Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...