Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...