Homeಮುಖಪುಟದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

- Advertisement -
- Advertisement -

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದರು.

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಹಲವು ಸಂಘಟನೆಗಳ ವತಿಯಿಂದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದರು.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಹೆಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

ಇದನ್ನೂ ಓದಿ: ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಇದನ್ನೂ ಓದಿ; ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...