Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...