Homeಮುಖಪುಟದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ; ನೀರು ಮಾತ್ರ ಕುಡಿದಿದ್ದಾರೆ: ರೈತ ಸಂಘಟನೆ

ದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ; ನೀರು ಮಾತ್ರ ಕುಡಿದಿದ್ದಾರೆ: ರೈತ ಸಂಘಟನೆ

- Advertisement -
- Advertisement -

ಕಳೆದ ವಾರ ರಾಜ್ಯ ಪೊಲೀಸರು ಬಂಧಿಸಿದ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ನಂತರ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಒಂದು ಲೋಟ ನೀರು ಕುಡಿದಿದ್ದರೂ ಅವರು ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿಲ್ಲ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಶನಿವಾರ ಹೇಳಿದ್ದಾರೆ.ಧೆ

ದಲ್ಲೆವಾಲ್ ನೀರು ಸ್ವೀಕರಿಸಿ ಉಪವಾಸ ಮುರಿದಿದ್ದಾರೆ ಎಂದು ಪಂಜಾಬ್ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಬಗ್ಗೆ ಪಂಜಾಬ್ ಸರ್ಕಾರದ ಹೇಳಿಕೆಗೆ ಪ್ರತಿಜ್ರಿಯಿಸಿರುವ ರೈತ ನಾಯಕ, “ಎಲ್ಲ ರೈತರ ಬಿಡುಗಡೆಯ ನಂತರವೇ ತಾನು ನೀರು ಕುಡಿಯುವುದಾಗಿ ದಲ್ಲೆವಾಲ್ ಸ್ಪಷ್ಟಪಡಿಸಿದ್ದಾರೆ” ಎಂದು ಕೊಹರ್ ಶನಿವಾರ ಹೇಳಿದರು.

“ರೈತ ನಾಯಕರನ್ನು ಬಿಡುಗಡೆ ಮಾಡಿದ ನಂತರ ದಲ್ಲೆವಾಲ್ ಒಂದು ಲೋಟ ನೀರು ಕುಡಿದಿದ್ದಾರೆ” ಎಂದು ದಲ್ಲೆವಾಲ್ ಅವರ ಆಪ್ತ ಸಹಾಯಕ ಕೊಹರ್ ಹೇಳಿದರು. “ದಲ್ಲೆವಾಲ್ ತಮ್ಮ ಅನಿರ್ದಿಷ್ಟ ಉಪವಾಸವನ್ನು ಕೊನೆಗೊಳಿಸಿದ್ದಾರೆ ಎಂಬ ತಪ್ಪು ಅಭಿಪ್ರಾಯವನ್ನು ನೀಡಲಾಗುತ್ತಿದೆ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಅವರ ಉಪವಾಸ ಸತ್ಯಾಗ್ರಹ ಮುಂದುವರೆದಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾರ್ಚ್ 19 ರಂದು ಹರಿಯಾಣದ ಖಾನೌರಿ ಮತ್ತು ಶಂಭು ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಚದುರಿಸಲಾಯಿತು; ಧರಣಿಯಿಂದಾಗಿ ನಿರ್ಬಂಧಿಸಲಾದ ರಸ್ತೆಗಳು ಮತ್ತು ಹೆದ್ದಾರಿಗಳನ್ನು ತೆರೆಯಲಾಯಿತು ಎಂದು ಪಂಜಾಬ್ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಪ್ರತಿಭಟನಾ ನಿರತ ರೈತರು ಮತ್ತು ಅವರ ಕೆಲವು ನಾಯಕರನ್ನು ಆ ದಿನ ಪಂಜಾಬ್ ಪೊಲೀಸರು ಬಂಧಿಸಿದರು.

ಮತ್ತೊಬ್ಬ ರೈತ ನಾಯಕ ಕಾಕಾ ಸಿಂಗ್ ಕೊಟ್ರಾ ಅವರು ಶನಿವಾರ ರೈತರ ಬಂಧನದ ಬಗ್ಗೆ ದಲ್ಲೆವಾಲ್‌ಗೆ ತಿಳಿದಾಗ, ಅವರೆಲ್ಲರನ್ನೂ ಬಿಡುಗಡೆ ಮಾಡುವವರೆಗೆ ನೀರು ತೆಗೆದುಕೊಳ್ಳಲು ನಿರಾಕರಿಸಿದರು ಎಂದು ಹೇಳಿದರು. ರೈತರ ಬಿಡುಗಡೆಯ ನಂತರ ಅವರು ನೀರು ಕುಡಿದರು ಎಂದು ಕೊಟ್ರಾ ಹೇಳಿದರು.

ದಲ್ಲೆವಾಲ್ (70) ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಜಂಟಿ ವೇದಿಕೆಯ ಹಿರಿಯ ನಾಯಕ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಒದಗಿಸಲು ಕಾನೂನುಬದ್ಧ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸ್ವೀಕರಿಸಲು ಕೇಂದ್ರವನ್ನು ಒತ್ತಾಯಿಸಲು ಅವರು ಕಳೆದ ವರ್ಷ ನವೆಂಬರ್ 26 ರಂದು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು.

ಜನವರಿಯಲ್ಲಿ ಕೇಂದ್ರವು ರೈತ ನಾಯಕರನ್ನು ಮಾತುಕತೆಗೆ ಆಹ್ವಾನಿಸಿದ ನಂತರ, ದಲ್ಲೆವಾಲ್ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೈದ್ಯಕೀಯ ನೆರವು ಪಡೆಯಲು ಪ್ರಾರಂಭಿಸಿದರು. ಆದರೆ, ತಮ್ಮ ಉಪವಾಸವನ್ನು ಕೊನೆಗೊಳಿಸಲಿಲ್ಲ.

ಮಾರ್ಚ್ 19 ರಂದು ಪೊಲೀಸ್ ಕ್ರಮದ ಸಮಯದಲ್ಲಿ ಬಂಧಿಸಲ್ಪಟ್ಟ ಸರ್ವಾನ್ ಸಿಂಗ್ ಪಂಧೇರ್, ಅಭಿಮನ್ಯು ಕೊಹರ್, ಕಾಕಾ ಸಿಂಗ್ ಕೊತ್ರಾ ಮತ್ತು ಇತರ ನಾಯಕರು ಸೇರಿದಂತೆ ಹಲವಾರು ರೈತ ನಾಯಕರನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.

ಕಿಸಾನ್ ಮಜ್ದೂರ್ ಮೋರ್ಚಾ ನಾಯಕ ಪಂಧೇರ್ ಅವರನ್ನು ಮುಕ್ತ್ಸರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಕೊಹರ್, ಕೊತ್ರಾ ಮತ್ತು ಇತರ ಕೆಲವು ರೈತ ನಾಯಕರನ್ನು ಪಟಿಯಾಲ ಕೇಂದ್ರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ, ಅವರು ಶುಕ್ರವಾರ ಆಸ್ಪತ್ರೆಯಲ್ಲಿ ದಲ್ಲೆವಾಲ್ ಅವರನ್ನು ಭೇಟಿಯಾದರು.

ಮಾರ್ಚ್ 19 ರಂದು ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯಿಂದ ಹಿಂತಿರುಗುತ್ತಿದ್ದಾಗ ರೈತ ನಾಯಕರನ್ನು ಬಂಧಿಸಲಾಯಿತು.

ರೈತರ ಬೇಡಿಕೆಗಳನ್ನು, ವಿಶೇಷವಾಗಿ ಎಂಎಸ್‌ಪಿ ಖಾತರಿಯನ್ನು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಯನ್ನು ಪ್ರವೇಶಿಸುತ್ತಿದ್ದಂತೆ, ಅವರನ್ನು ಭಾರೀ ಬ್ಯಾರಿಕೇಡ್ ಮೂಲಕ ಎದುರಿಸಲಾಯಿತು; ರೈತರ ಸಂಘದ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿ ಗಡಿ ಬಿಂದುಗಳಿಂದ ಪೊಲೀಸರು ರೈತರನ್ನು ಹೊರಹಾಕಿ ತಾತ್ಕಾಲಿಕ ಟೆಂಟ್‌ಗಳನ್ನು ಕೆಡವಿದ್ದರು. ಶಂಭು-ಅಂಬಾಲ ಮತ್ತು ಸಂಗ್ರೂರ್-ಜಿಂದ್ ಹೆದ್ದಾರಿಗಳಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿತ್ತು.

ಶಂಭು ಮತ್ತು ಖಾನೌರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವಾರು ರೈತರು, ಟ್ರಾಲಿಗಳು ಸೇರಿದಂತೆ ತಮ್ಮ ವಸ್ತುಗಳು ಕಾಣೆಯಾಗಿವೆ ಎಂದು ಹೇಳಿಕೊಂಡಿದ್ದಾರೆ, ಅವುಗಳನ್ನು ಕದ್ದಿರಬಹುದು ಎಂದು ಹೇಳಿದ್ದಾರೆ.

‘ಗಾಂಧಿ’ ಹೆಸರಿಟ್ಟಿರುವ ‘ಮನರೇಗಾ ಯೋಜನೆ’ ಮೋದಿ ಸರ್ಕಾರಕ್ಕೆ ಇಷ್ಟವಾಗುವುದಿಲ್ಲ: ಎಂ.ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...