Homeಕರ್ನಾಟಕಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು...

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

- Advertisement -
- Advertisement -

ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಗುರುವಾರ ‘ಉದ್ಯೋಗ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮಾತನಾಡುತ್ತಿದ್ದರು.

“ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡುವುದು ಬಿಟ್ಟು ಉದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತಿದೆ. ಇರುವ 80% ಉದ್ಯೋಗಗಳು ಕೂಡಾ ಗುತ್ತಿಗೆ ಆಧಾರದ ಉದ್ಯೋಗಗಳಾಗಿದ್ದು, ಜೊತೆಗೆ ಸ್ಥಳೀಯರಿಗೆ ಉದ್ಯೊಗ ನೀಡುತ್ತಿಲ್ಲ. ಕೈಗಾರಿಕೆಗಳಲ್ಲಿ ಯುನಿಯನ್‌ಗಳ ಶಕ್ತಿ ಕೂಡಾ ಕಡಿಮೆ ಮಾಡಲಾಗಿದೆ. ಹೊಸ ಉದ್ಯೋಗಗಳಾದ ಸ್ವಿಗ್ಗಿ, ಜೊಮೆಟೊ ರೀತಿಯ ಉದ್ಯೋಗಗಳು ಸೃಷ್ಟಿಯಾದರೂ ವೇತನ ತೀರಾ ಕಡಿಮೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ದೊಡ್ಡ ಕಂಪೆನಿಗಳು ಮಾಡುವ ಚಿಲ್ಲರೆ ವ್ಯಾಪಾರದಿಂದಾಗಿ ಸ್ವಯಂ ಉದ್ಯೋಗಗಳು ಇಲ್ಲಾದಾಗಿದೆ. ಕಾರ್ಮಿಕ ಸಂಘಗಳು ಕಟ್ಟಲು ಅವಕಾಶವಿಲ್ಲ. ಯುವಜನರ ಇಡೀ ಜೀವನ ಅಭದ್ರತೆಯಲ್ಲಿ ಕಳಯುವಂತೆ ಆಗಿದೆ ಎಂದು ಅವರು ಹೇಳಿದರು.

“ದೊಡ್ಡ ಕಂಪೆನಿಗಳಲ್ಲಿ ಉದ್ಯೋಗ ಎಂಬ ಕಾರಣಕ್ಕೆ ಯುವಜನರಿಗೆ ಮದುವೆಯಾಗುತ್ತಿದೆ ಎಂಬ ಲಾಭವೊಂದನ್ನು ಬಿಟ್ಟು ಬೇರೇನೂ ಆಗುತ್ತಿಲ್ಲ. ಆದರೆ ಅವರ ವೇತನಗಳು 15 ಸಾವಿರ ಕೂಡಾ ಇರುವುದಿಲ್ಲ. ವಿಮಾನ ನಿಲ್ದಾಣ ಮತ್ತು ಬಂದರಿನಲ್ಲಿ ಕೆಲಸ ಮಾಡುವ ಯುವಜನರು ಅಲ್ಲಿ ಕೆಲಸ ಮಾಡಿ ಹೊರಗಡೆ ಕೂಡಾ ಹತ್ತು ಗಂಟೆಯ ವರೆಗೆ ಕೆಲಸ ಮಡುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಬಗ್ಗೆ ಯಾರು ಹೊಣೆ?” ಎಂದು ಮುನೀರ್ ಕಾಟಿಪಳ್ಳ ಅವರು ಕೇಳಿದರು.

“ಭೂಸ್ವಾಧಿನ ಮಾಡುವಾಗ ಎಸ್‌ಇಝೆಡ್ ಪರವಾಗಿ ಇದ್ದ ಬಜರಂಗದಳ, ಭಾವನಾತ್ಮಕ ವಿಚಾರದಲ್ಲಿ ಮಾತ್ರ ಪ್ರತಿಭಟನೆ ಮಾಡುತ್ತಿದೆ. ಭಾವನಾತ್ಮಕ ವಿಚಾರವಾಗಿ ಪ್ರತಿಭಟನೆ ಮಡುವವರು ಉದ್ಯೊಗದ ಬಗ್ಗೆ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮ ಎಂಬ ಅಫೀಮನ್ನು ನೀಡಲಾಗಿದೆ. ಉದ್ಯೋಗದ ಬಗ್ಗೆ ಮಾತಾನಾಡದ ಸೂಲಿಬೆಲೆ ಮುಸ್ಲಿಮರ ಹೆಣ್ಣುಗಳನ್ನು ಮದುವೆ ಆಗಿ ಎಂದು ದ್ವೆಷ ಭಾಷಣ ಮಾಡುತ್ತಿದ್ದಾರೆ” ಎಂದು ಹೇಳಿದರು.

“ವಿದೇಶಗಳಲ್ಲಿ ಉದ್ಯೋಗ ನಷ್ಟ ಹೊಂದಿದ ಯುವಕರಿಗೆ ಮರು ಜೀವನ ಕಟ್ಟಿಕೊಳ್ಳಲು ಸರ್ಕಾರ ನೆರವಾಗುತ್ತಿಲ್ಲ. ಕೇರಳದಲ್ಲಿ ಇಂತಹ ಯುವಕರಿಗೆ ಸರ್ಕಾರ ನೆರವು ನೀಡುತ್ತಿದೆ. ಬಜೆಟ್‌ನಲ್ಲಿ ಖಾಸಗಿ ಕಂಪೆನಿಗೆ ಸಾವಿರಾರು ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರ, ಅವರು ಎಷ್ಟು ಖಾಯಂ ಉದ್ಯೋಗ ಎಷ್ಟು ಕೊಡುತ್ತಿದ್ದಾರೆ? ಎಷ್ಟು ವೇತನ ನೀಡುತ್ತಾರೆ ಎಂಬ ಬಗ್ಗೆ ಹೇಳುವುದಿಲ್ಲ” ಎಂದು ಹೇಳಿದರು.

ಸಾರ್ವಜನಿಕ ಆರೋಗ್ಯದ ಬಗ್ಗೆ ಕಾಳಜಿಯಿಲ್ಲದ ಸರ್ಕಾರವನ್ನು ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕು: ಜನಪರ ವೈದ್ಯ ಡಾ. ಅನಿಲ್ ಕುಮಾರ್ ಅವುಲಪ್ಪ

ಕಾರ್ಯಕ್ರಮದಲ್ಲಿ ‘ಜನಾರೋಗ್ಯ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಮಾತನಾಡಿದ ಖ್ಯಾತ ಜನಪರ ವೈದ್ಯರಾದ ಡಾ. ಅನಿಲ್ ಕುಮಾರ್ ಅವುಲಪ್ಪ, ಸ್ವಾತಂತ್ಯ್ರ ಬಂದು 78 ವರ್ಷಗಳಾದರೂ ಸಹಜ ಪ್ರಕ್ರಿಯೆಯಾದ ಗರ್ಭದಾರಣೆಯ ಸಮಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

“ಸ್ವಾತಂತ್ರ ನಂತರ ಕೂಡಾ ಕಾಯಿಲೆಗೆ ಬಲಿಯಾಗುವುದು ಹೆಚ್ಚಾಗಿದೆ. 70 ದಶಕಗಳ ಹೊತ್ತಿಗೆ ಸಾಂಕ್ರಮಿಕ ಕಾಯಿಲೆಗೆ ಬಲಿಯಾಗುತ್ತಿದ್ದರೆ, 90ರ ನಂತರ ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾದರು. ಆದರೆ ಈಗ ಸಾಂಕ್ರಾಮಿಕ ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗೆ ಬಲಿಯಾಗುತ್ತಿದ್ದೇವೆ. ಬ್ರಿಟೀಷರ ಕಾಲದಿಂದಲೂ ಟಿಬಿ ಮುಕ್ತ ಎಂದು ಹೇಳುವ ನಾವು ಈಗಲೂ ಅದನ್ನೆ ಹೇಳುತ್ತಲೆ ಇದ್ದೇವೆ” ಎಂದು ಹೇಳಿದರು.

“ಇಂಡಿಯನ್ ಪಬ್ಲಿಕ್ ಹೆಲ್ತ್‌ ಸ್ಟಾಂಡರ್ಡ್‌ ಪ್ರಕಾರ ಆರೋಗ್ಯಕ್ಕೆ ಬಜೆಟ್‌ನ 8% ಮೀಸಲಿಡಬೇಕಿದೆ. ಆದರೆ ನಮ್ಮ ಸರ್ಕಾರ ಕೇವಲ 4% ಅಷ್ಟೆ ಇದೆ. ರಾಜ್ಯದ ಜಿಡಿಪಿಯಲ್ಲಿ 2.5%ರಷ್ಟು ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂದು ಅದೇ ನಿಯಮ ಹೇಳುತ್ತದೆ. ಆದರೆ ರಾಜ್ಯ ಸರ್ಕಾರ ಯಾವತ್ತೂ ಕೂಡಾ 0.6% ಕ್ಕಿ ಹೆಚ್ಚು ಖರ್ಚು ಮಾಡಿಲ್ಲ. ಕೇಂದ್ರೆ ಸರ್ಕಾರ ತನ್ನ ಭಾರತದ ಜಿಡಿಪಿಯಲ್ಲಿ 1.97% ಮಾತ್ರ ಖರ್ಚು ಮಾಡುತ್ತಿದೆ” ಎಂದು ಅವರು ಹೇಳಿದರು. ಅದಾನಿ ವಶದಲ್ಲಿರುವ

“ಮೂಲಭೂತವಾಗಿ ಜನರ ಆರೋಗ್ಯಕ್ಕಾಗಿ ವೈದ್ಯಕೀಯ ಸಂಸ್ಥೆಗಳು ಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ವಿಭಾಗಗಳಿವೆ. 2022ರ ವರೆಗೆ ರಾಜ್ಯದ ಗುಲ್ಬರ್ಗಾ ಹೊರತು ಪಡಿಸಿ ರಾಜ್ಯದ ಇತರ ಕಡೆಗಳಲ್ಲಿ ಹೆಚ್ಚೆ ಸಂಸ್ಥೆಗಳು ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಆರೋಗ್ಯ ಕೇಂದ್ರಗಳು ಹೆಚ್ಚಿದ್ದರೂ, ಸಮುದಾಯ ಕೇಂದ್ರಗಳು ರಾಜ್ಯದಾದ್ಯಂತ ಕಡಿಮೆಯಿವೆ. ಅದಾಗ್ಯೂ, ಈ ಎಲ್ಲಾ ಸಂಸ್ಥೆಗಳಿಗೆ ಬೇಕಾದ ಮಾನವ ಸಂಪನ್ಮೂಲಗಳು ಕಡಿಮೆಯಿದೆ.” ಎಂದು ಅವರು ಹೇಳಿದರು.

“ಹುದ್ದೆಗಳು ಖಾಲಿಯಿದ್ದರೂ ಅದಕ್ಕೆ ಸರ್ಕಾರ ನೇಮಿಸುತ್ತಿಲ್ಲ. ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬಜೆಟ್‌ನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ. ಸಾರ್ವಜನಿಕ ವೈದ್ಯಕೀಯ ಸಂಸ್ಥೆಗಳ ಹುದ್ದೆಗಳನ್ನು ಭರ್ತಿ ಮಾಡಲು ಬೇಕಾಗುವ ಅನುದಾನ ಘೋಷಿಸದ ಯಾವುದೇ ಸರ್ಕಾರ ಕಾರ್ಪೋರೇಟ್ ಪರವಾದ ಸರ್ಕಾರ ಎಂದೇ ಹೇಳಬೇಕಿದೆ” ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...