Homeಮುಖಪುಟಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡುವಂತೆ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದ ಧುಲೆ ಕ್ಷೇತ್ರದಲ್ಲಿ ಶೋಭಾ ಬಚಾವ್ ಪರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ತಮ್ಮ ಪಕ್ಷವನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಆಗ್ರಹಿಸಿದ್ದಾರೆ.

ಸ್ವಾತಂತ್ರ್ಯದ ಮೊದಲು ಬಡವರು, ದಲಿತರು ಮತ್ತು ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿತ್ತು. ನೀವು ಮೋದಿ ಮತ್ತು ಶಾಗೆ ಮೂರನೇ ಅವಧಿಗೆ ಅಧಿಕಾರವನ್ನು ನೀಡಿದರೆ, ಅದೇ ಪರಿಸ್ಥಿತಿ ಪುನರಾವರ್ತನೆಯಾಗುತ್ತದೆ, ನಾವು ಮತ್ತೆ ಗುಲಾಮರಾಗುತ್ತೇವೆ. ನೀವು ನಿಮ್ಮ ಸ್ವಂತಕ್ಕಾಗಿ ಮತ್ತು ನಿಮ್ಮ ಸ್ವಂತ ಜನರಿಗಾಗಿ ಮತ ಚಲಾಯಿಸಬೇಕು. ನಾವು ಸಂವಿಧಾನವನ್ನು ಉಳಿಸಬೇಕಾಗಿದೆ. ಈ ಚುನಾವಣೆ ದೇಶದ ಭವಿಷ್ಯವನ್ನು ರೂಪಿಸುತ್ತದೆ ಹೀಗಾಗಿ ಇದೊಂದು ಮಹತ್ವದ ಚುನಾವಣೆಯಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನ ಇಲ್ಲದಿದ್ದರೆ, ನಿಮ್ಮನ್ನು ಉಳಿಸಲು ಯಾರೂ ಇರುವುದಿಲ್ಲ, ಸಂವಿಧಾನವನ್ನು ಬದಲಾಯಿಸಬೇಕು ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ 2015ರಲ್ಲಿ ಹೇಳಿದ್ದರು. ನಂತರ ಹಲವು ಬಿಜೆಪಿ ಸಂಸದರು ಮತ್ತು ಕೇಸರಿ ಪಕ್ಷದ ನಾಯಕರು ಕೂಡ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು  ಖರ್ಗೆ ಹೇಳಿದ್ದಾರೆ.

ಪ್ರಧಾನಿ ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ. ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರುವ ಬೇಡಿಕೆಯನ್ನು ಮೋದಿ ಈಡೇರಿಸಿಲ್ಲ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿಕೊಂಡಿದ್ದರು, ಆದರೆ ಉದ್ಯೋಗ ಸೃಷ್ಟಿಸಿಲ್ಲ. ಮೋದಿ ಹೇಳಿರುವಂತೆ ರೈತರ ಆದಾಯ ಹೆಚ್ಚಳವಾಗಿಲ್ಲ, ಬದಲಾಗಿ ತಪ್ಪು ನೀತಿಗಳಿಂದ ಬೆಳೆಗಾರರ ಉತ್ಪಾದನಾ ವೆಚ್ಚ ಹೆಚ್ಚಳವಾಗಿದೆ. ಹೀಗಾಗಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಉತ್ತರ ಮಹಾರಾಷ್ಟ್ರದ ಧುಲೆಯಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆ ವೇಳೆ ಮತದಾನ ನಡೆಯಲಿದೆ. ಇಲ್ಲಿ ಬಿಜೆಪಿ ಮಾಜಿ ಕೇಂದ್ರ ಸಚಿವ ಸುಭಾಷ್ ಭಮ್ರೆ ಅವರನ್ನು ಕಣಕ್ಕಿಳಿಸಿದೆ.

ಇದನ್ನು ಓದಿ: ‘ನನ್ನನ್ನು ಯಾರೂ ಅಪಹರಣ ಮಾಡಿಲ್ಲ’: ರೇವಣ್ಣ ಕಿಡ್ನಾಪ್‌ ಮಾಡಿಸಿದ್ದಾರೆ ಎನ್ನಲಾಗಿದ್ದ ಮಹಿಳೆಯಿಂದ ವಿಡಿಯೋ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...