Homeಮುಖಪುಟದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

- Advertisement -
- Advertisement -

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದರು.

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಹಲವು ಸಂಘಟನೆಗಳ ವತಿಯಿಂದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದರು.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಇದನ್ನೂ ಓದಿ; ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...