Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...