ನಷ್ಟು ತೀವ್ರತರವಾದ ಹೋರಾಟಗಳನ್ನು ಮಾಡಬೇಕು” ಎಂದು ಆಶಿಸಿದರು.

ಉಡುಪಿಯಲ್ಲಿ ಮನುಸ್ಮೃತಿ ದಹನ ಕಾರ್ಯಕ್ರಮ ನಡೆಯಿತು.

“ದೇಶದಲ್ಲಿ ದಲಿತರ ಮೇಲೆ ಸಾವಿರಾರು ದೌರ್ಜನ್ಯ ಪ್ರಕರಣಗಳು ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಬಾಯಿ ಬಿಡುತ್ತಿಲ್ಲ, ಒಂದೇ ಒಂದು ಖಂಡನೆ ಅವರ ಬಾಯಿಂದ ಬರುತ್ತಿಲ್ಲ. ಅವರು ಸಂಪೂರ್ಣವಾಗಿ ಆರ್‌.ಎಸ್.ಎಸ್.ಗೆ ಒಗ್ಗಿಕೊಂಡಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ಸಂಘಪರಿವಾರ ಅಂಬೇಡ್ಕಲ್‌ ಬರೆದ ಸಂವಿಧಾನವನ್ನು ಯಾವತ್ತೂ ಒಪ್ಪದೆ, ಮನುಸ್ಮೃತಿಯ ಆಧಾರದಲ್ಲಿ ದಲಿತರನ್ನು ಧಮನಿಸುವ ಕೆಲಸವನ್ನು ಈಗಲೂ ಮಾಡುತ್ತಿದೆ ಎಂದು ಆರೋಪಿಸಿದರು.

ದಲಿತ ಮುಖಂಡರಾದ ಮಂಜುನಾಥ್ ಗಿಳಿಯಾರು, ಶ್ಯಾಮರಾಜ್ ಬಿರ್ತಿ, ಶೇಖರ್ ಹೆಜಮಾಡಿ, ವಿಶ್ವನಾಥ ಬೆಳ್ಳಂಪಳ್ಳಿ, ವಾಸುದೇವ ಮುದ್ದೂರು, ಸಂಜೀವ ಬಳ್ಕೂರು, ಹರೀಶ್ ಮಲ್ಪೆ, ಶ್ಯಾಮಸುಂದರ ತೆಕ್ಕಟ್ಟೆ, ಕುಮಾರ್‌ ಕೋಟ‍, ದಲಿತ ಪರ ಹೋರಾಟಗಾರರಾದ ಬಾಲಕೃಷ್ಣ ಶೆಟ್ಟಿ, ಪ್ರೊ.ಫಣಿರಾಜ್‌, ಶ್ರೀರಾಮ ದಿವಾಣ, ಯಾಸಿನ್ ಕೋಡಿಬೆಂಗ್ರೆ ಹಾಜರಿದ್ದರು.

ಕೋಲಾರದಲ್ಲಿ ಮನುಸ್ಮೃತಿ ದಹನ

ಕೋಲಾರ ನಗರದ ನಚಿಕೇತ ನಿಲಯದ ಆವರಣದಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ಎದುರು ಮನುಸ್ಮೃತಿಯನ್ನು ದಹಿಸಲಾಯಿತು.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮಖಂಡರಾದ ಅಣ್ಣಯ್ಯ, ಜಿಗಣೆ ಶಂಕರ್, ಸ್ಪೆಕ್ಸ್ ನಾರಾಯಣಸ್ವಾಮಿ ಮಾತನಾಡಿದರು. ದಸಂಸ ಜಿಲ್ಲಾ ಸಂಚಾಲಕರಾದ ಹಾರೋಹಳ್ಳಿ ರವಿ, ಮೆಕಾನಿಕ್ ಶ್ರೀನಿವಾಸ, ಸೀಪೂರು ದೇವರಾಜ್, ಹಿರೇಕರಪನಹಳ್ಳಿ ರಾಮಪ್ಪ, ಕಲಾವಿದರಾದ ಹಿರೇಕರಪನಹಳ್ಳಿ ಯಲ್ಲಪ್ಪ, ಬಸಪ್ಪ, ಮಂಜುನಾಥ, ಮಾರ್ಜೇನಹಳ್ಳಿ ಮುನಿಸ್ವಾಮಿ, ದೊಡ್ಡಮಲೆ ರವಿ, ಬೀರಮಾನಹಳ್ಳಿ ಆ೦ಜಿನಪ್ಪ, ಅಂಬೇಡ್ಕರ್ ನಗರ ಮುನಿಯಪ್ಪ, ವಿ.ಎಂ. ಸಂಘರ್ಷ, ಫೋಟೋಗ್ರಾಫರ್ ಸುಬ್ರಮಣಿ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೀಸಲಾತಿ ಸವಲತ್ತು ಪಡೆದು ಸರಕಾರಿ ಹುದ್ದೆ, ವೇಗದ ಬಡ್ತಿ ಪಡೆದು ಮುಂದುವರಿದಿರುವ ಹೆಚ್ಚಿನ ಪಾಲು ದಲಿತರು ಬ್ರಾಹ್ಮಣ್ಯಕ್ಕೆ ಅಡಿಯಾಳಾಗಿದ್ದಾರೆ. ಇವರಿಗೆ ದೊರೆತಿರುವ ಈ ಸವಲತ್ತು ಉಳಿದ ಬಡದಲಿತರಿಗೆ ದೊರಕಬೇಕಾದರೆ, ದಲಿತರೊಳಗೆ ಹಣಕಾಸು ಮಟ್ಟದ ನೆಲೆಗಟ್ಟಿನಲ್ಲಿ ಒಳಮೀಸಲಾತಿ ಕೊಡಬೇಕಿದೆ. ಮೀಸಲಾತಿ ಹಂಚಿಕೆ ಸಾಮಾಜಿಕ, ಕಲಿಕೆಯಲ್ಲಿ ಹಿಂದುಳಿದಿರುವಿಕೆಯೊಂದಿಗೆ ಈ ಹೊತ್ತಿಗೆ ಹಣಕಾಸು ಮುಂದುವರಿಕೆಯನ್ನು ನೆಲೆಗಟ್ಟಾಗಿಸಿಕೊಳ್ಳಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...