Homeಚಳವಳಿದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

ದಲ್ಲೆವಾಲ್ ಉಪವಾಸ 51ನೇ ದಿನಕ್ಕೆ; ಆಮರಣಾಂತ ಉಪವಾಸ ಆರಂಭಿಸಿದ 111 ರೈತರು

- Advertisement -
- Advertisement -

‘ಜಗಜಿತ್ ಸಿಂಗ್ ದಲ್ಲೆವಾಲ್ ಅವರಿಗಿಂತ ಮೊದಲು ನಾವು ಹುತಾತ್ಮರಾಗುತ್ತೇವೆ’ ಎಂದು ಪಂಜಾಬಿಯಲ್ಲಿ ಘೋಷಣಾ ಫಲಕ ಬರೆದಿರುವ 111 ರೈತರ ಗುಂಪು ಬುಧವಾರ ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಬೆಂಬಲಿಸಿ ಕಪ್ಪು ಬಟ್ಟೆ ಧರಿಸಿ ಮತ್ತು ಕುತ್ತಿಗೆಗೆ ಫಲಕಗಳನ್ನು ಹಾಕಿಕೊಂಡು ಆಮರಣಾಂತ ಉಪವಾಸ ಆರಂಭಿಸಿದೆ. ದಲ್ಲೆವಾಲ್ ಉಪವಾಸ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದಾರೆ. ಹರಿಯಾಣ ಕಡೆಗೆ ತೆರಳಿದ ರೈತರ ಗುಂಪು ಪ್ರಾರ್ಥನೆ ಸಲ್ಲಿಸಿದ ನಂತರ ಆಮರಣಾಂತ ಉಪವಾಸ ಆರಂಭಿಸಿದೆ. ನಂತರ ಅವರು ಮುಳ್ಳುತಂತಿಯನ್ನು ಕತ್ತರಿಸಿ ರಸ್ತೆಯಲ್ಲಿ ಧರಣಿ ಕುಳಿತಿದ್ದಾರೆ.

ಈ ನಡುವೆ, ಹರಿಯಾಣ ಪೊಲೀಸರು ಹರಿಯಾಣ ಭಾಗದ ಗಡಿಯಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಿದ್ದಾರೆ. ಭಾವುಕರಾದ ರೈತರು ಪ್ರತಿಭಟನೆಯನ್ನು ಬೆಂಬಲಿಸಲು ದಲ್ಲೆವಾಲ್ ಅವರಿಗಿಂತ ಮುಂಚೆಯೆ ತಮ್ಮನ್ನು ತಾವು ತ್ಯಾಗ ಮಾಡುತ್ತೇವೆ ಎಂದು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಲ್ಲೆವಾಲ್ ಅವರ ದೇಹವು ನೀರನ್ನು ಸ್ವೀಕರಿಸುತ್ತಿಲ್ಲ ಮತ್ತು ಬಹು ಅಂಗಾಂಗ ವೈಫಲ್ಯದತ್ತ ಸಾಗುತ್ತಿರುವುದರಿಂದ ಅವರ ಸ್ಥಿತಿ ಹದಗೆಡುತ್ತಿದೆ ಎಂದು ರೈತ ಮುಖಂಡರು ಹೇಳಿದ್ದಾರೆ. ದೀರ್ಘಕಾಲದ ಉಪವಾಸದ ಹೊರತಾಗಿಯೂ ಅವರು ವೈದ್ಯಕೀಯ ಸಹಾಯ ಪಡೆಯಲು ನಿರಾಕರಿಸಿದ್ದಾರೆ, ಇದರಿಂದಾಗಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ದಲ್ಲೆವಾಲ್ ಉಪವಾಸ

ದಲ್ಲೆವಾಲ್ ಅವರನ್ನು ನೋಡಿಕೊಳ್ಳುತ್ತಿದ್ದ ವೈದ್ಯರು ಅವರ ಕೀಟೋನ್ ಮಟ್ಟ ಹೆಚ್ಚಿರುವುದರಿಂದ ಮತ್ತು ಸ್ನಾಯುಗಳ ದ್ರವ್ಯರಾಶಿ ಕಡಿಮೆಯಾಗಿರುವುದರಿಂದ ಅವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರೈತ ನಾಯಕ ಅಭಿಮನ್ಯು ಕೊಹರ್, “ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಗಮನ ಕೊಡುತ್ತಿಲ್ಲ. ಇಂದು, ದಲ್ಲೆವಾಲ್ ಅವರ ಆಮರಣಾಂತ ಉಪವಾಸ 51 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರವು ಯಾವುದನ್ನೂ ಕೇಳಲು ಅಥವಾ ಮಾತುಕತೆಗಳನ್ನು ಪ್ರಾರಂಭಿಸಲು ಅಥವಾ ನಮ್ಮ ಬೇಡಿಕೆಗಳನ್ನು ಈಡೇರಿಸಲು ಸಿದ್ಧವಾಗಿಲ್ಲ. ರೈತರು ಭಾವನಾತ್ಮಕರಾಗಿದ್ದಾರೆ ಮತ್ತು ಅವರು ದಲ್ಲೆವಾಲ್ ಅವರನ್ನು ಅನುಸರಿಸುತ್ತಾರೆ ಹಾಗೂ ಶಾಂತಿಯುತವಾಗಿ ಅನಿರ್ದಿಷ್ಟ ಉಪವಾಸವನ್ನು ಪ್ರಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕರಾಗಿರುವ ದಲ್ಲೆವಾಲ್, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಳೆದ ವರ್ಷ ನವೆಂಬರ್ 26 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯದ ನಿರಂತರ ಆರೈಕೆಗಾಗಿ ಪಂಜಾಬ್ ಸರ್ಕಾರವು ರಾಜೀಂದ್ರ ವೈದ್ಯಕೀಯ ಕಾಲೇಜು ಮತ್ತು ಪಟಿಯಾಲಾದ ಮಾತಾ ಕೌಶಲ್ಯ ಆಸ್ಪತ್ರೆಯ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ. ಪ್ರತಿಭಟನಾ ಸ್ಥಳದ ಬಳಿ ಎಲ್ಲಾ ತುರ್ತು ಔಷಧಗಳು ಮತ್ತು ಸಲಕರಣೆಗಳೊಂದಿಗೆ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿದೆ.

ದಲ್ಲೆವಾಲ್‌ಗೆ ಏನಾದರೂ ಅಹಿತಕರ ಘಟನೆ ನಡೆದರೆ, ನಂತರ ಕೇಂದ್ರ ಸರ್ಕಾರಕ್ಕೆ ಯಾವುದನ್ನೂ ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಭಟನಾಕಾರ ರೈತರು ಈ ಹಿಂದೆ ಎಚ್ಚರಿಸಿದ್ದಾರೆ.

ಇದನ್ನೂಓದಿ:  ಮಧ್ಯಪ್ರದೇಶ – ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

ಮಧ್ಯಪ್ರದೇಶ – ಪಕ್ಷದ ನಾಯಕಿಯ ಮೇಲೆಯೆ ಅತ್ಯಾಚಾರ; ಬಿಜೆಪಿ ನಾಯಕ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...