Homeಮುಖಪುಟಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

- Advertisement -
- Advertisement -

ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ. ಹಾಗಾಗಿ, ಪರಿಶಿಷ್ಟ ಸಮುದಾಯದ ವ್ಯಕ್ತಿ ಆ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್‌ ತೀರ್ಪು ನೀಡಿದೆ.

ಪಾದ್ರಿಯೊಬ್ಬರ ಮೇಲಿನ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಹರಿನಾಥ್‌ ಅವರಿದ್ದ ಏಕಸದಸ್ಯ ಪೀಠ, ವ್ಯಕ್ತಿಯೊಬ್ಬರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ನಂತರ, ಅವರು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯನಾಗಿ ಉಳಿಯುವುದಿಲ್ಲ. ಪರಿಶಿಷ್ಟ ಜಾತಿ ಪ್ರಮಾಣಪತ್ರ ಹೊಂದಿರುವ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಅವರಿಗೆ ಕಾಯ್ದೆಯಡಿ ರಕ್ಷಣೆ ಇರುವುದಿಲ್ಲ ಎಂದಿರುವುದಾಗಿ barandbench.com ವರದಿ ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವ್ಯಕ್ತಿಗೆ ಮಾತ್ರ ಕಾಯ್ದೆಯನ್ನು ಅನ್ವಯಿಸಬಹುದಾಗಿದೆ. ಪಾದ್ರಿ ಸ್ವಯಂಪ್ರೇರಣೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದು, ಕಳೆದ 10 ವರ್ಷಗಳಿಂದ ಚರ್ಚ್‌ನಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಅವರಿಗೆ ರಕ್ಷಣೆ ನೀಡಲು ಅನುಮತಿಸಲಾಗದು ಎಂದು ನ್ಯಾಯಾಲಯ ಹೇಳಿದೆ ಎಂದು ವರದಿ ವಿವರಿಸಿದೆ.

ಈ ಮೂಲಕ ಪಾದ್ರಿ ವಿರುದ್ಧ ಜಾತಿ ನಿಂದನೆ ಪದ ಬಳಸಿದ ಮತ್ತು ಹಲ್ಲೆ ನಡೆಸಿದ ಗುಂಪಿನ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಎಸ್‌ಸಿ. ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದರು. ಆದರೆ, ಪಾದ್ರಿ ಕ್ರೈಸ್ತ ಧರ್ಮೀಯರಾಗಿರುವುದರಿಂದ ಎಸ್‌ಸಿ ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಆರೋಪಿಗಳು ವಾದಿಸಿದ್ದರು.

ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಐಪಿಸಿಯಡಿಯ ಅಪರಾಧಗಳು ಕೂಡ ಸಾಬೀತಾಗಿಲ್ಲ. ಸುಳ್ಳು ದೂರು ದಾಖಲಿಸಲಾಗಿದ್ದು, ಪ್ರಕರಣದ ಅರ್ಜಿದಾರರನ್ನು ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸುವಂತೆ ಹೇಳಿದರೆ ಯಾವುದೇ ಉದ್ದೇಶ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ ಎಂದು barandbench.com ತಿಳಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರ ಅಸ್ತಿತ್ವಕ್ಕೆ ಧಕ್ಕೆ: ಹಿಂದೂ ಸಂಘಟನೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...