Homeಚಳವಳಿಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ಕೃಷಿ ಕಾಯ್ದೆ ಅಪಾಯಗಳ ಬಗ್ಗೆ ಮನವರಿಕೆ: 4ನೇ ದಿನಕ್ಕೆ ಕಾಲಿಟ್ಟ ಯುವಜನರ ಸೈಕಲ್ ಜಾಥ

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ನಡೆಸುತ್ತಿರುವ ಸೈಕಲ್ ಜಾಥಾ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹಳ್ಳಿಗಳಿಗೆ ಹೋಗೋಣ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸೈಕಲ್ ಜಾಥಾಗೆ ರೈತರಿಂದ ಸ್ವಾಗತಾರ್ಹ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಕ್ಷಿಣ ಕರ್ನಾಟಕ ವರದಿ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ನಾವು ರೈತರಿಗೆ ಹೆಚ್ಚು ತಿಳಿಸುವುದಕ್ಕಿಂತ, ರೈತರಿಂದ ನಾವು ಬಹಳ ಕಲಿತಿದ್ದೇವೆ. ಮದ್ದೂರು ತಾಲ್ಲೂಕು ಗೆಜ್ಜಲಗೆರೆಯಲ್ಲಿ ರೈತರು ನಮಗಿಂತ ಹೆಚ್ಚು ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದು ತಿಳಿಯಿತು. ಈ ಕಾಯ್ದೆಗಳು ಯುವಜನರ ಉದ್ಯೋಗಗಳನ್ನು ಸಹ ಕಿತ್ತುಕೊಳ್ಳುತ್ತವೆ. ನಮ್ಮ ಕಾಲದಲ್ಲಿ ಜನವಿರೋಧಿ, ರೈತ ವಿರೋಧಿ ಕಾನೂನುಗಳು ಬಂದರೆ ಆ ಸರ್ಕಾರವನ್ನೇ ನಾವು ಬದಲಿಸುವ ಮಟ್ಟಿಗೆ ಹೋರಾಟ ಮಾಡುತ್ತಿದ್ದೆವು. ಆದರೆ ಈಗಿನ ಯುವಜನರು ಕೇವಲ ಮೋದಿಯನ್ನು ಹೊಗಳುತ್ತಿದ್ದಾರೆ. ಅವರನ್ನು ಪ್ರಶ್ನಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ” ಎಂದು ರೈತರು ಬೇಸರ ವ್ಯಕ್ತಪಡಿಸಿದರು ಎಂದರು.

ರೈತರು ನಿಜವಾಗಿಯೂ ಈ ಕಾಯ್ದೆಗಳ ಅಪಾಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಮಾಧ್ಯಮಗಳು ಮತ್ತು ಮೋದಿ ಸರ್ಕಾರದ ಬಗ್ಗೆ ಕೋಪಗೊಂಡಿದ್ದಾರೆ. ಪ್ರತಿ ಊರಿನಲ್ಲಿಯೂ ರೈತರು ನಮ್ಮನ್ನು ತಮ್ಮ ಮನೆಗೆ ತಿಂಡಿಗೆ, ಕಾಫಿಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರೈತರ ಪ್ರೀತಿ ನಮಗೆ ಸಿಕ್ಕಿದೆ. ಹಾಗೆಯೇ ರೈತರ ಸಂಕಷ್ಟಗಳನ್ನು ನಾವು ನಮ್ಮ ಎದೆಯೊಳಗೆ ಇಳಿಸಿಕೊಂಡಿದ್ದು, ಹೋರಾಟ ಮುಂದುವೆರೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ ಎಂದು ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಜಾಥಾದ ಯುವಜನರು ಕೃಷಿ ಕಾರ್ಯದಲ್ಲಿ ನಿರತ ರೈತರ ಜೊತೆ ಶ್ರಮದಾನದಲ್ಲಿ ಭಾಗವಹಿಸಿದ್ದರು. ಭತ್ತದ ಹೊರೆಕಟ್ಟಿ ಟ್ರಾಕ್ಟರ್‌ಗಳಿಗೆ ತುಂಬುವ ಕೆಲಸದಲ್ಲಿಯೂ ಸಹ ಯುವಜನರು ತೊಡಗಿಸಿಕೊಂಡಿದ್ದಾರೆ. ಮನೋಜ್, ಮಮತಾ, ರಾಜಶೇಖರ್ ಅಂಗಡಿ, ಪುಷ್ಪಲತಾ, ರಜಿನಿ, ಸಲೀಂ ಮುಂತಾದವರು ಜಾಥಾದಲ್ಲಿದ್ದಾರೆ.

ಹೈದರಾಬಾದ್ ಕರ್ನಾಟಕ ವರದಿ

ಹೈದರಾಬಾದ್ ಕರ್ನಾಟಕದಲ್ಲಿ ಈ ಮೂರು ದಿನದಲ್ಲಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ರೈತರು ನಮ್ಮ ನಮ್ಮ ಹಳ್ಳಿಗಳಿಗೆ ಬನ್ನಿ ಎಂದು ಕರೆಯುತ್ತಿದ್ದಾರೆ. ಈಗ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಕ್ವಿಂಟಾಲ್ ಭತ್ತಕ್ಕೆ ಕೆಲವೊಮ್ಮೆ 1500 ರಿಂದ 800ಕ್ಕೆ ಇಳಿದುಬಿಡುತ್ತದೆ. ಹಾಗಾಗಿ ಎಪಿಎಂಸಿ ಮಂಡಿಗಳು ಇರಬೇಕೆಂಬುದು ನಮ್ಮ ಒತ್ತಾಯ ಎಂದು ರೈತರು ತಿಳಿಸಿದ್ದಾರೆ ಎಂದು ದೇಶಪ್ರೇಮಿ ಯುವಾಂದೋಲನದ ಗುರುಬಸವ ನಾನುಗೌರಿ.ಕಾಂಗೆ ತಿಳಿಸಿದರು.

ಎಮ್ಮಿಗನೂರು, ನೆಲ್ಲುಡಿ_ಕೊಟ್ಟಾಲ್, ಕಂಪ್ಲಿ, ಕಂಪ್ಲಿ_ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಲಾಯಿತು. ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲಿನ ಜನರೊಂದಿಗೆ ಚರ್ಚೆಗಳು ನಡೆದವು. ದಾರಿ ಉದಕ್ಕೂ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು ಎಂದು ಅವರು ಮಾಹಿತಿ ನೀಡಿದರು.

ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.


ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ದೇಶಪ್ರೇಮಿ ಯುವಾಂದೋಲನ ಹೆಸರಿನಲ್ಲಿ ಹಳ್ಳಿಗಳಿಗೆ ಹೊರಟ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...