Homeಮುಖಪುಟಬಿಜೆಪಿ ಸ್ಪೀಕರ್ ಹುದ್ದೆ ಉಳಿಸಿಕೊಂಡರೆ ಅಪಾಯಕಾರಿ: ಎಎಪಿ

ಬಿಜೆಪಿ ಸ್ಪೀಕರ್ ಹುದ್ದೆ ಉಳಿಸಿಕೊಂಡರೆ ಅಪಾಯಕಾರಿ: ಎಎಪಿ

- Advertisement -
- Advertisement -

ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯನ್ನು ಉಲ್ಲೇಖಿಸಿದ ಎಎಪಿ ಸಂಸದ ಸಂಜಯ್ ಸಿಂಗ್, ಹೊಸ ಲೋಕಸಭೆಯಲ್ಲಿ ಬಿಜೆಪಿ ಪಕ್ಷದ ಸಂಸದ ಸ್ಪೀಕರ್ ಆದರೆ “ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ” ಎಂದು ಹೇಳಿದ್ದಾರೆ.

16 ಸಂಸದರನ್ನು ಹೊಂದಿರುವ ಎನ್‌ಡಿಎಯ ಎರಡನೇ ಅತಿದೊಡ್ಡ ಮಿತ್ರಪಕ್ಷ ಟಿಡಿಪಿ ನೂತನ ಸರಕಾರದಲ್ಲಿ ಸ್ಪೀಕರ್‌ ಹುದ್ದೆಯನ್ನು ಅಲಂಕರಿಸುತ್ತಾ ಎಂದು ಕಾದು ನೋಡಬೇಕಿದೆ. ಬಹುಮತಕ್ಕಿಂತ 32 ಸ್ಥಾನಗಳಿಗಿಂತ ಕಡಿಮೆ ಇರುವ ಬಿಜೆಪಿಗೆ ಅದರ ಮಿತ್ರಪಕ್ಷಗಳ ಬೆಂಬಲದ ಅಗತ್ಯವಿದೆ. ವಿಶೇಷವಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಬೆಂಬಲದ ಅಗತ್ಯವಿದೆ.

ಲಕ್ನೋದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ದೇಶದ ಸಂಸತ್ತಿನ ಇತಿಹಾಸದಲ್ಲಿ ಎಂದಿಗೂ 150ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿಲ್ಲ, ಆದರೆ ಬಿಜೆಪಿ ಅದನ್ನು ಮಾಡಿದೆ. ಆದ್ದರಿಂದ ಸ್ಪೀಕರ್ ಬಿಜೆಪಿಯವರಾಗಿದ್ದರೆ, ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ವಿಧೇಯಕಗಳನ್ನು ಅವರಿಗೆ ಬೇಕಾದಂತೆ ಅಂಗೀಕರಿಸಲಾಗುತ್ತದೆ. ಟಿಡಿಪಿ, ಜೆಡಿಯು ಮತ್ತು ಇತರ ಸಣ್ಣ ಪಕ್ಷಗಳನ್ನು ವಿಭಜಿಸಿ ಬಲವಂತವಾಗಿ ಬಿಜೆಪಿಗೆ ಸೇರಿಕೊಳುವ ಪ್ರಯತ್ನವೂ ನಡೆಯಲಿದೆ. ಬಿಜೆಪಿಗೆ ಅದರ ಇತಿಹಾಸವಿದೆ ಎಂದು ಹೇಳಿದ್ದಾರೆ.

ಸ್ಪೀಕರ್ ಹುದ್ದೆಯನ್ನು ಹೊಸ ಎನ್‌ಡಿಎ ಸರ್ಕಾರದ “ಮೊದಲ ಪರೀಕ್ಷೆ” ಎಂದು ಕರೆದ ಸಂಜಯ್ ಸಿಂಗ್, ಈ ಹುದ್ದೆ ಬಿಜೆಪಿಯಲ್ಲೇ ಉಳಿದರೆ, ಧ್ವನಿ ಎತ್ತುವ ಸಂಸದರನ್ನು ಸದನದಿಂದ ಹೊರದಬ್ಬಲಾಗುತ್ತದೆ. ಸ್ಪೀಕರ್ ಆಯ್ಕೆಯ ಕುರಿತು ಬಿಜೆಪಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಇಂಡಿಯಾ ಬಣ ಕಾದು ನೋಡಲಿದೆ ಎಂದು ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷವಾದ ಎಎಪಿ ಪಂಜಾಬ್‌ನಲ್ಲಿ ಅಧಿಕಾರದಲ್ಲಿದೆ. ಪಂಜಾಬ್‌ನಲ್ಲಿ ಎಎಪಿ ಕೇವಲ ಮೂರು ಲೋಕಸಭಾ ಸ್ಥಾನಗಳಲ್ಲಿ ಗೆಲುವನ್ನು ಕಂಡಿದೆ. ಈ ಬಾರಿ ಒಟ್ಟಾರೆ ಚುನಾವಣೆ ಫಲಿತಾಂಶವನ್ನು ನೋಡಿದರೆ ಎಎಪಿಯು ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನವನ್ನು ನೀಡಿದೆ. ಎಎಪಿ ಸರಕಾರ ಇರುವ ದೆಹಲಿಯಲ್ಲಿ ಎಎಪಿ ಎಲ್ಲಾ ಸ್ಥಾನಗಳಲ್ಲಿ ಸೋಲನ್ನು ಕಂಡಿದೆ.

ಇದನ್ನು ಓದಿ: ‘ದಿ ಕಾರವಾನ್‌’ ಪತ್ರಕರ್ತರ ವಿರುದ್ಧದ ಎಫ್‌ಐಆರ್ ಖಂಡಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...