Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...