Homeಮುಖಪುಟ'ಹಾನಿಯಾದ ಮನೆಗಳು ಲೂಟಿಯಾಗುತ್ತಿವೆ..'; ವಯನಾಡ್ ಭೂಕುಸಿತದಿಂದ ಬದುಕುಳಿದವರ ಅಳಲು

‘ಹಾನಿಯಾದ ಮನೆಗಳು ಲೂಟಿಯಾಗುತ್ತಿವೆ..’; ವಯನಾಡ್ ಭೂಕುಸಿತದಿಂದ ಬದುಕುಳಿದವರ ಅಳಲು

- Advertisement -
- Advertisement -

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತದಿಂದ ಧ್ವಂಸಗೊಂಡ ಹಳ್ಳಿಗಳ ನಿವಾಸಿಗಳು ತಮ್ಮ ಮನೆಗಳನ್ನು ತೊರೆದು ಓಡಿಹೋಗಲು ಒತ್ತಾಯಿಸಲ್ಪಟ್ಟರು, ಅವರು ತಾವು ಬಿಟ್ಟುಬಂದ ಆಸ್ತಿಗಳಲ್ಲಿ ಕಳ್ಳತನವಾಗುತ್ತಿವೆ ಎಂದು ದೂರು ನೀಡಿದ್ದಾರೆ. ಪೊಲೀಸರ ರಾತ್ರಿ ಗಸ್ತು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ.

ಕಳ್ಳರು ರಾಜ್ಯದ ಅತಿದೊಡ್ಡ ಮಾನವೀಯ ಬಿಕ್ಕಟ್ಟಿನ ಲಾಭವನ್ನು ಪಡೆದು ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ ಎಂದು ಸ್ಥಳಾಂತರಗೊಂಡ ನಿವಾಸಿಗಳು ಶಂಕಿಸಿದ್ದಾರೆ. ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ ಪ್ರದೇಶಕ್ಕೆ ನುಗ್ಗುವವರನ್ನು ಗುರುತಿಸಿ ಶಿಕ್ಷಿಸಬೇಕು ಎಂದು ಸಂತ್ರಸ್ತ ಕೆಲವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡವರು ನಾವೇ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು. “ನಾವು ಭೂಕುಸಿತ ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಮನೆಗಳನ್ನು ತ್ಯಜಿಸಿದ್ದೇವೆ. ಆದರೆ, ಅದರ ನಂತರ ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ಸದ್ಯ ಅವರು ತಂಗಿರುವ ರೆಸಾರ್ಟ್‌ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ” ಎಂದು ದೂರಿದರು.

ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ. ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಅದು ಹೇಳಿದೆ.

ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ತಮ್ಮ ಐದನೇ ದಿನಕ್ಕೆ ಕಾಲಿಡುತ್ತಿದ್ದಂತೆ, ರಕ್ಷಣಾ ಪಡೆಗಳು ಹೆಚ್ಚಿನ ದೇಹಗಳು ಮತ್ತು ದೇಹದ ಭಾಗಗಳನ್ನು ಪತ್ತೆಹಚ್ಚಿದ್ದಾರೆ. ಸಾವಿನ ಸಂಖ್ಯೆಯನ್ನು 350 ದಾಟಿದ್ದು, ಸುಮಾರು 206 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ; ವಯನಾಡ್ ದುರಂತ | 350 ದಾಟಿದ ಮೃತರ ಸಂಖ್ಯೆ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...