Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...