Homeಮುಖಪುಟದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ; ನೀರು ಮಾತ್ರ ಕುಡಿದಿದ್ದಾರೆ: ರೈತ ಸಂಘಟನೆ

ದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ; ನೀರು ಮಾತ್ರ ಕುಡಿದಿದ್ದಾರೆ: ರೈತ ಸಂಘಟನೆ

- Advertisement -
- Advertisement -

ಕಳೆದ ವಾರ ರಾಜ್ಯ ಪೊಲೀಸರು ಬಂಧಿಸಿದ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ನಂತರ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಒಂದು ಲೋಟ ನೀರು ಕುಡಿದಿದ್ದರೂ ಅವರು ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಶನಿವಾರ ಹೇಳಿದ್ದಾರೆ.ಧೆ

ದಲ್ಲೆವಾಲ್ ನೀರು ಸ್ವೀಕರಿಸಿ ಉಪವಾಸ ಮುರಿದಿದ್ದಾರೆ ಎಂದು ಪಂಜಾಬ್ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಬಗ್ಗೆ ಪಂಜಾಬ್ ಸರ್ಕಾರದ ಹೇಳಿಕೆಗೆ ಪ್ರತಿಜ್ರಿಯಿಸಿರುವ ರೈತ ನಾಯಕ, “ಎಲ್ಲ ರೈತರ ಬಿಡುಗಡೆಯ ನಂತರವೇ ತಾನು ನೀರು ಕುಡಿಯುವುದಾಗಿ ದಲ್ಲೆವಾಲ್ ಸ್ಪಷ್ಟಪಡಿಸಿದ್ದಾರೆ” ಎಂದು ಕೊಹರ್ ಶನಿವಾರ ಹೇಳಿದರು.

“ರೈತ ನಾಯಕರನ್ನು ಬಿಡುಗಡೆ ಮಾಡಿದ ನಂತರ ದಲ್ಲೆವಾಲ್ ಒಂದು ಲೋಟ ನೀರು ಕುಡಿದಿದ್ದಾರೆ” ಎಂದು ದಲ್ಲೆವಾಲ್ ಅವರ ಆಪ್ತ ಸಹಾಯಕ ಕೊಹರ್ ಹೇಳಿದರು. “ದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡಲಾಗುತ್ತಿದೆ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಅವರ ಉಪವಾಸ ಸತ್ಯಾಗ್ರಹ ಮುಂದುವರೆದಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾರ್ಚ್ 19 ರಂದು ಹರಿಯಾಣದ ಖಾನೌರಿ ಮತ್ತು ಶಂಭು ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಚದುರಿಸಲಾಯಿತು; ಧರಣಿಯಿಂದಾಗಿ ನಿರ್ಬಂಧಿಸಲಾದ ರಸ್ತೆಗಳು ಮತ್ತು ಹೆದ್ದಾರಿಗಳನ್ನು ತೆರೆಯಲಾಯಿತು ಎಂದು ಪಂಜಾಬ್ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಪ್ರತಿಭಟನಾ ನಿರತ ರೈತರು ಮತ್ತು ಅವರ ಕೆಲವು ನಾಯಕರನ್ನು ಆ ದಿನ ಪಂಜಾಬ್ ಪೊಲೀಸರು ಬಂಧಿಸಿದರು.

ಮತ್ತೊಬ್ಬ ರೈತ ನಾಯಕ ಕಾಕಾ ಸಿಂಗ್ ಕೊಟ್ರಾ ಅವರು ಶನಿವಾರ ರೈತರ ಬಂಧನದ ಬಗ್ಗೆ ದಲ್ಲೆವಾಲ್‌ಗೆ ತಿಳಿದಾಗ, ಅವರೆಲ್ಲರನ್ನೂ ಬಿಡುಗಡೆ ಮಾಡುವವರೆಗೆ ನೀರು ತೆಗೆದುಕೊಳ್ಳಲು ನಿರಾಕರಿಸಿದರು ಎಂದು ಹೇಳಿದರು. ರೈತರ ಬಿಡುಗಡೆಯ ನಂತರ ಅವರು ನೀರು ಕುಡಿದರು ಎಂದು ಕೊಟ್ರಾ ಹೇಳಿದರು.

ದಲ್ಲೆವಾಲ್ (70) ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಜಂಟಿ ವೇದಿಕೆಯ ಹಿರಿಯ ನಾಯಕ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಒದಗಿಸಲು ಕಾನೂನುಬದ್ಧ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸ್ವೀಕರಿಸಲು ಕೇಂದ್ರವನ್ನು ಒತ್ತಾಯಿಸಲು ಅವರು ಕಳೆದ ವರ್ಷ ನವೆಂಬರ್ 26 ರಂದು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು.

ಜನವರಿಯಲ್ಲಿ ಕೇಂದ್ರವು ರೈತ ನಾಯಕರನ್ನು ಮಾತುಕತೆಗೆ ಆಹ್ವಾನಿಸಿದ ನಂತರ, ದಲ್ಲೆವಾಲ್ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೈದ್ಯಕೀಯ ನೆರವು ಪಡೆಯಲು ಪ್ರಾರಂಭಿಸಿದರು. ಆದರೆ, ತಮ್ಮ ಉಪವಾಸವನ್ನು ಕೊನೆಗೊಳಿಸಲಿಲ್ಲ.

ಮಾರ್ಚ್ 19 ರಂದು ಪೊಲೀಸ್ ಕ್ರಮದ ಸಮಯದಲ್ಲಿ ಬಂಧಿಸಲ್ಪಟ್ಟ ಸರ್ವಾನ್ ಸಿಂಗ್ ಪಂಧೇರ್, ಅಭಿಮನ್ಯು ಕೊಹರ್, ಕಾಕಾ ಸಿಂಗ್ ಕೊತ್ರಾ ಮತ್ತು ಇತರ ನಾಯಕರು ಸೇರಿದಂತೆ ಹಲವಾರು ರೈತ ನಾಯಕರನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.

ಕಿಸಾನ್ ಮಜ್ದೂರ್ ಮೋರ್ಚಾ ನಾಯಕ ಪಂಧೇರ್ ಅವರನ್ನು ಮುಕ್ತ್ಸರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಕೊಹರ್, ಕೊತ್ರಾ ಮತ್ತು ಇತರ ಕೆಲವು ರೈತ ನಾಯಕರನ್ನು ಪಟಿಯಾಲ ಕೇಂದ್ರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ, ಅವರು ಶುಕ್ರವಾರ ಆಸ್ಪತ್ರೆಯಲ್ಲಿ ದಲ್ಲೆವಾಲ್ ಅವರನ್ನು ಭೇಟಿಯಾದರು.

ಮಾರ್ಚ್ 19 ರಂದು ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯಿಂದ ಹಿಂತಿರುಗುತ್ತಿದ್ದಾಗ ರೈತ ನಾಯಕರನ್ನು ಬಂಧಿಸಲಾಯಿತು.

ರೈತರ ಬೇಡಿಕೆಗಳನ್ನು, ವಿಶೇಷವಾಗಿ ಎಂಎಸ್‌ಪಿ ಖಾತರಿಯನ್ನು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಯನ್ನು ಪ್ರವೇಶಿಸುತ್ತಿದ್ದಂತೆ, ಅವರನ್ನು ಭಾರೀ ಬ್ಯಾರಿಕೇಡ್ ಮೂಲಕ ಎದುರಿಸಲಾಯಿತು; ರೈತರ ಸಂಘದ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿ ಗಡಿ ಬಿಂದುಗಳಿಂದ ಪೊಲೀಸರು ರೈತರನ್ನು ಹೊರಹಾಕಿ ತಾತ್ಕಾಲಿಕ ಟೆಂಟ್‌ಗಳನ್ನು ಕೆಡವಿದ್ದರು. ಶಂಭು-ಅಂಬಾಲ ಮತ್ತು ಸಂಗ್ರೂರ್-ಜಿಂದ್ ಹೆದ್ದಾರಿಗಳಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿತ್ತು.

ಶಂಭು ಮತ್ತು ಖಾನೌರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವಾರು ರೈತರು, ಟ್ರಾಲಿಗಳು ಸೇರಿದಂತೆ ತಮ್ಮ ವಸ್ತುಗಳು ಕಾಣೆಯಾಗಿವೆ ಎಂದು ಹೇಳಿಕೊಂಡಿದ್ದಾರೆ, ಅವುಗಳನ್ನು ಕದ್ದಿರಬಹುದು ಎಂದು ಹೇಳಿದ್ದಾರೆ.

‘ಗಾಂಧಿ’ ಹೆಸರಿಟ್ಟಿರುವ ‘ಮನರೇಗಾ ಯೋಜನೆ’ ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...