Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...