Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...