Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...