Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...