Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...