Homeಮುಖಪುಟಅಪಾಯಕಾರಿ ಜನ್ ವಿಶ್ವಾಸ್ ಮಸೂದೆಗೆ ಅಸ್ತು: ಔಷಧಿ ತಯಾರಕರ ಪರ ನಿಂತ ಕೇಂದ್ರ ಸರ್ಕಾರ

ಅಪಾಯಕಾರಿ ಜನ್ ವಿಶ್ವಾಸ್ ಮಸೂದೆಗೆ ಅಸ್ತು: ಔಷಧಿ ತಯಾರಕರ ಪರ ನಿಂತ ಕೇಂದ್ರ ಸರ್ಕಾರ

- Advertisement -
- Advertisement -

ಮಣಿಪುರ ವಿಷಯದ ಬಗ್ಗೆ ಪ್ರಧಾನಿಯವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟಿಸುತ್ತಿರುವ ವೇಳೆಯಲ್ಲಿಯೇ ಜನಾರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎನಿಸಿರುವ ಜನ್ ವಿಶ್ವಾಸ್ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿದೆ.

ವ್ಯವಹಾರವನ್ನು ಸುಲಭಗೊಳಿಸುವ ಉದ್ದೇಶದಿಂದ 42 ಕಾಯ್ದೆಗಳಲ್ಲಿ 183 ನಿಬಂಧನೆಗಳನ್ನು ತಿದ್ದುಪಡಿ ಮಾಡುವ ಮೂಲಕ ಸಣ್ಣ ಅಪರಾಧಗಳನ್ನು ನಿರಪರಾಧೀಕರಿಸುವ ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ- 2023 ಅನ್ನು ಲೋಕಸಭೆ ಗುರುವಾರ ಅಂಗೀಕರಿಸಿತು.

ಮಸೂದೆ ಮಂಡಿಸಿದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ‘ಇದು ಹಲವಾರು ನಿಬಂಧನೆಗಳನ್ನು ನಿರಪರಾಧೀಕರಿಸುವ ಮೂಲಕ ವ್ಯವಹಾರವನ್ನು ಸುಲಭಗೊಳಿಸಲು ಉತ್ತೇಜಿಸುತ್ತದೆ’ ಎಂದು ಹೇಳಿದರು.

ಮಸೂದೆಯು ಹಲವಾರು ದಂಡಗಳನ್ನು ಪೆನಾಲ್ಟಿಗಳಾಗಿ ಪರಿವರ್ತಿಸುತ್ತದೆ, ಅಂದರೆ ಶಿಕ್ಷೆಗಳನ್ನು ನಿರ್ವಹಿಸಲು ನ್ಯಾಯಾಲಯದ ಪ್ರಾಸಿಕ್ಯೂಷನ್ ಅಗತ್ಯವಿಲ್ಲ. ಇದು ಅನೇಕ ಅಪರಾಧಗಳಿಗೆ ಜೈಲು ಶಿಕ್ಷೆಯನ್ನು ತೆಗೆದುಹಾಕಿದೆ. ಅಲ್ಲದೇ ಪೋಸ್ಟ್ ಆಫೀಸ್ ಆಕ್ಟ್ 1898 ರ ಅಡಿಯಲ್ಲಿ ಎಲ್ಲಾ ಅಪರಾಧಗಳನ್ನು ತೆಗೆದುಹಾಕಲಾಗುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರವು ಜನರಿಗೆ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆಯನ್ನು ಹೊಂದಿರುವ ಸುಮಾರು 40,000 ನಿಬಂಧನೆಗಳು ಮತ್ತು ಕಾರ್ಯವಿಧಾನಗಳನ್ನು ಸರಳೀಕರಿಸಲಾಗಿದೆ ಅಥವಾ ತೆಗೆದುಹಾಕಲಾಗಿದೆ ಎಂದು ಗೋಯಲ್ ಹೇಳಿದರು.

ನಾವು ಯಾವುದೇ ಔಷಧಿಯನ್ನು ಖರೀದಿಸಿದಾಗ, ಅದು ಕೆಲಸ ಮಾಡುತ್ತದೆ ಮತ್ತು ನಮಗೆ ಹಾನಿ ಮಾಡುವುದಿಲ್ಲ ಎಂದು ಸರ್ಕಾರವು ಪರಿಶೀಲಿಸಿದೆ ಎಂದು ನಾವು ಭಾವಿಸುತ್ತೇವೆ. ಆದರೆ ಪ್ರಸ್ತಾವಿತ ತಿದ್ದುಪಡಿಗಳು ಗುಣಮಟ್ಟವಿಲ್ಲದ ಔಷಧಿಗಳಿಗೆ ಅವಕಾಶ ನೀಡುವುದರಿ ಜೊತೆಗೆ ಅಡ್ಡಪರಿಣಾಮಗಳಿಗೆ  ಶಿಕ್ಷೆಯನ್ನು ಕಡಿಮೆ ಮಾಡುತ್ತದೆ. ಇದು ದೊಡ್ಡ ಉದ್ಯಮಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಆದರೆ ನಮ್ಮೆಲ್ಲರಿಗೂ ಹಾನಿ ಮಾಡುತ್ತದೆ. ಅತಿ ಅಪಾಯಕಾರಿ ಮಸೂದೆಯನ್ನು ಹಿಂಪಡೆಯಬೇಕೆಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಈ ಹಿಂದೆ ಆಗ್ರಹಿಸಿದ್ದರು.

ಲೋಕಸಭೆಯು ಇಂದು ಜನ ವಿಶ್ವಾಸ್ 2023 ಮಸೂದೆಯನ್ನು ಬಹಳ ಕಡಿಮೆ ಚರ್ಚೆಯೊಂದಿಗೆ ಅಂಗೀಕರಿಸಿತು. ಈ ಮಸೂದೆಯು ಉದ್ಯಮದ ದೀರ್ಘಾವಧಿಯ ಆಶಯ ಪಟ್ಟಿಯನ್ನು ಪೂರೈಸುತ್ತದೆ. ಆದರೆ ನೀವು ಗುಣಮಟ್ಟವಿಲ್ಲದ ಔಷಧದಿಂದ ದೈಹಿಕ ಹಾನಿಯನ್ನು ಅನುಭವಿಸಿದರೆ, ಯಾರನ್ನೂ ದಂಡನೀಯವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಪತ್ರಕರ್ತ ಆರೋಗ್ಯ ಕಾರ್ಯಕರ್ತ ದಿನೇಶ್ ಎಸ್ ಠಾಕೂರ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಕಾಯ್ದೆ ತಿದ್ದುಪಡಿ; ವಿನಾಶಕ್ಕೆ ಬರೆದ ಮುನ್ನುಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...