Homeಮುಖಪುಟಭಾಷಾತೀತವಾಗಿ ಏಕಭಾಷೆಯಾಗುತ್ತಿರುವ “Hate Speech” - ದ್ವೇಷದ ಭಾಷೆ

ಭಾಷಾತೀತವಾಗಿ ಏಕಭಾಷೆಯಾಗುತ್ತಿರುವ “Hate Speech” – ದ್ವೇಷದ ಭಾಷೆ

- Advertisement -
- Advertisement -

ಇಂಗ್ಲಿಷಿನಲ್ಲಿ ಒಂದು ಗಾದೆ ಮಾತಿದೆ- “Taste Yours Words Before Spitting”- “ಉಗುಳುವ ಮೊದಲು ನೀನಾಡುವ ಶಬ್ದಗಳ ರುಚಿ ನೋಡು” ಎಂದು. ಅತ್ಯಂತ ಸರಳವಾಗಿ ಮಾತಿನಿಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಸಲು ಬಳಸಬಹುದಾದ ಗಾದೆ. ಆದರೆ ಇಂದಿನ ವಿಪರ್ಯಾಸವೆಂದರೆ ಮಾತಾಡುವ ಮೊದಲು ಯೋಚಿಸುವ ವ್ಯವಧಾನ ಯಾರಿಗೂ ಇಲ್ಲ ಅಥವಾ ಅಗತ್ಯ ಅವರಿಗೆ ಕಂಡು ಬರುತ್ತಿಲ್ಲ.

ದ್ವೇಷದ ಭಾಷೆ ಅಥವಾ ಹಗೆನುಡಿಯ ಪ್ರತಿಪಾದಕರು ಶೀಘ್ರ ಖ್ಯಾತಿಹೊಂದುವ ಅತ್ಯಂತ ಸುಲಭವಾಗಿ ಸುದ್ದಿ ಮಾಧ್ಯಮಗಳಲ್ಲಿ ಮಿಂಚುವ ಖಯಾಲಿಯಿಂದ ಆಡುವ ಮಾತುಗಳು ಒಂದು ಇಡೀ ಸಮಾಜದ ಸ್ವಾಸ್ಥ್ಯವನ್ನು ಅದೆಷ್ಟು ಹದಗೆಡಿಸಬಹುದು ಎಂಬುದು ಇಂದು ಕಾಣದಿದ್ದರೂ ಭವಿಷ್ಯದ ದಿನಗಳಲ್ಲಿ ಹೆಚ್ಚು ಸ್ಪಷ್ಟವಾಗಲಿದೆ. ಜಗತ್ತಿನಾದ್ಯಂತ ಇಂಥದೇ ಜನಾಂಗೀಯ ಭೇದ ಅಥವಾ ಕೋಮುದ್ವೇಷ ಕಾರುವ ರಾಜಕೀಯದಿಂದ ಅನೇಕ ದೊಡ್ಡ ಮತ್ತು ಚಿಕ್ಕ ದೇಶಗಳು ನಮ್ಮ ಕಣ್ಣೆದುರೇ ಹಾಳಾಗುತ್ತಿರುವುದನ್ನು ನೋಡಿಯೂ ನಾವು ಕಣ್ಣು ತೆರೆಯದಿದ್ದರೆ ಇತಿಹಾಸ ಈ ಹೊಣೆಗೇಡಿತನವನ್ನು ಎಂದಿಗೂ ಕ್ಷಮಿಸದು.

ಪೂಜಾ ಶಕುನ್ ಪಾಂಡೆ

Hate Speech ಎಂಬುದು ಹೊಸದೇನಲ್ಲ ಅಥವಾ ನಮ್ಮ ದೇಶಕ್ಕೆ ಮಾತ್ರ ಸೀಮಿತವಾದದ್ದೂ ಅಲ್ಲ. ಹಿಟ್ಲರ್, ಮುಸಲೋನಿ, ಈದಿ ಅಮೀನರಂತಹ ಜನಾಂಗ ದ್ವೇಷದ ಹರಿಕಾರರು ಲಕ್ಷಾಂತರ ಜನರ ಮೆದುಳುಗಳನ್ನು ನಿಷ್ಕ್ರಿಯಗೊಳಿಸಲು ಯಶಸ್ವಿಯಾಗಿದ್ದು, ಜನರು ತಮ್ಮತಮ್ಮಲ್ಲೇ ಹೊಡೆದಾಡಿ ಸಾಯುವಂತೆ ಮಾಡಲು ಸಾಧ್ಯವಾದದ್ದು ಈ Hate Speech ಅಥವಾ ಹಗೆನುಡಿಯಿಂದಲೇ. ಇಂದು ಶ್ರೀಲಂಕಾದ ಜನತೆ ಊಟಕ್ಕೂ ಗತಿ ಇಲ್ಲದೆ ದೋಣಿಗಳಲ್ಲಿ ಅಕ್ರಮವಾಗಿ ಭಾರತ ಅಥವಾ ಇತರ ದೇಶಗಳಿಗೆ ತೆರಳಿ ನಿರಾಶ್ರಿತರ ಕ್ಯಾಂಪ್‌ಗಳಲ್ಲಿ ಬದುಕುವಂತೆ ಮಾಡುತ್ತಿರುವುದು ಇಂಥದೇ ಜನಾಂಗ ದ್ವೇಷದ ಕಾರಣದಿಂದ.

ಈ ಮೊದಲು ಈ ದೇಶದಲ್ಲಿದ್ದ ಹಗೆನುಡಿಯ ಕಾರಣದಿಂದ ಅನೇಕ ಬಾರಿ ದಂಗೆಗಳಾಗಿವೆ, ಹತ್ಯಾಕಾಂಡಗಳು ನಡೆದಿವೆ. ಆದರೆ ಸುರಂಗದಾಚೆಗಿನ ಬೆಳಕಿನಂತೆ ಅವೆಲ್ಲ ಅಂದಿನ ಮುತ್ಸದ್ಧಿ ನಾಯಕರು ಅಥವಾ ನಿಷ್ಟುರ ನ್ಯಾಯಾಂಗದ ಮಧ್ಯಸ್ಥಿಕೆಯಿಂದ ಅಂತ್ಯ ಕಂಡಿವೆ. ಸ್ವಾತಂತ್ರ್ಯಾನಂತರ ನಡೆದ ನೌಖಾಲಿ ಗಲಭೆಗಳ ಸಮಯದಲ್ಲಿ ಗಾಂಧೀಜಿ ಸ್ವತಃ ಅಲ್ಲಿಗೆ ತೆರಳಿ, ಗಲಭೆ ನಿಲ್ಲುವವರೆಗೂ ಉಪವಾಸ ಇರುವುದಾಗಿ ಹೇಳಿ ಕೊನೆಗೂ ಶಾಂತಿ ನೆಲೆಸುವಂತೆ ಮಾಡಿದರು. ಆದರೆ ಇವತ್ತು ಅದೇ ಗಾಂಧೀಜಿ ಭಾವಚಿತ್ರಕ್ಕೆ ಚುನಾಯಿತ ಜನಪ್ರತಿನಿಧಿ ಗನ್ ಹಿಡಿದು ಅಣಕು ಕೊಲೆ ಮಾಡುತ್ತಾಳೆ, ಸುತ್ತನೆರೆದ ಜನರು ನಗುತ್ತಾ ಚಪ್ಪಾಳೆ ತಟ್ಟುತ್ತಾರೆ, ಇನ್ನೊಬ್ಬ ಸಂತನೆನೆಸಿಕೊಂಡ ಕಾವಿಧಾರಿ ವ್ಯಕ್ತಿ ಧರ್ಮದ ಹೆಸರಲ್ಲಿ ನಡೆದ ಸಂಸತ್ತಿನಲ್ಲಿ ಗಾಂಧೀಜಿಯನ್ನು “ಹರಾಮ್ ಖೋರ್” ಎನ್ನುತ್ತಾನೆ.

ಗಾಂಧಿ ಹತ್ಯೆ ಮಾಡಿದ ಗೋಡ್ಸೆ ಇವತ್ತು ಅನೇಕರಿಗೆ ಹೀರೋ ಆಗಿ ಕಾಣುತ್ತಾನೆ. ಅವನಿಗೆ ಸೈದ್ಧಾಂತಿಕ ಗುರುಗಳಾದವರು ಭಾರತಕ್ಕೆ ದಾವೆದಾರರಾಗುತ್ತಾರೆ. ಒಟ್ಟಿನಲ್ಲಿ ಜನಾಂಗೀಯ ಅಥವಾ ದ್ವೇಷದ ಉರಿಯಲ್ಲಿ ಅಧಿಕಾರದ ಬೇಳೆ ಬೇಯಿಸುಕೊಳ್ಳುವ ಕೆಲಸ ಮಾತ್ರ ನಿರಂತರವಾಗಿ ನಡೆಯುತ್ತಲೇ ಇದೆ.

ಅನುರಾಗ್ ಠಾಕೂರ್

ಭಾರತದಲ್ಲಿ ಪ್ರಸಕ್ತ ದಿನಗಳಲ್ಲಿ ಹೆಚ್ಚಾಗುತ್ತಿರುವ Hate Speech ಬಗೆಗಿನ ಬಿಬಿಸಿ ವರದಿಯಲ್ಲಿ NDTV ಸರ್ವೇ ರೀಪೋರ್ಟನ್ನು ಉಲ್ಲೇಖಿಸಿ “ಭಾರತದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷದ ಭಾಷೆಯ ಪ್ರಯೋಗ ಅತ್ಯಂತ ಹೆಚ್ಚಾಗಿದೆ” ಎಂದು ಹೇಳುತ್ತದೆ. ಅಲ್ಲದೆ ಇಲ್ಲಿ ಕಾನೂನುಗಳು ಇದ್ದಾಗ್ಯೂ ಹಗೆನುಡಿಯಾಡುವವರು ಹೇಗೆ ಸುಲಭವಾಗಿ ಬಚಾವಾಗುತ್ತಾರೆ ಎಂಬುದನ್ನೂ ಹೇಳುತ್ತದೆ. ನಮ್ಮ ದೇಶದ ಕಾನೂನಿನಲ್ಲಿ ಹಗೆನುಡಿ Hate Speech ಎಂಬ ಶಬ್ದದ ಉಲ್ಲೇಖ ಎಲ್ಲೂ ಇಲ್ಲ ಆದರೆ ’Speech’ ಎಂದರೆ ಎಂಥ ಮಾತು ಎಂಬುದನ್ನು ಅರ್ಥಮಾಡಿಕೊಳ್ಳಲು ಪರಿಶಿಷ್ಟ ಜಾತಿ/ ಜನಾಂಗ ದೌರ್ಜನ್ಯ ನಿಷೇಧ ಕಾಯ್ದೆಯನ್ನು ನೋಡಬಹುದು. “ಅಪಮಾನ ಮಾಡುವ, ಅವಹೇಳನಕಾರಿಯಾದ ಮಾತು” ಇದನ್ನು ಅಪರಾಧ ಸಂಹಿತೆಯ (Penal Code) 153ಎ, 153ಬಿ, 295ಎ, 298, 505(1) ಅಡಿಯಲ್ಲಿ ಸಮಾಜದ ಶಾಂತಿ ಕದಡುವ, ದ್ವೇಷ ಉಂಟುಮಾಡುವ ಎಲ್ಲ ಮಾತುಗಳನ್ನೂ ಅಪರಾಧದ ವ್ಯಾಖ್ಯಾನದಲ್ಲಿ ತರಬಹುದು.

ಆದರೆ ವಿಚಿತ್ರವೆಂದರೆ ನಿರಂತರವಾಗಿ ಸಂವಿಧಾನವನ್ನು ವಿರೋಧಿಸುವ ಈ ವಿಚ್ಛಿದ್ರಕಾರಿ ಶಕ್ತಿ ಮತ್ತು ವ್ಯಕ್ತಿಗಳು ಇದೇ ಸಂವಿಧಾನದ ಮೂಲಭೂತ ಹಕ್ಕಿನ ಅಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಗುರಾಣಿ ಹಿಡಿದು ತಪ್ಪಿಸಿಕೊಳ್ಳುತ್ತಾರೆ. ಅದೇ ಗುರಾಣಿ ಈ ವಿಚ್ಛಿದ್ರಕಾರಿ ವ್ಯಕ್ತಿಗಳನ್ನು ವಿರೋಧಿಸಿದವರಿಗೆ ಅನ್ವಯವಾಗುವುದಿಲ್ಲ. ಅವರು ಸುಧಾ ಭಾರದ್ವಾಜ್, ಗೌತಮ್ ನೌಲಖಾ ಅಥವಾ ಜೈಲಿನಲ್ಲೇ ಸತ್ತುಹೋದ ಸ್ಟ್ಯಾನ್ ಸ್ವಾಮಿ ಇರಬಹುದು ಅಥವಾ ಪ್ರಜಾತಂತ್ರದಲ್ಲಿ ಜನರಿಂದ ಆಯ್ಕೆಯಾದ ಜಿಗ್ನೇಶ್ ಮೇವಾನಿ ಇರಬಹುದು. ಕೇವಲ ಟ್ವೀಟ್ ಮಾಡಿದ್ದಕ್ಕೆ ಒಂದು ರಾಜ್ಯದ ಶಾಸಕರನ್ನು ಇನ್ನೊಂದು ರಾಜ್ಯದ ಪೊಲೀಸರು ಅರೆಸ್ಟ್ ಮಾಡಿ ಕರೆದೊಯ್ಯುತ್ತಾರೆ. ಶಾಂತಿಯ ಅಪೀಲ್ ಮಾಡಿದ ಉಮರ್ ಖಾಲಿದ್‌ನನ್ನು ಬಂಧಿಸಿ ಜೈಲಿಗೆ ಹಾಕುತ್ತಾರೆ. ಆದರೆ ಮಾಧ್ಯಮಗಳು ಪ್ರಜಾಪ್ರಭುತ್ವದ ಸತ್ವವನ್ನು ಎತ್ತಿಹಿಡಿಯುವವರನ್ನು ವಿಲನ್‌ಗಳನ್ನಾಗಿ ಮಾಡುತ್ತದೆ. ಅದಕ್ಕಿಂತಲೂ ದುಃಖಕರವಾದದ್ದೆಂದರೆ ಈ ಸುದ್ದಿ ನೋಡುವ ಜನ ನಿಜ ಎಂದು ಅದನ್ನು ನಂಬುತ್ತಾರೆ. ಇದು ಹೇಗೆ ಸಾಧ್ಯ ಎಂಬ ಪ್ರಶ್ನೆಯೇ ಜನರಲ್ಲಿ ಮೂಡುವುದಿಲ್ಲ. ಕಾರಣ ಇಷ್ಟೆ ನಿಜವಾದ ಸಮಸ್ಯೆಗಳಿಂದ ದೂರಮಾಡಿ ಕಲ್ಪಿತ ಶತ್ರುಗಳನ್ನು ನಿರ್ಮಾಣ ಮಾಡಿ ಜನರನ್ನು ನಿರಂತರವಾಗಿ ಮರಳು ಮಾಡುವ ಕೆಲಸ ಭರದಿಂದ ನಡೆದಿದೆ.

ಕೇಂದ್ರದ ಮಂತ್ರಿ ಅನುರಾಗ್ ಠಾಕೂರ್ “ಗೋಲಿಮಾರೋ ಸಾಲೋಂಕೀ” ಎಂದರು, ಆದರೆ ಕೋರ್ಟು “ನಗುತ್ತಾ ದ್ವೇಷದ ಮಾತು ಹೇಳಿದ್ದರೆ ಅದು ಅಪರಾಧ ಅಲ್ಲ” ಎಂದಿತು.

ದೇಶದ ಪ್ರಧಾನಿ ಮೋದಿ “ದೇಶದ್ರೋಹಿಗಳನ್ನು ಅವರು ಹಾಕಿಕೊಳ್ಳುವ ಬಟ್ಟೆಯಿಂದಲೇ ಕಂಡು ಹಿಡಿಯಬಹುದು” ಎಂದರು. ಅಲ್ಲೊಬ್ಬ ಕೇಸರಿ ಹಾಕಿಕೊಂಡ ವಿಭೃತಿ ಮುಸ್ಲಿಂ ಹೆಣ್ಣುಮಕ್ಕಳನ್ನು ರೇಪ್ ಮಾಡಲು ಕರೆಕೊಟ್ಟ. ಇನ್ನೊಬ್ಬ ಧರ್ಮದ ಉಳಿವಿಗಾಗಿ ಹಿಂದೂಗಳೆಲ್ಲ ಹೆಚ್ಚುಹೆಚ್ಚು ಮಕ್ಕಳನ್ನು ಹೆರಬೇಕು ಎನ್ನುತ್ತಾನೆ. ಇನ್ನೊಬ್ಬ ಕಾವಿ ಮುಖ್ಯಮಂತ್ರಿ ಹೆಚ್ಚು ಮಕ್ಕಳಿದ್ದವರ ಹಕ್ಕು ಕಿತ್ತುಕೊಳ್ತೀವಿ ಅಂತಾನೆ. ಈ ಇಬ್ಬರ ಟಾರ್ಗೆಟ್ ಕಮ್ಯೂನಿಟಿಗಳೇ ಬೇರೆ, ಆದರೆ ಈ ಎಲ್ಲದರ ನಡುವೆ ಕುಟುಂಬ ಯೋಜನೆ ಎಂಬ ದೇಶದ ವ್ಯವಸ್ಥೆ ಅತಂತ್ರವಾಗುತ್ತದೆ.

Hate Speechಗೆ ವ್ಯವಸ್ಥೆಯ ರಕ್ಷಣೆ ಸಿಕ್ಕಾಗ ಅದು ನಿಧಾನವಾಗಿ ಸಾಂಸ್ಥೀಕರಣಗೊಳ್ಳುತ್ತ ಸಾಗುತ್ತದೆ. ಹರಿದ್ವಾರ ಮತ್ತು ದೆಹಲಿಯ ಧರ್ಮ ಸಂಸತ್ತುಗಳಲ್ಲಿ ಸಂತರೆನಿಸಿಕೊಂಡವರು “ಹೊಡಿ, ಬಡಿ, ಕಡಿ” ಎಂಬ ಕರೆಕೊಟ್ಟಿದ್ದು ಎಲ್ಲರಿಗೂ ಕಂಡಿದ್ದರೂ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ಇತ್ತೀಚೆಗೆ ಸುಪ್ರೀಂಕೋರ್ಟ್‌ನ ಜಡ್ಜ್ ಖಾನ್‌ವಿಲ್ಕರ್ ಮತ್ತು ಎ.ಎಸ್ ಓಕಾ ಅವರ ಪೀಠ ದೆಹಲಿಯ ಡೆಪ್ಯುಟಿ ಕಮೀಷನರ್ ಆಫ್ ಪೊಲೀಸ್‌ಗೆ ಮಾಹಿತಿ ಕೇಳಿದಾಗ ಅವರು ಅಫಿಡವಿಟ್ ಸಲ್ಲಿಸಿ “ಅಂಥ ಮಾಹಿತಿಗಳು ಸಿಕ್ಕಿಲ್ಲ” ಎಂದಿದ್ದು ನ್ಯಾಯಮೂರ್ತಿಗಳಿಗೆ ಸಿಟ್ಟು ತಂದು ಅದಕ್ಕೆ ವಿವರಣೆ ಕೇಳಿದ್ದಾರೆ. ಸರ್ಕಾರಿ ವಕೀಲರು ಇವರ ಮರುವಿಚಾರಣೆ ಮಾಡುವ ಭರವಸೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ಮುಂದಿನ ದಿನಗಳಲ್ಲಿ ನಡೆಯಲಿರುವ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಧರ್ಮ ಸಂಸತ್ತಿನಲ್ಲಿ ಯಾವುದೇ Hate Speech ಆಗದಂತೆ ನಿಗಾವಹಿಸಲು ಸೂಚಿಸಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಕುರಿತು ಒಪ್ಪಿ ಅಫಿಡವಿಟ್ ಸಲ್ಲಿಸಬೇಕು, ಮುಂದೇನಾದರೂ ಉಲ್ಲಂಘನೆಗಳಾದರೆ ಅವರೇ ಹೊಣೆಗಾರರು ಎಂದಿದೆ. ಈ ನಿಟ್ಟಿನಲ್ಲಿ ನೋಡಿದಾಗ ಇದೊಂದು ಒಳ್ಳೆಯ ಬೆಳವಣಿಗೆ, ಇಲ್ಲದಿದ್ದರೆ ಸುಪ್ರೀಂಕೋರ್ಟಿಗೆ ಸುಳ್ಳು ಮಾಹಿತಿ ನೀಡುವ ಈ ಪ್ರವೃತ್ತಿ ದೇಶದ ಕಾನೂನು ವ್ಯವಸ್ಥೆಯನ್ನು ಕೇವಲ ಅಣಕು ಮಾದರಿ ಮಾಡುವ ದಿನಗಳು ದೂರವಿಲ್ಲ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಕಾನೂನು ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: 8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...