Homeದಲಿತ್ ಫೈಲ್ಸ್ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು - ರಸ್ತೆಯಲ್ಲಿ ಶವ ಇಟ್ಟು 5 ಗಂಟೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

- Advertisement -
- Advertisement -

ಮತ್ತೊಂದು ಜಾತಿ ದೌರ್ಜನ್ಯದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಮಹಾರಾಜಪುರ ಬಳಿಯ ಉರ್ದ್ಮೌ ಗ್ರಾಮದಲ್ಲಿ ವರದಿಯಾಗಿದೆ. ಸಾವನಪ್ಪಿದ ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಶವ ಇಟ್ಟುಕೊಂಡು ದಲಿತರು ಸುಮಾರು 5 ಗಂಟೆಗಳ ಕಾದಿರುವ ಅಮಾನುಷ ಘಟನೆ ಜರುಗಿದೆ.

ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಿದ ಸರ್ಕಾರಿ ಜಮೀನಿನಲ್ಲಿ ಶವ ಸಂಸ್ಕಾರ ಮಾಡಲು ದಲಿತರು ಹೊರಟಾಗ ಸವರ್ಣೀಯರು ತಡೆದಿದ್ದಾರೆ. ಈ ಕುರಿತು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ ದಲಿತರು ರಸ್ತೆಯಲ್ಲಿಯೇ ಶವ ಇಟ್ಟುಕೊಂಡು ಕಾದಿದ್ದಾರೆ. ಕೊನೆಗೆ ಸ್ಥಳೀಯ ಆಡಳಿತ ಮಧ್ಯಪ್ರವೇಶಿಸಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕರೆಸಿದ ನಂತರ ಮೃತದೇಹವನ್ನು ದಲಿತ ಕುಟುಂಬದವರು ಅಂತ್ಯಸಂಸ್ಕಾರ ಮಾಡಿದ್ದಾರೆ.

ಹಿರಿಯ ದಲಿತ ವ್ಯಕ್ತಿ ಸಾವನಪ್ಪಿದಾಗ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ನಂತರ ದಲಿತರು ದಾರಿಯಲ್ಲಿಯೇ ಶವ ಇಟ್ಟು ಕಾಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ. ಸ್ಥಳೀಯ ಕಾಂಗ್ರೆಸ್ ಶಾಸಕರ ವಿರುದ್ಧವೂ ಅಸಮಾಧಾನ ಭುಗಿಲೆದ್ದಿದೆ.

ಗ್ರಾಮದ ಸ್ಮಶಾನದಲ್ಲಿ ದಲಿತರು ಅಂತ್ಯಕ್ರಿಯೆ ನಡೆಸಲು ದಾರಿ ಬಿಡುವುದಿಲ್ಲ ಎಂದು ಸವರ್ಣೀಯರು ಅಡ್ಡಿಪಡಿಸಿದ್ದರು. ಆದರೆ ಆ ದಾರಿಯ ವಿಷಯವು ಈ ಹಿಂದೆಯೆ ನ್ಯಾಯಾಲಯದಲ್ಲಿ ಬಗೆಹರಿದಿದೆ. ವಿಷಯ ತಿಳಿದ ನಂತರ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿ ಪೊಲೀಸ್ ಬಲದ ನೆರವಿನೊಂದಿಗೆ ಅಂತ್ಯಕ್ರಿಯೆ ಮಾಡಲು ಸಾಧ್ಯವಾಗಿದೆ ಮತ್ತು ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಿದ್ದೇವೆ ಎಂದು ಸ್ಥಳೀಯ ವಿಜಯ್ ಸೆನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಭುಗಿಲೆದ್ದ ಪ್ರತಿಭಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದಲ್ಲಿ ಈ ಜಾತಿ ಕುಲಗಳು ಕಳೆದುಹೋಗುವವರೆಗೂ ಇಂತಹ ಪರಿಸ್ಥಿತಿಗಳು ಮರುಕಳಿಸುತ್ತಲೇ ಇರುತ್ತವೆ, ಯಾರಾದರೂ ಸರಿಯೇ ಈ ಜಾತಿಗಳ ನಿರ್ಮೂಲನಕ್ಕೆ ಮುಂದೆ ಬನ್ನಿ, ಈ ಜಾತಿಗಳ ನಿರ್ಮೂಲವಾದ ದಿನ ನಮ್ಮ ಭಾರತಕ್ಕಿಂತಲೂ ಶಕ್ತಿಯುತವಾದ ದೇಶ ಯಾವುದು ಇರುವುದಿಲ್ಲ, ಆದರೆ ರಾಜಕಾರಣಿಗಳಿಗೆ ಈ ಜಾತಿ ಭೇದ ಬಿಟ್ಟರೆ ಬೇರೆ ಮಾರ್ಗವೇ ಇಲ್ಲ 🙏

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...