Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...