Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...